<p><strong>ಬೆಂಗಳೂರು:</strong> ಎಸ್-ಬ್ಯಾಂಡ್ ತರಂಗಾಂತರ ಹಂಚಿಕೆಗೆ ಸಂಬಂಧಿಸಿದಂತೆ ಅಂತರಿಕ್ಷ್-ದೇವಾಸ್ ಕಂಪೆನಿಗಳ ನಡುವೆ ಆಗಿದ್ದ ಒಪ್ಪಂದ ಕುರಿತು ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಆರೋಪಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಆಯ್ಕೆಗಳನ್ನೂ ಜಾರಿ ನಿರ್ದೇಶನಾಲಯ (ಇ.ಡಿ) ಮುಕ್ತವಾಗಿರಿಸಿದೆ.</p>.<p>`ಒಪ್ಪಂದ ಕುರಿತು ತನಿಖೆ ನಡೆಸುವ ನಿಟ್ಟಿನಿಂದ ಬೆಂಗಳೂರು ಶಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಎರಡರಿಂದ ಮೂರು ತಿಂಗಳಲ್ಲಿ ತನಿಖಾ ವರದಿ ಸಿದ್ಧವಾಗಲಿದೆ~ ಎಂದು ನವದೆಹಲಿಯಿಂದ ದೂರವಾಣಿ ಮೂಲಕ `ಪ್ರಜಾವಾಣಿ~ ಜೊತೆ ಮಾತನಾಡಿದ ಇ.ಡಿ. ಅಧಿಕಾರಿಗಳು ತಿಳಿಸಿದರು.</p>.<p>ಅಂತರಿಕ್ಷ್ ಕಂಪೆನಿಯು ಬೆಂಗಳೂರಿನಲ್ಲಿ ನೋಂದಾಯಿಸಿಕೊಂಡಿರುವುದು ಮತ್ತು ಒಪ್ಪಂದದ ಕುರಿತು ತನಿಖೆ ನಡೆಸಿರುವ ಸಮಿತಿಗಳು ದೋಷಾರೋಪಣೆ ಮಾಡಿರುವ ವಿಜ್ಞಾನಿಗಳು ಬೆಂಗಳೂರು ನಿವಾಸಿಗಳಾಗಿರುವ ಕಾರಣ, ಇಲ್ಲಿನ ಶಾಖೆಯಿಂದ ತನಿಖೆ ನಡೆಸಲು ಇ.ಡಿ. ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.</p>.<p>`ತನಿಖೆ ಈಗ ಆರಂಭಿಕ ಹಂತದಲ್ಲಿದೆ. ಯಾವುದೇ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮುನ್ನ, ಈ ಒಪ್ಪಂದದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ವ್ಯಕ್ತಿಗಳ ನಡುವೆ ಆಗಿರುವ ಕೊಡು-ಕೊಳ್ಳುವ ವ್ಯವಹಾರದ ಬಗ್ಗೆ ತನಿಖೆ ಆಗಬೇಕು~ ಎಂದು ಅಧಿಕಾರಿಗಳು ತಿಳಿಸಿದರು.</p>.<p>ವಿವಾದಿತ ಒಪ್ಪಂದ ಕುರಿತು ತನಿಖೆ ನಡೆಸಿರುವ ಎರಡು ಸಮಿತಿಗಳಿಂದ ದೋಷಾರೋಪಣೆಗೆ ಒಳಗಾಗಿರುವ ವಿಜ್ಞಾನಿಗಳ ವಿರುದ್ಧ ಕಾನೂನು ಕ್ರಮ ಜಾರಿಯಾಗಿಲ್ಲದಿದ್ದರೂ, ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆಯ ಅನ್ವಯ ತನಿಖೆ ನಡೆಸಲು ಇ.ಡಿ.ಗೆ ಅಧಿಕಾರ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ದೇವಾಸ್ ಕಂಪೆನಿಯ ವಿಶ್ವಾಸಾರ್ಹತೆಯನ್ನು ತನಿಖೆಗೆ ಒಳಪಡಿಸುವುದರ ಜೊತೆಗೇ, ಒಪ್ಪಂದದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾಜಿ ಅಧ್ಯಕ್ಷ ಜಿ. ಮಾಧವನ್ ನಾಯರ್ ಸೇರಿದಂತೆ ನಾಲ್ವರು ವಿಜ್ಞಾನಿಗಳ ಪಾತ್ರದ ಕುರಿತೂ ತನಿಖೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಸ್-ಬ್ಯಾಂಡ್ ತರಂಗಾಂತರ ಹಂಚಿಕೆಗೆ ಸಂಬಂಧಿಸಿದಂತೆ ಅಂತರಿಕ್ಷ್-ದೇವಾಸ್ ಕಂಪೆನಿಗಳ ನಡುವೆ ಆಗಿದ್ದ ಒಪ್ಪಂದ ಕುರಿತು ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಆರೋಪಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಆಯ್ಕೆಗಳನ್ನೂ ಜಾರಿ ನಿರ್ದೇಶನಾಲಯ (ಇ.ಡಿ) ಮುಕ್ತವಾಗಿರಿಸಿದೆ.</p>.<p>`ಒಪ್ಪಂದ ಕುರಿತು ತನಿಖೆ ನಡೆಸುವ ನಿಟ್ಟಿನಿಂದ ಬೆಂಗಳೂರು ಶಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಎರಡರಿಂದ ಮೂರು ತಿಂಗಳಲ್ಲಿ ತನಿಖಾ ವರದಿ ಸಿದ್ಧವಾಗಲಿದೆ~ ಎಂದು ನವದೆಹಲಿಯಿಂದ ದೂರವಾಣಿ ಮೂಲಕ `ಪ್ರಜಾವಾಣಿ~ ಜೊತೆ ಮಾತನಾಡಿದ ಇ.ಡಿ. ಅಧಿಕಾರಿಗಳು ತಿಳಿಸಿದರು.</p>.<p>ಅಂತರಿಕ್ಷ್ ಕಂಪೆನಿಯು ಬೆಂಗಳೂರಿನಲ್ಲಿ ನೋಂದಾಯಿಸಿಕೊಂಡಿರುವುದು ಮತ್ತು ಒಪ್ಪಂದದ ಕುರಿತು ತನಿಖೆ ನಡೆಸಿರುವ ಸಮಿತಿಗಳು ದೋಷಾರೋಪಣೆ ಮಾಡಿರುವ ವಿಜ್ಞಾನಿಗಳು ಬೆಂಗಳೂರು ನಿವಾಸಿಗಳಾಗಿರುವ ಕಾರಣ, ಇಲ್ಲಿನ ಶಾಖೆಯಿಂದ ತನಿಖೆ ನಡೆಸಲು ಇ.ಡಿ. ಅಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.</p>.<p>`ತನಿಖೆ ಈಗ ಆರಂಭಿಕ ಹಂತದಲ್ಲಿದೆ. ಯಾವುದೇ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಮುನ್ನ, ಈ ಒಪ್ಪಂದದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ವ್ಯಕ್ತಿಗಳ ನಡುವೆ ಆಗಿರುವ ಕೊಡು-ಕೊಳ್ಳುವ ವ್ಯವಹಾರದ ಬಗ್ಗೆ ತನಿಖೆ ಆಗಬೇಕು~ ಎಂದು ಅಧಿಕಾರಿಗಳು ತಿಳಿಸಿದರು.</p>.<p>ವಿವಾದಿತ ಒಪ್ಪಂದ ಕುರಿತು ತನಿಖೆ ನಡೆಸಿರುವ ಎರಡು ಸಮಿತಿಗಳಿಂದ ದೋಷಾರೋಪಣೆಗೆ ಒಳಗಾಗಿರುವ ವಿಜ್ಞಾನಿಗಳ ವಿರುದ್ಧ ಕಾನೂನು ಕ್ರಮ ಜಾರಿಯಾಗಿಲ್ಲದಿದ್ದರೂ, ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆಯ ಅನ್ವಯ ತನಿಖೆ ನಡೆಸಲು ಇ.ಡಿ.ಗೆ ಅಧಿಕಾರ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ದೇವಾಸ್ ಕಂಪೆನಿಯ ವಿಶ್ವಾಸಾರ್ಹತೆಯನ್ನು ತನಿಖೆಗೆ ಒಳಪಡಿಸುವುದರ ಜೊತೆಗೇ, ಒಪ್ಪಂದದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾಜಿ ಅಧ್ಯಕ್ಷ ಜಿ. ಮಾಧವನ್ ನಾಯರ್ ಸೇರಿದಂತೆ ನಾಲ್ವರು ವಿಜ್ಞಾನಿಗಳ ಪಾತ್ರದ ಕುರಿತೂ ತನಿಖೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>