<p>ಧಾರವಾಡ: `ರಾಜ್ಯದಲ್ಲೇ ಅತಿ ದೊಡ್ಡದಾದ ಟ್ರಕ್ ಟರ್ಮಿನಲ್ ಹುಬ್ಬಳ್ಳಿ ತಾಲ್ಲೂಕಿನ ಅಂಚಟಗೇರಿ ಗ್ರಾಮದ ಬಳಿ ನಿರ್ಮಾಣವಾಗಲಿದ್ದು, ಯೋಜನೆ ಅನುಷ್ಠಾನಕ್ಕೆ 60 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದೆ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಂಗಳವಾರ ತಿಳಿಸಿದರು. <br /> <br /> ಇಲ್ಲಿಗೆ ಸಮೀಪದ ಬೇಲೂರು ಕೈಗಾರಿಕಾ ಕೇಂದ್ರದ ಬಳಿ ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ 7.82 ಕೋಟಿ ರೂಪಾಯಿ ವೆಚ್ಚದಲ್ಲಿ 7.26 ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಟ್ರಕ್ ಟರ್ಮಿನಲ್ ಉದ್ಘಾಟಿಸಿ ಮಾತನಾಡಿದ ಅವರು, `ಅಂಚಟಗೇರಿಯಲ್ಲಿ ನೂತನ ಟರ್ಮಿನಲ್ ನಿರ್ಮಿಸುವ ಸಂಬಂಧ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದು, ಡಿಸೆಂಬರ್ 10ರ ಒಳಗಾಗಿ ಕಾಮಗಾರಿಗೆ ಚಾಲನೆ ನೀಡಲಾಗುವುದು. <br /> <br /> ಮುಂದಿನ ಎರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ~ ಎಂದು ವಿಶ್ವಾಸ ವ್ಯಕ್ತಪಡಿಸಿದರು. <br /> <br /> `ಈಗಾಗಲೇ ಮೈಸೂರಿನಲ್ಲಿ 16 ಎಕರೆ ಹಾಗೂ ಬೆಂಗಳೂರಿನ ಯಶವಂತಪುರದಲ್ಲಿ 39 ಎಕರೆ ವಿಸ್ತಾರದಲ್ಲಿ ಎರಡು ಟರ್ಮಿನಲ್ಗಳು ನಿರ್ಮಾಣವಾಗಿವೆ. ಇಂತಹ ಟರ್ಮಿನಲ್ಗಳಿಂದ ಲಾರಿಗಳು ಹಗಲು ಹೊತ್ತಿನಲ್ಲಿ ನಗರ ಪ್ರವೇಶಿಸುವುದನ್ನು ನಿಯಂತ್ರಿಸಿ, ಅಪಘಾತಗಳನ್ನು ತಡೆಗಟ್ಟಬಹುದಾಗಿದೆ~ ಎಂದರು.<br /> <br /> ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಅಧ್ಯಕ್ಷ, ಶಾಸಕ ಎಂ.ಸತೀಶ ರೆಡ್ಡಿ ಮಾತನಾಡಿ, ~ಈ ಟರ್ಮಿನಲ್ನಲ್ಲಿ ಕೇವಲ ರೂ 20 ಶುಲ್ಕದಲ್ಲಿ ಲಾರಿ, ಚಾಲಕರು ಹಾಗೂ ಕ್ಲೀನರ್ಗಳಿಗೆ ಉಳಿದುಕೊಳ್ಳಲು ವ್ಯವಸ್ಥೆ, ಸ್ನಾನ, ಶೌಚಾಲಯ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಬೇಲೂರು ಹಾಗೂ ಅಂಚಟಗೇರಿ ಬಳಿಯ ಟರ್ಮಿನಲ್ಗಳಿಂದ ಅವಳಿ ನಗರದಲ್ಲಿ ಲಾರಿಗಳ ದಟ್ಟಣೆ ನಿಯಂತ್ರಣಕ್ಕೆ ಬರಲಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: `ರಾಜ್ಯದಲ್ಲೇ ಅತಿ ದೊಡ್ಡದಾದ ಟ್ರಕ್ ಟರ್ಮಿನಲ್ ಹುಬ್ಬಳ್ಳಿ ತಾಲ್ಲೂಕಿನ ಅಂಚಟಗೇರಿ ಗ್ರಾಮದ ಬಳಿ ನಿರ್ಮಾಣವಾಗಲಿದ್ದು, ಯೋಜನೆ ಅನುಷ್ಠಾನಕ್ಕೆ 60 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದೆ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಂಗಳವಾರ ತಿಳಿಸಿದರು. <br /> <br /> ಇಲ್ಲಿಗೆ ಸಮೀಪದ ಬೇಲೂರು ಕೈಗಾರಿಕಾ ಕೇಂದ್ರದ ಬಳಿ ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ 7.82 ಕೋಟಿ ರೂಪಾಯಿ ವೆಚ್ಚದಲ್ಲಿ 7.26 ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಟ್ರಕ್ ಟರ್ಮಿನಲ್ ಉದ್ಘಾಟಿಸಿ ಮಾತನಾಡಿದ ಅವರು, `ಅಂಚಟಗೇರಿಯಲ್ಲಿ ನೂತನ ಟರ್ಮಿನಲ್ ನಿರ್ಮಿಸುವ ಸಂಬಂಧ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದು, ಡಿಸೆಂಬರ್ 10ರ ಒಳಗಾಗಿ ಕಾಮಗಾರಿಗೆ ಚಾಲನೆ ನೀಡಲಾಗುವುದು. <br /> <br /> ಮುಂದಿನ ಎರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ~ ಎಂದು ವಿಶ್ವಾಸ ವ್ಯಕ್ತಪಡಿಸಿದರು. <br /> <br /> `ಈಗಾಗಲೇ ಮೈಸೂರಿನಲ್ಲಿ 16 ಎಕರೆ ಹಾಗೂ ಬೆಂಗಳೂರಿನ ಯಶವಂತಪುರದಲ್ಲಿ 39 ಎಕರೆ ವಿಸ್ತಾರದಲ್ಲಿ ಎರಡು ಟರ್ಮಿನಲ್ಗಳು ನಿರ್ಮಾಣವಾಗಿವೆ. ಇಂತಹ ಟರ್ಮಿನಲ್ಗಳಿಂದ ಲಾರಿಗಳು ಹಗಲು ಹೊತ್ತಿನಲ್ಲಿ ನಗರ ಪ್ರವೇಶಿಸುವುದನ್ನು ನಿಯಂತ್ರಿಸಿ, ಅಪಘಾತಗಳನ್ನು ತಡೆಗಟ್ಟಬಹುದಾಗಿದೆ~ ಎಂದರು.<br /> <br /> ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಅಧ್ಯಕ್ಷ, ಶಾಸಕ ಎಂ.ಸತೀಶ ರೆಡ್ಡಿ ಮಾತನಾಡಿ, ~ಈ ಟರ್ಮಿನಲ್ನಲ್ಲಿ ಕೇವಲ ರೂ 20 ಶುಲ್ಕದಲ್ಲಿ ಲಾರಿ, ಚಾಲಕರು ಹಾಗೂ ಕ್ಲೀನರ್ಗಳಿಗೆ ಉಳಿದುಕೊಳ್ಳಲು ವ್ಯವಸ್ಥೆ, ಸ್ನಾನ, ಶೌಚಾಲಯ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಬೇಲೂರು ಹಾಗೂ ಅಂಚಟಗೇರಿ ಬಳಿಯ ಟರ್ಮಿನಲ್ಗಳಿಂದ ಅವಳಿ ನಗರದಲ್ಲಿ ಲಾರಿಗಳ ದಟ್ಟಣೆ ನಿಯಂತ್ರಣಕ್ಕೆ ಬರಲಿದೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>