<p><strong>ಬೆಂಗಳೂರು:</strong> `ಡಾ.ಬಿ.ಆರ್.ಅಂಬೇಡ್ಕರ್ ಅವರು ತುಳಿತಕ್ಕೊಳಗಾದವರ, ದಲಿತರನ್ನು ಮೇಲೆತ್ತುವುದರಲ್ಲಿ ಮಾತ್ರ ತಮ್ಮನ್ನು ತೊಡಗಿಸಿಕೊಂಡಿರಲಿಲ್ಲ; ಅವರೊಬ್ಬ ಆರ್ಥಿಕ ತಜ್ಞರೂ ಆಗಿದ್ದರು. ಆ ಮೂಲಕ ದೇಶದ ವಾಣಿಜ್ಯ ರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ~ ಎಂದು ವಿಜಯಾ ಬ್ಯಾಂಕ್ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಸ್.ಉಪೇಂದ್ರ ಕಾಮತ್ ನುಡಿದರು.<br /> <br /> ಅಖಿಲ ಭಾರತ ವಿಜಯಾ ಬ್ಯಾಂಕ್ ಎಸ್ಸಿ/ ಎಸ್ಟಿ ನೌಕರರ ಸಂಘಟನೆಯು ಡಾ.ಬಿ.ಆರ್.ಅಂಬೇಡ್ಕರ್ ಅವರ 120ನೇ ಜನ್ಮದಿನದ ಅಂಗವಾಗಿ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದೇಶದಲ್ಲಿ ಎಂ.ಎಸ್ಸಿ ಮಾಡಿದ ಅಂಬೇಡ್ಕರ್ ಅವರು ಆ ನಂತರವೂ ಆರ್ಥಿಕತೆಯ ಕುರಿತಂತೆ ಪ್ರಬಂಧ ಮಂಡಿಸಿದ್ದರು.<br /> <br /> ನಂತರ ಮುಂಬೈನ ಕಾಲೇಜೊಂದರಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿದ್ದರು. `ಭಾರತದ ರೂಪಾಯಿಯ ಸಮಸ್ಯೆಗಳು~ ಎಂಬ ವಿಷಯ ಕುರಿತೂ ಸಹ ಪ್ರಬಂಧ ಮಂಡಿಸಿದ್ದರು. ಆ ಮೂಲಕ ಪರೋಕ್ಷವಾಗಿ ಬ್ಯಾಂಕಿಂಗ್ ವಲಯಕ್ಕೂ ಸಹಾಯ ಮಾಡಿದರು ಎಂದು ಹೇಳಿದರು.<br /> <br /> `ವಿಜಯಾ ಬ್ಯಾಂಕ್ ಗ್ರಾಮೀಣ ಭಾಗದ ಸೇವೆಯನ್ನು ಮುಖ್ಯ ಗುರಿಯಾಗಿ ಇಟ್ಟುಕೊಂಡು ಅಸ್ತಿತ್ವಕ್ಕೆ ಬಂದಿದೆ. ಆದ್ದರಿಂದ ಬ್ಯಾಂಕ್ ಸಿಬ್ಬಂದಿ ಗ್ರಾಹಕರ ಆಶಯಕ್ಕೆ ತಕ್ಕಂತೆ ಕೆಲಸ ನಿರ್ವಹಿಸಬೇಕು. ಈಗಾಗಲೇ ಬ್ಯಾಂಕ್ನ ಸಿಬ್ಬಂದಿ ಉತ್ತಮ ಸೇವೆ ನೀಡುತ್ತಿದ್ದಾರೆ ಎಂಬ ವರದಿಗಳಿವೆ. ಈ ಪ್ರಕ್ರಿಯೆ ಇನ್ನಷ್ಟು ಪರಿಣಾಮಕಾರಿ ಆಗಬೇಕು~ ಎಂದರು.<br /> <br /> `ನೌಕರರ ಬೇಡಿಕೆಗಳನ್ನು ಒಮ್ಮೆಲೆ ಈಡೇರಿಸಲು ಸಾಧ್ಯವಿಲ್ಲ. ಆದರೆ ಸಂಸ್ಥೆಯ ಮಿತಿಯಲ್ಲಿ ಹಂತ- ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗುವುದು~ ಎಂದು ಭರವಸೆ ನೀಡಿದರು.<br /> <br /> ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಮಾತನಾಡಿ, `ಅಂಬೇಡ್ಕರ್ ಸಂವಿಧಾನದಲ್ಲಿ ಒಬ್ಬರಿಗೆ ಒಂದೇ ವೋಟು ಎಂಬ ಸಮಾನತೆಯ ತತ್ವಅಳವಡಿಸುವ ಮೂಲಕ ಬಂಡವಾಳವಾರು- ಕೆಲಸಗಾರರು, ಬಡವ-ಶ್ರೀಮಂತ ಎಂಬ ಭೇದವಿಲ್ಲದೇ ಎಲ್ಲರೂ ಚುನಾವಣೆಯಲ್ಲಿ ಭಾಗವಹಿಸುವ ವ್ಯವಸ್ಥೆ ಮಾಡಿದರು. ಆ ಹಿನ್ನೆಲೆಯಲ್ಲಿಯೇ ಹಲವಾರು ದಲಿತ ಜನಾಂಗದ ನಾಯಕರು ಇಂದು ರಾಜಕೀಯ ಪ್ರವೇಶಿಸಿದ್ದಾರೆ~ ಎಂದರು.<br /> <br /> ರಾಷ್ಟ್ರೀಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಆಯೋಗದ ಉಪಾಧ್ಯಕ್ಷ ರಾಜು ಪರಮಾರ್, ಅಖಿಲ ಭಾರತ ಎಸ್ಸಿ/ಎಸ್ಟಿ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಬಿ.ಎಸ್.ಭಾರ್ತಿ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಚೌಧರಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಡಾ.ಬಿ.ಆರ್.ಅಂಬೇಡ್ಕರ್ ಅವರು ತುಳಿತಕ್ಕೊಳಗಾದವರ, ದಲಿತರನ್ನು ಮೇಲೆತ್ತುವುದರಲ್ಲಿ ಮಾತ್ರ ತಮ್ಮನ್ನು ತೊಡಗಿಸಿಕೊಂಡಿರಲಿಲ್ಲ; ಅವರೊಬ್ಬ ಆರ್ಥಿಕ ತಜ್ಞರೂ ಆಗಿದ್ದರು. ಆ ಮೂಲಕ ದೇಶದ ವಾಣಿಜ್ಯ ರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ~ ಎಂದು ವಿಜಯಾ ಬ್ಯಾಂಕ್ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಸ್.ಉಪೇಂದ್ರ ಕಾಮತ್ ನುಡಿದರು.<br /> <br /> ಅಖಿಲ ಭಾರತ ವಿಜಯಾ ಬ್ಯಾಂಕ್ ಎಸ್ಸಿ/ ಎಸ್ಟಿ ನೌಕರರ ಸಂಘಟನೆಯು ಡಾ.ಬಿ.ಆರ್.ಅಂಬೇಡ್ಕರ್ ಅವರ 120ನೇ ಜನ್ಮದಿನದ ಅಂಗವಾಗಿ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದೇಶದಲ್ಲಿ ಎಂ.ಎಸ್ಸಿ ಮಾಡಿದ ಅಂಬೇಡ್ಕರ್ ಅವರು ಆ ನಂತರವೂ ಆರ್ಥಿಕತೆಯ ಕುರಿತಂತೆ ಪ್ರಬಂಧ ಮಂಡಿಸಿದ್ದರು.<br /> <br /> ನಂತರ ಮುಂಬೈನ ಕಾಲೇಜೊಂದರಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿದ್ದರು. `ಭಾರತದ ರೂಪಾಯಿಯ ಸಮಸ್ಯೆಗಳು~ ಎಂಬ ವಿಷಯ ಕುರಿತೂ ಸಹ ಪ್ರಬಂಧ ಮಂಡಿಸಿದ್ದರು. ಆ ಮೂಲಕ ಪರೋಕ್ಷವಾಗಿ ಬ್ಯಾಂಕಿಂಗ್ ವಲಯಕ್ಕೂ ಸಹಾಯ ಮಾಡಿದರು ಎಂದು ಹೇಳಿದರು.<br /> <br /> `ವಿಜಯಾ ಬ್ಯಾಂಕ್ ಗ್ರಾಮೀಣ ಭಾಗದ ಸೇವೆಯನ್ನು ಮುಖ್ಯ ಗುರಿಯಾಗಿ ಇಟ್ಟುಕೊಂಡು ಅಸ್ತಿತ್ವಕ್ಕೆ ಬಂದಿದೆ. ಆದ್ದರಿಂದ ಬ್ಯಾಂಕ್ ಸಿಬ್ಬಂದಿ ಗ್ರಾಹಕರ ಆಶಯಕ್ಕೆ ತಕ್ಕಂತೆ ಕೆಲಸ ನಿರ್ವಹಿಸಬೇಕು. ಈಗಾಗಲೇ ಬ್ಯಾಂಕ್ನ ಸಿಬ್ಬಂದಿ ಉತ್ತಮ ಸೇವೆ ನೀಡುತ್ತಿದ್ದಾರೆ ಎಂಬ ವರದಿಗಳಿವೆ. ಈ ಪ್ರಕ್ರಿಯೆ ಇನ್ನಷ್ಟು ಪರಿಣಾಮಕಾರಿ ಆಗಬೇಕು~ ಎಂದರು.<br /> <br /> `ನೌಕರರ ಬೇಡಿಕೆಗಳನ್ನು ಒಮ್ಮೆಲೆ ಈಡೇರಿಸಲು ಸಾಧ್ಯವಿಲ್ಲ. ಆದರೆ ಸಂಸ್ಥೆಯ ಮಿತಿಯಲ್ಲಿ ಹಂತ- ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗುವುದು~ ಎಂದು ಭರವಸೆ ನೀಡಿದರು.<br /> <br /> ವಿಧಾನಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ಮಾತನಾಡಿ, `ಅಂಬೇಡ್ಕರ್ ಸಂವಿಧಾನದಲ್ಲಿ ಒಬ್ಬರಿಗೆ ಒಂದೇ ವೋಟು ಎಂಬ ಸಮಾನತೆಯ ತತ್ವಅಳವಡಿಸುವ ಮೂಲಕ ಬಂಡವಾಳವಾರು- ಕೆಲಸಗಾರರು, ಬಡವ-ಶ್ರೀಮಂತ ಎಂಬ ಭೇದವಿಲ್ಲದೇ ಎಲ್ಲರೂ ಚುನಾವಣೆಯಲ್ಲಿ ಭಾಗವಹಿಸುವ ವ್ಯವಸ್ಥೆ ಮಾಡಿದರು. ಆ ಹಿನ್ನೆಲೆಯಲ್ಲಿಯೇ ಹಲವಾರು ದಲಿತ ಜನಾಂಗದ ನಾಯಕರು ಇಂದು ರಾಜಕೀಯ ಪ್ರವೇಶಿಸಿದ್ದಾರೆ~ ಎಂದರು.<br /> <br /> ರಾಷ್ಟ್ರೀಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಆಯೋಗದ ಉಪಾಧ್ಯಕ್ಷ ರಾಜು ಪರಮಾರ್, ಅಖಿಲ ಭಾರತ ಎಸ್ಸಿ/ಎಸ್ಟಿ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಬಿ.ಎಸ್.ಭಾರ್ತಿ, ಪ್ರಧಾನ ಕಾರ್ಯದರ್ಶಿ ಕೆ.ಪಿ.ಚೌಧರಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>