<p>ಬೆಂಗಳೂರು: ‘ಅಂತರ್ಜಲದ ಮೇಲಿನ ಅವಲಂಬನೆಯನ್ನು ಕ್ರಮೇಣ ಕಡಿಮೆ ಮಾಡುವುದೇ ಜಲಸಂರಕ್ಷಣೆಗೆ ಇರುವ ಮಾರ್ಗ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅಭಿಪ್ರಾಯಪಟ್ಟರು.<br /> <br /> ಕೇಂದ್ರೀಯ ಅಂತರ್ಜಲ ಮಂಡಳಿಯು ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಜಲ ಸಂರಕ್ಷಣೆ– ಹಿನ್ನೋಟ ಮತ್ತು ಮುನ್ನೋಟ’ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> ‘ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೀಡಲಾಗುವ ಅನುದಾನವು ನೀರು ಸಂಗ್ರಹಿಸಿಡುವ ಕೃತಕ ಟ್ಯಾಂಕ್ಗಳ ನಿರ್ಮಾಣ ಸೇರಿದಂತೆ ನೀರಿನ ಸಂರಕ್ಷಣೆಗೆ ಬಳಕೆಯಾಗುತ್ತಿದೆ. ಈವರೆಗೆ ಸುಮಾರು ₨1 ಸಾವಿರ ಕೋಟಿಯನ್ನು ಈ ಯೋಜನೆಗೆ ಬಳಸಲಾಗಿದೆ’ ಎಂದು ಹೇಳಿದರು.<br /> <br /> ‘ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗದ ಹಲವೆಡೆ ನೀರಿನ ಸಮಸ್ಯೆಯು ತೀವ್ರವಾಗಿದ್ದು, ಸಾಮಾನ್ಯ ಜನರು ಎಚ್ಚೆತ್ತುಕೊಳ್ಳದೇ ಇದ್ದರೆ ಸಮಸ್ಯೆ ಪರಿಹಾರ ಕಾಣಲು ಸಾಧ್ಯವಿಲ್ಲ’ ಎಂದು ತಿಳಿಸಿದರು.<br /> <br /> ಜಿಯೋಲಾಜಿಕಲ್ ಸೊಸೈಟಿ ಆಫ್ ಇಂಡಿಯಾದ ಕಾರ್ಯದರ್ಶಿ ಆರ್.ಎಚ್.ಸಾವುಕಾರ್, ‘ಜೀವಜಲ ಉಳಿಸುವ ಸಲುವಾಗಿ ಹಲವು ಕಾನೂನುಗಳನ್ನು ಜಾರಿಗೊಳಿಸಿದ್ದರೂ, ಅವುಗಳು ಪುಸ್ತಕದಲ್ಲಿ ಹಾಗೇ ಉಳಿದಿದೆ’ ಎಂದರು.<br /> <br /> ‘ಅರಬ್ ದೇಶಗಳಲ್ಲಿ ನೀರಿನ ಸಂರಕ್ಷಣೆಗೆ ನೀಡುವಷ್ಟು ಮಹತ್ವವನ್ನು ನಮ್ಮ ದೇಶದಲ್ಲಿ ನೀಡಲಾಗುತ್ತಿಲ್ಲ. ನೀರಿನ ಪೋಲಾಗುವಿಕೆಯನ್ನು ತಡೆಯುವುದರಿಂದ ಅರ್ಧದಷ್ಟು ನೀರಿನ ಅಭಾವವನ್ನು ತಗ್ಗಿಸಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಅಂತರ್ಜಲದ ಮೇಲಿನ ಅವಲಂಬನೆಯನ್ನು ಕ್ರಮೇಣ ಕಡಿಮೆ ಮಾಡುವುದೇ ಜಲಸಂರಕ್ಷಣೆಗೆ ಇರುವ ಮಾರ್ಗ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅಭಿಪ್ರಾಯಪಟ್ಟರು.<br /> <br /> ಕೇಂದ್ರೀಯ ಅಂತರ್ಜಲ ಮಂಡಳಿಯು ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಜಲ ಸಂರಕ್ಷಣೆ– ಹಿನ್ನೋಟ ಮತ್ತು ಮುನ್ನೋಟ’ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.<br /> <br /> ‘ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೀಡಲಾಗುವ ಅನುದಾನವು ನೀರು ಸಂಗ್ರಹಿಸಿಡುವ ಕೃತಕ ಟ್ಯಾಂಕ್ಗಳ ನಿರ್ಮಾಣ ಸೇರಿದಂತೆ ನೀರಿನ ಸಂರಕ್ಷಣೆಗೆ ಬಳಕೆಯಾಗುತ್ತಿದೆ. ಈವರೆಗೆ ಸುಮಾರು ₨1 ಸಾವಿರ ಕೋಟಿಯನ್ನು ಈ ಯೋಜನೆಗೆ ಬಳಸಲಾಗಿದೆ’ ಎಂದು ಹೇಳಿದರು.<br /> <br /> ‘ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗದ ಹಲವೆಡೆ ನೀರಿನ ಸಮಸ್ಯೆಯು ತೀವ್ರವಾಗಿದ್ದು, ಸಾಮಾನ್ಯ ಜನರು ಎಚ್ಚೆತ್ತುಕೊಳ್ಳದೇ ಇದ್ದರೆ ಸಮಸ್ಯೆ ಪರಿಹಾರ ಕಾಣಲು ಸಾಧ್ಯವಿಲ್ಲ’ ಎಂದು ತಿಳಿಸಿದರು.<br /> <br /> ಜಿಯೋಲಾಜಿಕಲ್ ಸೊಸೈಟಿ ಆಫ್ ಇಂಡಿಯಾದ ಕಾರ್ಯದರ್ಶಿ ಆರ್.ಎಚ್.ಸಾವುಕಾರ್, ‘ಜೀವಜಲ ಉಳಿಸುವ ಸಲುವಾಗಿ ಹಲವು ಕಾನೂನುಗಳನ್ನು ಜಾರಿಗೊಳಿಸಿದ್ದರೂ, ಅವುಗಳು ಪುಸ್ತಕದಲ್ಲಿ ಹಾಗೇ ಉಳಿದಿದೆ’ ಎಂದರು.<br /> <br /> ‘ಅರಬ್ ದೇಶಗಳಲ್ಲಿ ನೀರಿನ ಸಂರಕ್ಷಣೆಗೆ ನೀಡುವಷ್ಟು ಮಹತ್ವವನ್ನು ನಮ್ಮ ದೇಶದಲ್ಲಿ ನೀಡಲಾಗುತ್ತಿಲ್ಲ. ನೀರಿನ ಪೋಲಾಗುವಿಕೆಯನ್ನು ತಡೆಯುವುದರಿಂದ ಅರ್ಧದಷ್ಟು ನೀರಿನ ಅಭಾವವನ್ನು ತಗ್ಗಿಸಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>