<p><strong>ಚಿಕ್ಕಬಳ್ಳಾಪುರ: </strong>ನಗರದ ಸರ್ ಎಂ.ವಿಶ್ವೇಶ್ವರಯ್ಯ ವೃತ್ತದಲ್ಲಿ ಬುಧವಾರ ನೂತನ ಸಂಚಾರಿ ಸೂಚನಾ ದೀಪಗಳಿಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು.ಬಹುದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ದೀಪಗಳಿಗೆ ಈಗ ಚಾಲನೆ ಸಿಕ್ಕಂತಾಗಿದೆ. ನಿಯಮಗಳು ಉಲ್ಲಂಘನೆಯಾಗದಂತೆ ಸಂಚಾರ ಪೊಲೀಸರು ನಿಗಾ ವಹಿಸುತ್ತಿದ್ದಾರೆ.<br /> <br /> ನಗರದಲ್ಲಿ ಎರಡನೇ ಸಿಗ್ನಲ್ ದೀಪಗಳನ್ನು ಅಳವಡಿಸಲಾಗಿದ್ದು, ಈಗಾಗಲೇ ಶಿಡ್ಲಘಟ್ಟ ವೃತ್ತದಲ್ಲಿ ಸಿಗ್ನಲ್ ದೀಪಗಳು ಕಾರ್ಯನಿರ್ವಹಿಸುತ್ತಿವೆ.ಸಿಗ್ನಲ್ ದೀಪಗಳ ಕಾರ್ಯನಿರ್ವಹಣೆಯಿಂದ ಇಲ್ಲಿನ ವಾಹನಗಳ ಸಂಚಾರ ವ್ಯವಸ್ಥೆಯು ಸುಧಾರಣೆಯಾಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.<br /> <br /> ಸಿಗ್ನಲ್ ದೀಪಗಳ ಅಳವಡಿಕೆ ಯೋಜನೆ ಹಲವು ದಿನಗಳ ಹಿಂದೆಯೇ ರೂಪಿಸಲಾಗಿತ್ತು. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ವೃತ್ತದ ನಾಲ್ಕು ದಿಕ್ಕುಗಳಲ್ಲಿ ಕಂಬಗಳ ಜೊತೆ ದೀಪಗಳನ್ನು ಅಳವಡಿಸಲಾಯಿತು. <br /> <br /> `ಬಜಾರ್ ರಸ್ತೆ, ಸಂತೆ ಮಾರುಕಟ್ಟೆ ಬೀದಿ ಮತ್ತು ಬಿ.ಬಿ.ರಸ್ತೆಯಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸುವಲ್ಲಿ ಸಹಕಾರಿಯಾಗಲಿದೆ.ಸುಗಮ ಸಂಚಾರಕ್ಕೂ ಉಪಯುಕ್ತವಾಗಲಿದೆ~ ಎಂದು ಪೊಲೀಸ್ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> <strong>ಕೆರೆಯಲ್ಲಿ ಅಪರಿಚಿತ ಶವ ಪತ್ತೆ</strong><br /> <strong>ಮುಳಬಾಗಲು:</strong> ತಾಲ್ಲೂಕಿನ ಶೆಟ್ಟಿಬಣಕನಹಳ್ಳಿ ಗ್ರಾಮದ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಬುಧವಾರ ಪತ್ತೆಯಾಗಿದ್ದು, ಶವ ಸಂಪೂರ್ಣ ಕೊಳೆತು ಹೋಗಿದೆ. ನೀಲಿ ಪ್ಯಾಂಟ್ ಧರಿಸಿದ್ದು, ಬಟ್ಟೆಯ ಮೇಲೆ ವರ್ಷನ್ ಟೈಲರ್ಸ್ ಬೆರಕಿ ಎಂದು ಇದೆ ಎಂದು ಸಬ್ ಇನ್ಸ್ಪೆಕ್ಟರ್ ಬಸವರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ನಗರದ ಸರ್ ಎಂ.ವಿಶ್ವೇಶ್ವರಯ್ಯ ವೃತ್ತದಲ್ಲಿ ಬುಧವಾರ ನೂತನ ಸಂಚಾರಿ ಸೂಚನಾ ದೀಪಗಳಿಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಯಿತು.ಬಹುದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ದೀಪಗಳಿಗೆ ಈಗ ಚಾಲನೆ ಸಿಕ್ಕಂತಾಗಿದೆ. ನಿಯಮಗಳು ಉಲ್ಲಂಘನೆಯಾಗದಂತೆ ಸಂಚಾರ ಪೊಲೀಸರು ನಿಗಾ ವಹಿಸುತ್ತಿದ್ದಾರೆ.<br /> <br /> ನಗರದಲ್ಲಿ ಎರಡನೇ ಸಿಗ್ನಲ್ ದೀಪಗಳನ್ನು ಅಳವಡಿಸಲಾಗಿದ್ದು, ಈಗಾಗಲೇ ಶಿಡ್ಲಘಟ್ಟ ವೃತ್ತದಲ್ಲಿ ಸಿಗ್ನಲ್ ದೀಪಗಳು ಕಾರ್ಯನಿರ್ವಹಿಸುತ್ತಿವೆ.ಸಿಗ್ನಲ್ ದೀಪಗಳ ಕಾರ್ಯನಿರ್ವಹಣೆಯಿಂದ ಇಲ್ಲಿನ ವಾಹನಗಳ ಸಂಚಾರ ವ್ಯವಸ್ಥೆಯು ಸುಧಾರಣೆಯಾಗಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.<br /> <br /> ಸಿಗ್ನಲ್ ದೀಪಗಳ ಅಳವಡಿಕೆ ಯೋಜನೆ ಹಲವು ದಿನಗಳ ಹಿಂದೆಯೇ ರೂಪಿಸಲಾಗಿತ್ತು. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ವೃತ್ತದ ನಾಲ್ಕು ದಿಕ್ಕುಗಳಲ್ಲಿ ಕಂಬಗಳ ಜೊತೆ ದೀಪಗಳನ್ನು ಅಳವಡಿಸಲಾಯಿತು. <br /> <br /> `ಬಜಾರ್ ರಸ್ತೆ, ಸಂತೆ ಮಾರುಕಟ್ಟೆ ಬೀದಿ ಮತ್ತು ಬಿ.ಬಿ.ರಸ್ತೆಯಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸುವಲ್ಲಿ ಸಹಕಾರಿಯಾಗಲಿದೆ.ಸುಗಮ ಸಂಚಾರಕ್ಕೂ ಉಪಯುಕ್ತವಾಗಲಿದೆ~ ಎಂದು ಪೊಲೀಸ್ ಅಧಿಕಾರಿಯೊಬ್ಬರು `ಪ್ರಜಾವಾಣಿ~ಗೆ ತಿಳಿಸಿದರು.<br /> <br /> <strong>ಕೆರೆಯಲ್ಲಿ ಅಪರಿಚಿತ ಶವ ಪತ್ತೆ</strong><br /> <strong>ಮುಳಬಾಗಲು:</strong> ತಾಲ್ಲೂಕಿನ ಶೆಟ್ಟಿಬಣಕನಹಳ್ಳಿ ಗ್ರಾಮದ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಶವ ಬುಧವಾರ ಪತ್ತೆಯಾಗಿದ್ದು, ಶವ ಸಂಪೂರ್ಣ ಕೊಳೆತು ಹೋಗಿದೆ. ನೀಲಿ ಪ್ಯಾಂಟ್ ಧರಿಸಿದ್ದು, ಬಟ್ಟೆಯ ಮೇಲೆ ವರ್ಷನ್ ಟೈಲರ್ಸ್ ಬೆರಕಿ ಎಂದು ಇದೆ ಎಂದು ಸಬ್ ಇನ್ಸ್ಪೆಕ್ಟರ್ ಬಸವರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>