<p><strong>ಬೆಂಗಳೂರು:</strong> `ನಮ್ಮ ಮೆಟ್ರೊ~ ಕಾಮಗಾರಿ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಸ್ಥಳಾಂತರಿಸುವುದು ಅನಿವಾರ್ಯ ಎಂದು ಚೆನ್ನೈನ ಐ.ಐ.ಟಿ ತಜ್ಞರು ವರದಿ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಮೆಯನ್ನು ಬೇರೆ ಕಡೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.<br /> <br /> ಸುರಂಗ ಕೊರೆಯುವ ವೇಳೆ ಪ್ರತಿಮೆಗೆ ಅಪಾಯ ಆಗುವ ಸಾಧ್ಯತೆ ಇದೆ. ಹೀಗಾಗಿ ಅದನ್ನು ಸ್ಥಳಾಂತರ ಮಾಡುವುದೇ ಸೂಕ್ತ ಎಂದು ಐಐಟಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಸರ್ಕಾರಕ್ಕೆ ನೀಡಿರುವ ವರದಿಯಲ್ಲಿ ತಿಳಿಸಿದ್ದಾರೆ. ಈ ವರದಿ ಕುರಿತು ಗುರುವಾರದ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. <br /> <br /> ಗುಜರಾತ್ ಪ್ರವಾಸದಲ್ಲಿರುವ ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಈ ಸಭೆಯಲ್ಲಿ ಹಾಜರಿರಲಿಲ್ಲ. ಹೀಗಾಗಿ ಪ್ರತಿಮೆ ಸ್ಥಳಾಂತರ ಕುರಿತು ಸಂಬಂಧಪಟ್ಟ ಸಚಿವರ ಜತೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡಲಾಯಿತು.<br /> <br /> <strong>ಶಾಸಕರು, ಮುಖಂಡರ ಜತೆ ಚರ್ಚೆ: </strong>ಪ್ರತಿಮೆ ಸ್ಥಳಾಂತರ ಕುರಿತು ಪರಿಶಿಷ್ಟ ಜಾತಿ/ಪಂಗಡದ ಶಾಸಕರು ಮತ್ತು ದಲಿತ ಸಂಘರ್ಷ ಸಮಿತಿಯ ಮುಖಂಡರ ಸಭೆ ಕರೆದು ಚರ್ಚಿಸಿದ ನಂತರ ಸ್ಥಳಾಂತರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ನಾರಾಯಣಸ್ವಾಮಿ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ಬಜೆಟ್ ನಂತರ ಈ ಸಭೆ ಕರೆಯಲಾಗುವುದು. ಐಐಟಿ ಕೊಟ್ಟಿರುವ ವರದಿ ಬಗ್ಗೆ ಎಲ್ಲ ಮುಖಂಡರಿಗೂ ವಿವರಿಸಿ, ವಿಶ್ವಾಸಕ್ಕೆ ತೆಗೆದುಕೊಂಡು ಸ್ವಲ್ಪ ದೂರಕ್ಕೆ ಪ್ರತಿಮೆ ಸ್ಥಳಾಂತರ ಮಾಡಲಾಗುವುದು. ಈ ಹಿಂದೆ ನಿರ್ಧರಿಸಿದಂತೆ ವಿಧಾನಸೌಧದ ಹಿಂಭಾಗಕ್ಕೆ ಸ್ಥಳಾಂತರ ಮಾಡುವುದಿಲ್ಲ~ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ನಮ್ಮ ಮೆಟ್ರೊ~ ಕಾಮಗಾರಿ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಸ್ಥಳಾಂತರಿಸುವುದು ಅನಿವಾರ್ಯ ಎಂದು ಚೆನ್ನೈನ ಐ.ಐ.ಟಿ ತಜ್ಞರು ವರದಿ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಮೆಯನ್ನು ಬೇರೆ ಕಡೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.<br /> <br /> ಸುರಂಗ ಕೊರೆಯುವ ವೇಳೆ ಪ್ರತಿಮೆಗೆ ಅಪಾಯ ಆಗುವ ಸಾಧ್ಯತೆ ಇದೆ. ಹೀಗಾಗಿ ಅದನ್ನು ಸ್ಥಳಾಂತರ ಮಾಡುವುದೇ ಸೂಕ್ತ ಎಂದು ಐಐಟಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಸರ್ಕಾರಕ್ಕೆ ನೀಡಿರುವ ವರದಿಯಲ್ಲಿ ತಿಳಿಸಿದ್ದಾರೆ. ಈ ವರದಿ ಕುರಿತು ಗುರುವಾರದ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. <br /> <br /> ಗುಜರಾತ್ ಪ್ರವಾಸದಲ್ಲಿರುವ ಸಮಾಜ ಕಲ್ಯಾಣ ಸಚಿವ ನಾರಾಯಣಸ್ವಾಮಿ ಈ ಸಭೆಯಲ್ಲಿ ಹಾಜರಿರಲಿಲ್ಲ. ಹೀಗಾಗಿ ಪ್ರತಿಮೆ ಸ್ಥಳಾಂತರ ಕುರಿತು ಸಂಬಂಧಪಟ್ಟ ಸಚಿವರ ಜತೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡಲಾಯಿತು.<br /> <br /> <strong>ಶಾಸಕರು, ಮುಖಂಡರ ಜತೆ ಚರ್ಚೆ: </strong>ಪ್ರತಿಮೆ ಸ್ಥಳಾಂತರ ಕುರಿತು ಪರಿಶಿಷ್ಟ ಜಾತಿ/ಪಂಗಡದ ಶಾಸಕರು ಮತ್ತು ದಲಿತ ಸಂಘರ್ಷ ಸಮಿತಿಯ ಮುಖಂಡರ ಸಭೆ ಕರೆದು ಚರ್ಚಿಸಿದ ನಂತರ ಸ್ಥಳಾಂತರಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸಚಿವ ನಾರಾಯಣಸ್ವಾಮಿ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> `ಬಜೆಟ್ ನಂತರ ಈ ಸಭೆ ಕರೆಯಲಾಗುವುದು. ಐಐಟಿ ಕೊಟ್ಟಿರುವ ವರದಿ ಬಗ್ಗೆ ಎಲ್ಲ ಮುಖಂಡರಿಗೂ ವಿವರಿಸಿ, ವಿಶ್ವಾಸಕ್ಕೆ ತೆಗೆದುಕೊಂಡು ಸ್ವಲ್ಪ ದೂರಕ್ಕೆ ಪ್ರತಿಮೆ ಸ್ಥಳಾಂತರ ಮಾಡಲಾಗುವುದು. ಈ ಹಿಂದೆ ನಿರ್ಧರಿಸಿದಂತೆ ವಿಧಾನಸೌಧದ ಹಿಂಭಾಗಕ್ಕೆ ಸ್ಥಳಾಂತರ ಮಾಡುವುದಿಲ್ಲ~ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>