<p>ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಅಡಿಯಲ್ಲಿ ಬರುವ 21 ಇಲಾಖೆಗಳಲ್ಲಿಯೂ ಅಂಗವಿಕಲರಿಗೆ ಕಡ್ಡಾಯವಾಗಿ ಶೇ 3 ಅನುದಾನ ಮೀಸಲಿಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಿರ್ಮಿತಾ ಲೋಕೇಶ್ ತಾಕೀತು ಮಾಡಿದರು.<br /> <br /> ಪಟ್ಟಣದ ಶಿಕ್ಷಕರ ಭವನದಲ್ಲಿ ಸೋಮವಾರ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಅಂಗವಿಕಲ ಮಕ್ಕಳಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> 2011-12ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ಅಂಗವಿಕಲರಿಗೆ ಶೇ 3 ಅನುದಾನ ನೀಡಲಾಗಿದೆ. 2012- 13ನೇ ಸಾಲಿನಲ್ಲಿ ಕೂಡ ನೆರವು ಒದಗಿಸಲಾಗುತ್ತದೆ. ಗ್ರಾಮ ಪಂಚಾಯಿತಿಗಳು ಕೂಡ ಅಂಗವಿಕಲರಿಗೆ ಅನುದಾನ ಮೀಸಲಿಡಬೇಕು. ಸರ್ಕಾರದ ಸವಲತ್ತುಗಳನ್ನು ವಿತರಿಸುವಾಗ ಅಂಗವಿಕಲರಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.<br /> <br /> ಶಿಬಿರದಲ್ಲಿ 150 ಮಕ್ಕಳ ಆರೋಗ್ಯ ತಪಾಸಣೆ ನಡೆಯಿತು. ಬೆಂಗಳೂರಿನ ಸ್ಕಂದ ಸಂಸ್ಥೆಯ ವೈದ್ಯರು ತಪಾಸಣೆ ನಡೆಸಿ ಪೋಷಕರು ಹಾಗೂ ಶಿಕ್ಷಕರಿಗೆ ಸಲಹೆ ನೀಡಿದರು. 11 ಕಲಿಕಾ ಕಿಟ್, 4 ವೀಲ್ಚೇರ್, 7 ಶ್ರವಣ ಸಾಧನ, ಸಿಪಿ ಸ್ಟ್ಯಾಂಡ್, ಟ್ರೈಸೈಕಲ್ ಇತರ ಪರಿಕರಗಳನ್ನು ವಿತರಿಸಲಾಯಿತು. <br /> <br /> ಶಿಕ್ಷಕ ಶಿಕ್ಷಕೇತರರ ಸಂಘದ ಅಧ್ಯಕ್ಷ ಎನ್.ಕೆ.ನಂಜಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಮಹದೇವಸ್ವಾಮಿ, ಸಿ.ಜೆ.ಶ್ರೀನಿವಾಸ್ ಮಾತನಾಡಿದರು. <br /> <br /> ಸಿದ್ದಲಿಂಗು, ಶಿಕ್ಷಣ ಸಮನ್ವಯಾಧಿಕಾರಿ ಮಹೇಶ್, ಸಯ್ಯದ್ಖಾನ್ಬಾಬು, ಸಹದೇವಪ್ಪ, ತೋಟಪ್ಪ, ಉಮಾಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ತಾಲ್ಲೂಕು ಪಂಚಾಯಿತಿ ಅಡಿಯಲ್ಲಿ ಬರುವ 21 ಇಲಾಖೆಗಳಲ್ಲಿಯೂ ಅಂಗವಿಕಲರಿಗೆ ಕಡ್ಡಾಯವಾಗಿ ಶೇ 3 ಅನುದಾನ ಮೀಸಲಿಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಿರ್ಮಿತಾ ಲೋಕೇಶ್ ತಾಕೀತು ಮಾಡಿದರು.<br /> <br /> ಪಟ್ಟಣದ ಶಿಕ್ಷಕರ ಭವನದಲ್ಲಿ ಸೋಮವಾರ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಅಂಗವಿಕಲ ಮಕ್ಕಳಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. <br /> <br /> 2011-12ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯಿತಿ ಅನುದಾನದಲ್ಲಿ ಅಂಗವಿಕಲರಿಗೆ ಶೇ 3 ಅನುದಾನ ನೀಡಲಾಗಿದೆ. 2012- 13ನೇ ಸಾಲಿನಲ್ಲಿ ಕೂಡ ನೆರವು ಒದಗಿಸಲಾಗುತ್ತದೆ. ಗ್ರಾಮ ಪಂಚಾಯಿತಿಗಳು ಕೂಡ ಅಂಗವಿಕಲರಿಗೆ ಅನುದಾನ ಮೀಸಲಿಡಬೇಕು. ಸರ್ಕಾರದ ಸವಲತ್ತುಗಳನ್ನು ವಿತರಿಸುವಾಗ ಅಂಗವಿಕಲರಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.<br /> <br /> ಶಿಬಿರದಲ್ಲಿ 150 ಮಕ್ಕಳ ಆರೋಗ್ಯ ತಪಾಸಣೆ ನಡೆಯಿತು. ಬೆಂಗಳೂರಿನ ಸ್ಕಂದ ಸಂಸ್ಥೆಯ ವೈದ್ಯರು ತಪಾಸಣೆ ನಡೆಸಿ ಪೋಷಕರು ಹಾಗೂ ಶಿಕ್ಷಕರಿಗೆ ಸಲಹೆ ನೀಡಿದರು. 11 ಕಲಿಕಾ ಕಿಟ್, 4 ವೀಲ್ಚೇರ್, 7 ಶ್ರವಣ ಸಾಧನ, ಸಿಪಿ ಸ್ಟ್ಯಾಂಡ್, ಟ್ರೈಸೈಕಲ್ ಇತರ ಪರಿಕರಗಳನ್ನು ವಿತರಿಸಲಾಯಿತು. <br /> <br /> ಶಿಕ್ಷಕ ಶಿಕ್ಷಕೇತರರ ಸಂಘದ ಅಧ್ಯಕ್ಷ ಎನ್.ಕೆ.ನಂಜಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಮಹದೇವಸ್ವಾಮಿ, ಸಿ.ಜೆ.ಶ್ರೀನಿವಾಸ್ ಮಾತನಾಡಿದರು. <br /> <br /> ಸಿದ್ದಲಿಂಗು, ಶಿಕ್ಷಣ ಸಮನ್ವಯಾಧಿಕಾರಿ ಮಹೇಶ್, ಸಯ್ಯದ್ಖಾನ್ಬಾಬು, ಸಹದೇವಪ್ಪ, ತೋಟಪ್ಪ, ಉಮಾಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>