<p><strong>ಬೆಂಗಳೂರು:</strong> ಸ್ನಾತಕೋತ್ತರ ವೈದ್ಯಕೀಯ/ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸುವ ಕೌನ್ಸೆಲಿಂಗ್ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಬುಧವಾರ ತೆರವುಗೊಳಿಸಿದೆ. ಇದರಿಂದ ಮುಂದಿನ ತಿಂಗಳು ನಡೆಸಲು ಉದ್ದೇಶಿಸಿರುವ ಕೌನ್ಸೆಲಿಂಗ್ಗೆ ಹಾದಿ ಸುಗಮವಾಗಿದೆ.</p>.<p>ತಮಗೆ ಕಾನೂನಿನ ಅನ್ವಯ ಮೀಸಲಾತಿ ನೀಡದೆ ಕೌನ್ಸೆಲಿಂಗ್ ನಡೆಸುತ್ತಿರುವುದನ್ನು ಪ್ರಶ್ನಿಸಿ ಅಂಗವಿಕಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ ಕೌನ್ಸೆಲಿಂಗ್ಗೆ ಈ ಹಿಂದೆ ಹೈಕೋರ್ಟ್ ತಡೆ ನೀಡಿತ್ತು.</p>.<p>ಈಗ ಅಂಗವಿಕಲರಿಗೆ ಕೆಲವೊಂದು ವಿಭಾಗಗಳಲ್ಲಿ ಶೇ 3ರಷ್ಟು ಮೀಸಲಾತಿ ನೀಡಲು ಸರ್ಕಾರ ಒಪ್ಪಿದೆ. ಈ ಕುರಿತು ಹೈಕೋರ್ಟ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಉಸ್ತುವಾರಿ ನಿರ್ದೇಶಕ ಜಿ.ಎಸ್.ವೆಂಕಟೇಶ್ ಪ್ರಮಾಣ ಪತ್ರ ಸಲ್ಲಿಸ್ದ್ದಿದಾರೆ.</p>.<p>`ಕ್ಲಿನಿಕಲ್ ವಿಭಾಗದ ಅಡಿಯಲ್ಲಿ ಬರುವ ಚರ್ಮ ಹಾಗೂ ಲೈಂಗಿಕ ರೋಗಗಳ ವಿಭಾಗ, ರೇಡಿಯೋಥೆರಪಿ, ಶಿಶುವೈದ್ಯ ವಿಜ್ಞಾನ, ವೈದ್ಯ ವಿಜ್ಞಾನ, ಕ್ಷ-ಕಿರಣ, ಮನೋರೋಗ ವಿಭಾಗ, ಕ್ಷಯ ಹಾಗೂ ಎದೆರೋಗ ವಿಭಾಗಗಳಲ್ಲಿ ಸೀಟುಗಳನ್ನು ನೀಡಲು ಇದೇ 18ರಂದು ನಡೆದ ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯಸ್ಥರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಉಳಿದ ಕೆಲವು ವಿಭಾಗಗಳಲ್ಲಿ ಅಂಗವಿಕಲರು ಕೆಲಸ ನಿರ್ವಹಿಸಲು ಸಾಧ್ಯವಾಗದ ಕಾರಣ, ಅವರಿಗೆ ಮೀಸಲಾತಿ ನೀಡಲಾಗದು~ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ. ಈ ಪ್ರಕಾರ ನಡೆದುಕೊಳ್ಳಲು ಆದೇಶಿಸಿದ ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ಅವರು ತಡೆಯಾಜ್ಞೆಯನ್ನು ತೆರವುಗೊಳಿಸಿದರು.</p>.<p><strong>ಅವ್ಯವಹಾರ: ತನಿಖೆಗೆ ತಡೆ</strong></p>.<p>ಬಿಎಂಎಸ್ ಶೈಕ್ಷಣಿಕ ಟ್ರಸ್ಟ್ನಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಬುಧವಾರ ತಡೆ ನೀಡಿದೆ.</p>.<p>ವಿಶೇಷ ಕೋರ್ಟ್ ಆದೇಶದ ನಂತರ ನಡೆಯಲಿರುವ ಮುಂದಿನ ಎಲ್ಲ ಪ್ರಕ್ರಿಯೆಗಳಿಗೂ ತಡೆ ನೀಡಿ ನ್ಯಾಯಮೂರ್ತಿ ಎಚ್.ಎಸ್.ಕೆಂಪಣ್ಣ ಆದೇಶಿಸಿದ್ದಾರೆ.</p>.<p>ಚಾಮರಾಜಪೇಟೆ ನಿವಾಸಿ ಎನ್.ವೆಂಕಟೇಶಯ್ಯ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿದ್ದ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಟ್ರಸ್ಟ್ನ ಅಧ್ಯಕ್ಷರಾದ ಆಚಾರ್ಯ ಅವ್ಯವಹಾರ ನಡೆಸಿದ್ದಾರೆ ಎನ್ನುವುದು ವೆಂಕಟೇಶಯ್ಯನವರ ಆರೋಪ.</p>.<p>`ಟ್ರಸ್ಟ್ ವಿರುದ್ಧ ಆದೇಶ ಹೊರಡಿಸುವ ಅಧಿಕಾರ ವಿಶೇಷ ಕೋರ್ಟ್ ವ್ಯಾಪ್ತಿಗೆ ಒಳಪಡುವುದಿಲ್ಲ. ಅಷ್ಟೇ ಅಲ್ಲದೇ ಈ ಟ್ರಸ್ಟ್ ಅಧ್ಯಕ್ಷ ಸ್ಥಾನ ಸಾರ್ವಜನಿಕ ಸೇವೆಗೆ ಒಳಪಡುವುದಿಲ್ಲ ಎಂಬ ಆಚಾರ್ಯ ಅವರ ವಾದವನ್ನು ಕೋರ್ಟ್ ಮಾನ್ಯ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸ್ನಾತಕೋತ್ತರ ವೈದ್ಯಕೀಯ/ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸುವ ಕೌನ್ಸೆಲಿಂಗ್ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ಬುಧವಾರ ತೆರವುಗೊಳಿಸಿದೆ. ಇದರಿಂದ ಮುಂದಿನ ತಿಂಗಳು ನಡೆಸಲು ಉದ್ದೇಶಿಸಿರುವ ಕೌನ್ಸೆಲಿಂಗ್ಗೆ ಹಾದಿ ಸುಗಮವಾಗಿದೆ.</p>.<p>ತಮಗೆ ಕಾನೂನಿನ ಅನ್ವಯ ಮೀಸಲಾತಿ ನೀಡದೆ ಕೌನ್ಸೆಲಿಂಗ್ ನಡೆಸುತ್ತಿರುವುದನ್ನು ಪ್ರಶ್ನಿಸಿ ಅಂಗವಿಕಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ ಕೌನ್ಸೆಲಿಂಗ್ಗೆ ಈ ಹಿಂದೆ ಹೈಕೋರ್ಟ್ ತಡೆ ನೀಡಿತ್ತು.</p>.<p>ಈಗ ಅಂಗವಿಕಲರಿಗೆ ಕೆಲವೊಂದು ವಿಭಾಗಗಳಲ್ಲಿ ಶೇ 3ರಷ್ಟು ಮೀಸಲಾತಿ ನೀಡಲು ಸರ್ಕಾರ ಒಪ್ಪಿದೆ. ಈ ಕುರಿತು ಹೈಕೋರ್ಟ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಉಸ್ತುವಾರಿ ನಿರ್ದೇಶಕ ಜಿ.ಎಸ್.ವೆಂಕಟೇಶ್ ಪ್ರಮಾಣ ಪತ್ರ ಸಲ್ಲಿಸ್ದ್ದಿದಾರೆ.</p>.<p>`ಕ್ಲಿನಿಕಲ್ ವಿಭಾಗದ ಅಡಿಯಲ್ಲಿ ಬರುವ ಚರ್ಮ ಹಾಗೂ ಲೈಂಗಿಕ ರೋಗಗಳ ವಿಭಾಗ, ರೇಡಿಯೋಥೆರಪಿ, ಶಿಶುವೈದ್ಯ ವಿಜ್ಞಾನ, ವೈದ್ಯ ವಿಜ್ಞಾನ, ಕ್ಷ-ಕಿರಣ, ಮನೋರೋಗ ವಿಭಾಗ, ಕ್ಷಯ ಹಾಗೂ ಎದೆರೋಗ ವಿಭಾಗಗಳಲ್ಲಿ ಸೀಟುಗಳನ್ನು ನೀಡಲು ಇದೇ 18ರಂದು ನಡೆದ ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯಸ್ಥರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಉಳಿದ ಕೆಲವು ವಿಭಾಗಗಳಲ್ಲಿ ಅಂಗವಿಕಲರು ಕೆಲಸ ನಿರ್ವಹಿಸಲು ಸಾಧ್ಯವಾಗದ ಕಾರಣ, ಅವರಿಗೆ ಮೀಸಲಾತಿ ನೀಡಲಾಗದು~ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ. ಈ ಪ್ರಕಾರ ನಡೆದುಕೊಳ್ಳಲು ಆದೇಶಿಸಿದ ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ಅವರು ತಡೆಯಾಜ್ಞೆಯನ್ನು ತೆರವುಗೊಳಿಸಿದರು.</p>.<p><strong>ಅವ್ಯವಹಾರ: ತನಿಖೆಗೆ ತಡೆ</strong></p>.<p>ಬಿಎಂಎಸ್ ಶೈಕ್ಷಣಿಕ ಟ್ರಸ್ಟ್ನಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಬುಧವಾರ ತಡೆ ನೀಡಿದೆ.</p>.<p>ವಿಶೇಷ ಕೋರ್ಟ್ ಆದೇಶದ ನಂತರ ನಡೆಯಲಿರುವ ಮುಂದಿನ ಎಲ್ಲ ಪ್ರಕ್ರಿಯೆಗಳಿಗೂ ತಡೆ ನೀಡಿ ನ್ಯಾಯಮೂರ್ತಿ ಎಚ್.ಎಸ್.ಕೆಂಪಣ್ಣ ಆದೇಶಿಸಿದ್ದಾರೆ.</p>.<p>ಚಾಮರಾಜಪೇಟೆ ನಿವಾಸಿ ಎನ್.ವೆಂಕಟೇಶಯ್ಯ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿದ್ದ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಟ್ರಸ್ಟ್ನ ಅಧ್ಯಕ್ಷರಾದ ಆಚಾರ್ಯ ಅವ್ಯವಹಾರ ನಡೆಸಿದ್ದಾರೆ ಎನ್ನುವುದು ವೆಂಕಟೇಶಯ್ಯನವರ ಆರೋಪ.</p>.<p>`ಟ್ರಸ್ಟ್ ವಿರುದ್ಧ ಆದೇಶ ಹೊರಡಿಸುವ ಅಧಿಕಾರ ವಿಶೇಷ ಕೋರ್ಟ್ ವ್ಯಾಪ್ತಿಗೆ ಒಳಪಡುವುದಿಲ್ಲ. ಅಷ್ಟೇ ಅಲ್ಲದೇ ಈ ಟ್ರಸ್ಟ್ ಅಧ್ಯಕ್ಷ ಸ್ಥಾನ ಸಾರ್ವಜನಿಕ ಸೇವೆಗೆ ಒಳಪಡುವುದಿಲ್ಲ ಎಂಬ ಆಚಾರ್ಯ ಅವರ ವಾದವನ್ನು ಕೋರ್ಟ್ ಮಾನ್ಯ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>