<p><strong>ಸಾಗರ: </strong>ಇಲ್ಲಿನ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ. ಕೃಷ್ಣಪ್ಪ ಬಣ) ಕಾರ್ಯಕರ್ತರು ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ನಗರದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಹಾಗೂ ನಗರಸಭೆ ಅವ್ಯವಹಾರ ಖಂಡಿಸಿ ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.<br /> <br /> ನಗರವ್ಯಾಪ್ತಿಯಲ್ಲಿ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸುವಂತೆ ಹಲವು ವರ್ಷಗಳಿಂದ ಡಿಎಸ್ಎಸ್ ಒತ್ತಾಯಿಸುತ್ತಾ ಬಂದಿದೆ. ಈ ಉದ್ದೇಶಕ್ಕಾಗಿ ನಗರಸಭೆಯ ಎಸ್ಎಫ್ಸಿ ಮುಕ್ತನಿಧಿ ಯೋಜನೆಯಡಿ ್ಙ 2 ಲಕ್ಷ ಕಾಯ್ದಿರಿಸಲಾಗಿದೆ. ಆದಾಗ್ಯೂ ಪ್ರತಿಮೆ ಸ್ಥಾಪನೆಗೆ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಕಾರ್ಯ ಶೀಘ್ರವಾಗಿ ಆರಂಭಿಸುವಂತೆ ನಗರಸಭೆ ಅಧ್ಯಕ್ಷ ಎಸ್.ವಿ. ಕೃಷ್ಣಮೂರ್ತಿ ಅವರಿಗೆ ಸಂಘಟನೆ ಕಾರ್ಯಕರ್ತರು ಈಚೆಗೆ ಒತ್ತಾಯ ಹೇರಲು ಹೋದಾಗ ಅವರಿಗೆ ಅಧ್ಯಕ್ಷರು ಅವಾಚ್ಯ ಶಬ್ಧ ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಧರಣಿ ನಿರತರು ಆರೋಪಿಸಿದರು. <br /> ನಗರಸಭೆಯ ಶೇ. 22.75ರ ನಿಧಿಯಡಿ ದಲಿತರಿಗೆ ನೀಡುತ್ತಿರುವ ನೆರವು ಅರ್ಹರಿಗೆ ತಲುಪುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. <br /> <br /> ದಸಂಸ ರಾಜ್ಯ ಸಂಚಾಲಕ ಸತ್ಯ ಭದ್ರಾವತಿ, ಜಿಲ್ಲಾ ಸಂಚಾಲಕ ಚಿನ್ನಯ್ಯ, ಜಿಲ್ಲಾ ಸಂಘಟನಾ ಸಂಚಾಲಕ ರಾಜ್ಕುಮಾರ, ಪ್ರಕಾಶ್ ಲಿಗಾಡಿ, ಮಣಿ, ಗುರುರಾಜ್, ಎಸ್. ಲಕ್ಷ್ಮಣ್ ಸಾಗರ್, ಮಂಜುನಾಥ ಚಿಪ್ಳಿ, ನಾರಾಯಣ ಗೋಳಗೋಡು, ಸೋಮಶೇಖರ ಅರಮನೆಕೇರಿ, ದೇವೇಂದ್ರ ಅಣಲೆಕೊಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಇಲ್ಲಿನ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ. ಕೃಷ್ಣಪ್ಪ ಬಣ) ಕಾರ್ಯಕರ್ತರು ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ನಗರದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಹಾಗೂ ನಗರಸಭೆ ಅವ್ಯವಹಾರ ಖಂಡಿಸಿ ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.<br /> <br /> ನಗರವ್ಯಾಪ್ತಿಯಲ್ಲಿ ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸುವಂತೆ ಹಲವು ವರ್ಷಗಳಿಂದ ಡಿಎಸ್ಎಸ್ ಒತ್ತಾಯಿಸುತ್ತಾ ಬಂದಿದೆ. ಈ ಉದ್ದೇಶಕ್ಕಾಗಿ ನಗರಸಭೆಯ ಎಸ್ಎಫ್ಸಿ ಮುಕ್ತನಿಧಿ ಯೋಜನೆಯಡಿ ್ಙ 2 ಲಕ್ಷ ಕಾಯ್ದಿರಿಸಲಾಗಿದೆ. ಆದಾಗ್ಯೂ ಪ್ರತಿಮೆ ಸ್ಥಾಪನೆಗೆ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.<br /> <br /> ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಕಾರ್ಯ ಶೀಘ್ರವಾಗಿ ಆರಂಭಿಸುವಂತೆ ನಗರಸಭೆ ಅಧ್ಯಕ್ಷ ಎಸ್.ವಿ. ಕೃಷ್ಣಮೂರ್ತಿ ಅವರಿಗೆ ಸಂಘಟನೆ ಕಾರ್ಯಕರ್ತರು ಈಚೆಗೆ ಒತ್ತಾಯ ಹೇರಲು ಹೋದಾಗ ಅವರಿಗೆ ಅಧ್ಯಕ್ಷರು ಅವಾಚ್ಯ ಶಬ್ಧ ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಧರಣಿ ನಿರತರು ಆರೋಪಿಸಿದರು. <br /> ನಗರಸಭೆಯ ಶೇ. 22.75ರ ನಿಧಿಯಡಿ ದಲಿತರಿಗೆ ನೀಡುತ್ತಿರುವ ನೆರವು ಅರ್ಹರಿಗೆ ತಲುಪುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. <br /> <br /> ದಸಂಸ ರಾಜ್ಯ ಸಂಚಾಲಕ ಸತ್ಯ ಭದ್ರಾವತಿ, ಜಿಲ್ಲಾ ಸಂಚಾಲಕ ಚಿನ್ನಯ್ಯ, ಜಿಲ್ಲಾ ಸಂಘಟನಾ ಸಂಚಾಲಕ ರಾಜ್ಕುಮಾರ, ಪ್ರಕಾಶ್ ಲಿಗಾಡಿ, ಮಣಿ, ಗುರುರಾಜ್, ಎಸ್. ಲಕ್ಷ್ಮಣ್ ಸಾಗರ್, ಮಂಜುನಾಥ ಚಿಪ್ಳಿ, ನಾರಾಯಣ ಗೋಳಗೋಡು, ಸೋಮಶೇಖರ ಅರಮನೆಕೇರಿ, ದೇವೇಂದ್ರ ಅಣಲೆಕೊಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>