<p><strong>ಪಿರಿಯಾಪಟ್ಟಣ:</strong> ತಾಲ್ಲೂಕಿನ ನಿಲಂಗಾಲ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಯುವಕ ಸಂಘದ ನಾಮಫಲಕದಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಸಗಣಿ ಬಳಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಇದರಿಂದ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.<br /> <br /> ಗ್ರಾಮದ ದಲಿತ ಮುಖಂಡರು ಮತ್ತು ಯುವಕರು ಆಕ್ರೋಶಗೊಂಡು ಪ್ರತಿಭಟನೆಗೆ ಮುಂದಾದರು. ತಹಶೀಲ್ದಾರ್ ವಿ.ಆರ್.ಶೈಲಜಾ ಮತ್ತು ಡಿವೈಎಸ್ಪಿ ಮುದ್ದುಮಹದೇವಯ್ಯ ಭೇಟಿ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಿದರು. ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಡಿವೈಎಸ್ಪಿ ಭರವಸೆ ನೀಡಿದರು. <br /> <br /> 2005ನೇ ಸಾಲಿನಲ್ಲಿ ಅಂಬೇಡ್ಕರ್ ಯುವಕ ಸಂಘ ಆರಂಭಿಸಿ ನಾಮಫಲಕ ಹಾಕಲಾಗಿದ್ದು, ಅದೇ ಜಾಗದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಮಾಡುವ ಉದ್ದೇಶದಿಂದ ಬೇಲಿ ಸಹ ಹಾಕಲಾಗಿತ್ತು. ಗ್ರಾಮದ ಹೊನ್ನಗಿರಿಗೌಡ ಎಂಬುವರು ಈ ಜಾಗವನ್ನು ಅಂಗನವಾಡಿ ನಿರ್ಮಾಣಕ್ಕೆ ನೀಡಿದ್ದರು. ಇದರ ಪಕ್ಕದ್ಲ್ಲಲೇ ಇದ್ದ ಉಳಿದ ಜಾಗದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ದಲಿತ ಯುವಕರು ಸ್ಥಳೀಯ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು. <br /> <br /> ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈ ಜಾಗ ಖಾಸಗಿ ವ್ಯಕ್ತಿಗಳಿಗೆ ಸೇರಿಲ್ಲ, ಸರ್ಕಾರದ್ದು ಎಂದು ಯುವಕರಿಗೆ ಮೌಖಿಕವಾಗಿ ತಪ್ಪು ಮಾಹಿತಿ ನೀಡಿದ್ದರು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ನಡೆದ ಗ್ರಾಮ ಸಭೆಯಲ್ಲೂ ದಲಿತ ಯುವಕರು ಈ ಬಗ್ಗೆ ಚರ್ಚೆ ನಡೆಸಿದ್ದರು. ಸಭೆಗೆ ಕೋರಂ ಇಲ್ಲದ ಕಾರಣ ಸಭೆ ರದ್ದಾಗಿತ್ತು.<br /> <br /> ಶಾಂತಿಸಭೆಯಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಕೃಷ್ಣಾನಂದ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸುವ ಪ್ರಯತ್ನ ನಡೆದರೂ ಅವರು ಸಿಗಲಿಲ್ಲ. ಈ ಬಗ್ಗೆ ಆಕ್ಷೇಪವೂ ವ್ಯಕ್ತವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ:</strong> ತಾಲ್ಲೂಕಿನ ನಿಲಂಗಾಲ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಯುವಕ ಸಂಘದ ನಾಮಫಲಕದಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಸಗಣಿ ಬಳಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಇದರಿಂದ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.<br /> <br /> ಗ್ರಾಮದ ದಲಿತ ಮುಖಂಡರು ಮತ್ತು ಯುವಕರು ಆಕ್ರೋಶಗೊಂಡು ಪ್ರತಿಭಟನೆಗೆ ಮುಂದಾದರು. ತಹಶೀಲ್ದಾರ್ ವಿ.ಆರ್.ಶೈಲಜಾ ಮತ್ತು ಡಿವೈಎಸ್ಪಿ ಮುದ್ದುಮಹದೇವಯ್ಯ ಭೇಟಿ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಿದರು. ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಡಿವೈಎಸ್ಪಿ ಭರವಸೆ ನೀಡಿದರು. <br /> <br /> 2005ನೇ ಸಾಲಿನಲ್ಲಿ ಅಂಬೇಡ್ಕರ್ ಯುವಕ ಸಂಘ ಆರಂಭಿಸಿ ನಾಮಫಲಕ ಹಾಕಲಾಗಿದ್ದು, ಅದೇ ಜಾಗದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಮಾಡುವ ಉದ್ದೇಶದಿಂದ ಬೇಲಿ ಸಹ ಹಾಕಲಾಗಿತ್ತು. ಗ್ರಾಮದ ಹೊನ್ನಗಿರಿಗೌಡ ಎಂಬುವರು ಈ ಜಾಗವನ್ನು ಅಂಗನವಾಡಿ ನಿರ್ಮಾಣಕ್ಕೆ ನೀಡಿದ್ದರು. ಇದರ ಪಕ್ಕದ್ಲ್ಲಲೇ ಇದ್ದ ಉಳಿದ ಜಾಗದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ದಲಿತ ಯುವಕರು ಸ್ಥಳೀಯ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು. <br /> <br /> ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈ ಜಾಗ ಖಾಸಗಿ ವ್ಯಕ್ತಿಗಳಿಗೆ ಸೇರಿಲ್ಲ, ಸರ್ಕಾರದ್ದು ಎಂದು ಯುವಕರಿಗೆ ಮೌಖಿಕವಾಗಿ ತಪ್ಪು ಮಾಹಿತಿ ನೀಡಿದ್ದರು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ನಡೆದ ಗ್ರಾಮ ಸಭೆಯಲ್ಲೂ ದಲಿತ ಯುವಕರು ಈ ಬಗ್ಗೆ ಚರ್ಚೆ ನಡೆಸಿದ್ದರು. ಸಭೆಗೆ ಕೋರಂ ಇಲ್ಲದ ಕಾರಣ ಸಭೆ ರದ್ದಾಗಿತ್ತು.<br /> <br /> ಶಾಂತಿಸಭೆಯಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಕೃಷ್ಣಾನಂದ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸುವ ಪ್ರಯತ್ನ ನಡೆದರೂ ಅವರು ಸಿಗಲಿಲ್ಲ. ಈ ಬಗ್ಗೆ ಆಕ್ಷೇಪವೂ ವ್ಯಕ್ತವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>