<p>ಬೆಂಗಳೂರು: ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ, ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.<br /> <br /> ಅಂಬರೀಷ್ ಅವರೊಂದಿಗೆ ವಿಶೇಷ ವಿಮಾನದಲ್ಲಿ ಸಿಂಗಪುರಕ್ಕೆ ಪ್ರಯಾಣ ಬೆಳೆಸಿದ್ದ ವಿಕ್ರಂ ಆಸ್ಪತ್ರೆಯ ವೈದ್ಯರಾದ ಡಾ.ಕೆ.ಎಸ್.ಸತೀಶ್ ಹಾಗೂ ಡಾ.ರಘುನಂದನ್ ಸೋಮವಾರ ನಗರಕ್ಕೆ ಹಿಂತಿರುಗಿದ್ದು, ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.<br /> <br /> ಡಾ.ಕೆ.ಎಸ್.ಸತೀಶ್, ‘ಅಂಬರೀಷ್ ಅವರ ಆರೋಗ್ಯದಲ್ಲಿ ಬಹಳಷ್ಟು ಸುಧಾರಣೆ ಕಂಡುಬಂದಿದ್ದು, ಆತಂಕ ಪಡುವ ಅಗತ್ಯವಿಲ್ಲ’ ಎಂದರು.<br /> <br /> ‘ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಶ್ವಾಸಕೋಶತಜ್ಞ ಡಾ.ಆಂಗ್ ನೇತೃತ್ವದ ವೈದ್ಯರ ತಂಡವು ಅಂಬರೀಷ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಸಿಂಗಪುರ ಸರ್ಕಾರವು ಉತ್ತಮ ಸಹಕಾರ ನೀಡುತ್ತಿದೆ’ ಎಂದು ಹೇಳಿದರು.<br /> <br /> ಕೃತಕ ಉಸಿರಾಟ ಸಾಧನ ಸದ್ಯಕ್ಕೆ ತೆಗೆಯಲ್ಲ: ‘24 ಗಂಟೆಗಳ ಕಾಲ ನಿಗಾ ಇರಿಸಿ ಅಂಬರೀಷ್ ಅವರ ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಕೆ ಇದೆ. ಹೆಚ್ಚಿನ ವಿಶ್ರಾಂತಿಯ ಅಗತ್ಯವಿರುವುದರಿಂದ ಸದ್ಯಕ್ಕೆ ಕೃತಕ ಉಸಿರಾಟದ ಸಾಧನವನ್ನು ತೆಗೆಯುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.<br /> <br /> ‘ದ್ರವರೂಪದ ಆಹಾರವನ್ನೇ ನೀಡಲಾಗುತ್ತಿದೆ. ಚಿಕಿತ್ಸೆ ಪೂರ್ಣಗೊಂಡು ಸಂಪೂರ್ಣ ಚೇತರಿಸಿಕೊಳ್ಳಲು 15 ದಿನಗಳಾದರೂ ಬೇಕಾಗಬಹುದು. ಆದರೆ, ಸಿಂಗಪುರದಿಂದ ಅಂಬರೀಷ್ ಹಿಂತಿರುಗುವ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ’ ಎಂದು ಪ್ರತಿಕ್ರಿಯಿಸಿದರು.<br /> <br /> ಸ್ವಲ್ಪ ಹೆದರಿಕೆಯಿತ್ತು: ‘ನಗರದಿಂದ ಸಿಂಗಪುರಕ್ಕೆ ನಾಲ್ಕು ಗಂಟೆಯ ಪ್ರಯಾಣವಾದ್ದರಿಂದ ವಿಶೇಷ ವಿಮಾನದಲ್ಲಿ ಅಂಬರೀಷ್ ಅವರನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಸ್ವಲ್ಪ ಹೆದರಿಕೆಯಿತ್ತು’ ಎಂದು ನೆನಪಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ, ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.<br /> <br /> ಅಂಬರೀಷ್ ಅವರೊಂದಿಗೆ ವಿಶೇಷ ವಿಮಾನದಲ್ಲಿ ಸಿಂಗಪುರಕ್ಕೆ ಪ್ರಯಾಣ ಬೆಳೆಸಿದ್ದ ವಿಕ್ರಂ ಆಸ್ಪತ್ರೆಯ ವೈದ್ಯರಾದ ಡಾ.ಕೆ.ಎಸ್.ಸತೀಶ್ ಹಾಗೂ ಡಾ.ರಘುನಂದನ್ ಸೋಮವಾರ ನಗರಕ್ಕೆ ಹಿಂತಿರುಗಿದ್ದು, ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.<br /> <br /> ಡಾ.ಕೆ.ಎಸ್.ಸತೀಶ್, ‘ಅಂಬರೀಷ್ ಅವರ ಆರೋಗ್ಯದಲ್ಲಿ ಬಹಳಷ್ಟು ಸುಧಾರಣೆ ಕಂಡುಬಂದಿದ್ದು, ಆತಂಕ ಪಡುವ ಅಗತ್ಯವಿಲ್ಲ’ ಎಂದರು.<br /> <br /> ‘ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಶ್ವಾಸಕೋಶತಜ್ಞ ಡಾ.ಆಂಗ್ ನೇತೃತ್ವದ ವೈದ್ಯರ ತಂಡವು ಅಂಬರೀಷ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಸಿಂಗಪುರ ಸರ್ಕಾರವು ಉತ್ತಮ ಸಹಕಾರ ನೀಡುತ್ತಿದೆ’ ಎಂದು ಹೇಳಿದರು.<br /> <br /> ಕೃತಕ ಉಸಿರಾಟ ಸಾಧನ ಸದ್ಯಕ್ಕೆ ತೆಗೆಯಲ್ಲ: ‘24 ಗಂಟೆಗಳ ಕಾಲ ನಿಗಾ ಇರಿಸಿ ಅಂಬರೀಷ್ ಅವರ ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಕೆ ಇದೆ. ಹೆಚ್ಚಿನ ವಿಶ್ರಾಂತಿಯ ಅಗತ್ಯವಿರುವುದರಿಂದ ಸದ್ಯಕ್ಕೆ ಕೃತಕ ಉಸಿರಾಟದ ಸಾಧನವನ್ನು ತೆಗೆಯುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.<br /> <br /> ‘ದ್ರವರೂಪದ ಆಹಾರವನ್ನೇ ನೀಡಲಾಗುತ್ತಿದೆ. ಚಿಕಿತ್ಸೆ ಪೂರ್ಣಗೊಂಡು ಸಂಪೂರ್ಣ ಚೇತರಿಸಿಕೊಳ್ಳಲು 15 ದಿನಗಳಾದರೂ ಬೇಕಾಗಬಹುದು. ಆದರೆ, ಸಿಂಗಪುರದಿಂದ ಅಂಬರೀಷ್ ಹಿಂತಿರುಗುವ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ’ ಎಂದು ಪ್ರತಿಕ್ರಿಯಿಸಿದರು.<br /> <br /> ಸ್ವಲ್ಪ ಹೆದರಿಕೆಯಿತ್ತು: ‘ನಗರದಿಂದ ಸಿಂಗಪುರಕ್ಕೆ ನಾಲ್ಕು ಗಂಟೆಯ ಪ್ರಯಾಣವಾದ್ದರಿಂದ ವಿಶೇಷ ವಿಮಾನದಲ್ಲಿ ಅಂಬರೀಷ್ ಅವರನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಸ್ವಲ್ಪ ಹೆದರಿಕೆಯಿತ್ತು’ ಎಂದು ನೆನಪಿಸಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>