<p><strong>ಚಿಕ್ಕನಾಯಕನಹಳ್ಳಿ:</strong> ಮಳೆ ನೀರು ಸಂಗ್ರಹದ ಮೂಲಕ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಪರೂಪದ ವಿದ್ಯಮಾನಕ್ಕೆ ತಾಲ್ಲೂಕಿನ ಕಂದಿಕೆರೆ ಹೋಬಳಿ ಜಾಣೆಹಾರ್ ಗ್ರಾಮ ಗುರುವಾರ ಸಾಕ್ಷಿಯಾಯಿತು.<br /> <br /> ವಿಶಿಷ್ಟ ರೀತಿಯಲ್ಲಿ ನಡೆದ ಪ್ರಗತಿಪರ ರೈತರಾದ ಜಯಲಕ್ಷ್ಮಮ್ಮ ಮತ್ತು ನಾಗರಾಜು ಅವರ ಪುತ್ರ ರಾಮಚಂದ್ರ ಮತ್ತು ಪುಷ್ಪಾ ಅವರ ವಿವಾಹ ಮಹೋತ್ಸವ ಎಲ್ಲ ಮೆಚ್ಚುಗೆಗೆ ಪಾತ್ರವಾಯಿತು.<br /> <br /> ಅಂತರ್ಜಲ ತಜ್ಞ ಎನ್.ಜೆ ದೇವರಾಜರೆಡ್ಡಿ ಮಾತನಾಡಿ, ಮಳೆ ನೀರು ಪೋಲು ಮಾಡಿದರೆ, ಮುಂದೊಂದು ದಿನ ನಾಡು ಜಲಕ್ಷಾಮದಿಂದ ತತ್ತರಿಸುವಂತಾಗುತ್ತದೆ. ಜಲ ಮರುಪೂರಣ ಕಾರ್ಯಕ್ರಮವನ್ನು ಸರ್ಕಾರ ಆದ್ಯತೆ ಮೇಲೆ ಕೈಗೆತ್ತಿಕೊಳ್ಳಬೇಕು ಎಂದರು.</p>.<p>ಚಿತ್ರದುರ್ಗ ಜಿಲ್ಲೆಗೆ ಹೋಲಿಸಿದರೆ ತುಮಕೂರು ಜಿಲ್ಲೆಯ ಅಂತರ್ಜಲಮಟ್ಟ ಕುಸಿದಿಲ್ಲ. ಕೃಷಿಯಲ್ಲಿ ನೀರು ಪೋಲಾಗದಂತೆ ಎಚ್ಚರವಹಿಸಬೇಕು. ಕೃಷಿ ಹೊಂಡಗಳ ನಿರ್ಮಾಣಕ್ಕೆ ಆದ್ಯತೆ ಸಿಗಬೇಕು ಎಂದರು.<br /> <br /> ವಿಜ್ಞಾನ ಕೇಂದ್ರದ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ತಾಲ್ಲೂಕಿನ ಮದಲಿಂಗನ ಕಣಿವೆ ಭಾಗವು ಮಲೆನಾಡಿನ ಪಡಿಯಚ್ಚಿನಂತಿದೆ. ಈ ಭಾಗದಲ್ಲಿ ಅರಣ್ಯಗಳನ್ನು ರಕ್ಷಿಸುವುದು ನಾಗರಿಕರ ಕರ್ತವ್ಯ ಎಂದು ನುಡಿದರು.<br /> <br /> ಕಾತ್ರಿಕೆಹಾಳ್ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಇಂದಿರಮ್ಮ ಮಾತನಾಡಿ, ಬೇಸಿಗೆಯಲ್ಲಿ ಅರಣ್ಯಕ್ಕೆ ಬೆಂಕಿಯನ್ನು ಹಾಕುವ ಪ್ರವೃತ್ತಿ ಇದೆ. ಇದನ್ನು ಕೈಬಿಡಬೇಕು ಎಂದರು.<br /> <br /> ಕೃಷಿ ಬರಹಗಾರ ಮಲ್ಲಿಕಾರ್ಜುನ ಹೊಸಪಾಳ್ಯ, ಸಮಾಜಸೇವಕ ಚಂದ್ರಪ್ಪ, ಶಿಕ್ಷಕ ಜಯಣ್ಣ, ಗ್ರಾ.ಪಂ. ಮಾಜಿ ಅಧ್ಯಕ್ಷ ನಾಗರಾಜು, ಕಾತ್ರಿಕೆಹಾಳ್, ಕೆಂಪರಾಯನಹಟ್ಟಿ, ದೊಡ್ಡರಾಂಪುರ, ಅಜ್ಜಿಗುಡ್ಡೆ ಗ್ರಾಮಸ್ಥರು ಪಾಲ್ಗೊಂಡಿದ್ದರು.<br /> ವಧು– ವರರಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕನಾಯಕನಹಳ್ಳಿ:</strong> ಮಳೆ ನೀರು ಸಂಗ್ರಹದ ಮೂಲಕ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಪರೂಪದ ವಿದ್ಯಮಾನಕ್ಕೆ ತಾಲ್ಲೂಕಿನ ಕಂದಿಕೆರೆ ಹೋಬಳಿ ಜಾಣೆಹಾರ್ ಗ್ರಾಮ ಗುರುವಾರ ಸಾಕ್ಷಿಯಾಯಿತು.<br /> <br /> ವಿಶಿಷ್ಟ ರೀತಿಯಲ್ಲಿ ನಡೆದ ಪ್ರಗತಿಪರ ರೈತರಾದ ಜಯಲಕ್ಷ್ಮಮ್ಮ ಮತ್ತು ನಾಗರಾಜು ಅವರ ಪುತ್ರ ರಾಮಚಂದ್ರ ಮತ್ತು ಪುಷ್ಪಾ ಅವರ ವಿವಾಹ ಮಹೋತ್ಸವ ಎಲ್ಲ ಮೆಚ್ಚುಗೆಗೆ ಪಾತ್ರವಾಯಿತು.<br /> <br /> ಅಂತರ್ಜಲ ತಜ್ಞ ಎನ್.ಜೆ ದೇವರಾಜರೆಡ್ಡಿ ಮಾತನಾಡಿ, ಮಳೆ ನೀರು ಪೋಲು ಮಾಡಿದರೆ, ಮುಂದೊಂದು ದಿನ ನಾಡು ಜಲಕ್ಷಾಮದಿಂದ ತತ್ತರಿಸುವಂತಾಗುತ್ತದೆ. ಜಲ ಮರುಪೂರಣ ಕಾರ್ಯಕ್ರಮವನ್ನು ಸರ್ಕಾರ ಆದ್ಯತೆ ಮೇಲೆ ಕೈಗೆತ್ತಿಕೊಳ್ಳಬೇಕು ಎಂದರು.</p>.<p>ಚಿತ್ರದುರ್ಗ ಜಿಲ್ಲೆಗೆ ಹೋಲಿಸಿದರೆ ತುಮಕೂರು ಜಿಲ್ಲೆಯ ಅಂತರ್ಜಲಮಟ್ಟ ಕುಸಿದಿಲ್ಲ. ಕೃಷಿಯಲ್ಲಿ ನೀರು ಪೋಲಾಗದಂತೆ ಎಚ್ಚರವಹಿಸಬೇಕು. ಕೃಷಿ ಹೊಂಡಗಳ ನಿರ್ಮಾಣಕ್ಕೆ ಆದ್ಯತೆ ಸಿಗಬೇಕು ಎಂದರು.<br /> <br /> ವಿಜ್ಞಾನ ಕೇಂದ್ರದ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ತಾಲ್ಲೂಕಿನ ಮದಲಿಂಗನ ಕಣಿವೆ ಭಾಗವು ಮಲೆನಾಡಿನ ಪಡಿಯಚ್ಚಿನಂತಿದೆ. ಈ ಭಾಗದಲ್ಲಿ ಅರಣ್ಯಗಳನ್ನು ರಕ್ಷಿಸುವುದು ನಾಗರಿಕರ ಕರ್ತವ್ಯ ಎಂದು ನುಡಿದರು.<br /> <br /> ಕಾತ್ರಿಕೆಹಾಳ್ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಇಂದಿರಮ್ಮ ಮಾತನಾಡಿ, ಬೇಸಿಗೆಯಲ್ಲಿ ಅರಣ್ಯಕ್ಕೆ ಬೆಂಕಿಯನ್ನು ಹಾಕುವ ಪ್ರವೃತ್ತಿ ಇದೆ. ಇದನ್ನು ಕೈಬಿಡಬೇಕು ಎಂದರು.<br /> <br /> ಕೃಷಿ ಬರಹಗಾರ ಮಲ್ಲಿಕಾರ್ಜುನ ಹೊಸಪಾಳ್ಯ, ಸಮಾಜಸೇವಕ ಚಂದ್ರಪ್ಪ, ಶಿಕ್ಷಕ ಜಯಣ್ಣ, ಗ್ರಾ.ಪಂ. ಮಾಜಿ ಅಧ್ಯಕ್ಷ ನಾಗರಾಜು, ಕಾತ್ರಿಕೆಹಾಳ್, ಕೆಂಪರಾಯನಹಟ್ಟಿ, ದೊಡ್ಡರಾಂಪುರ, ಅಜ್ಜಿಗುಡ್ಡೆ ಗ್ರಾಮಸ್ಥರು ಪಾಲ್ಗೊಂಡಿದ್ದರು.<br /> ವಧು– ವರರಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>