<p><strong>ಬೆಂಗಳೂರು: </strong>ಲೆವಿ ನೀತಿ ವಿರೋಧಿಸಿ ರಾಜ್ಯ ಅಕ್ಕಿ ಗಿರಣಿದಾರರ ಸಂಘ ಸೋಮವಾರದಿಂದ ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆದಿದೆ. ಹೀಗಾಗಿ ಗುರುವಾರದಿಂದ ಗಿರಣಿಗಳು ಪುನರಾರಂಭವಾಗಲಿವೆ.<br /> <br /> ಕಾನೂನು ಸಚಿವ ಟಿ.ಬಿ.ಜಯಚಂದ್ರ, ಆಹಾರ ಸಚಿವ ದಿನೇಶ್ ಗುಂಡೂರಾವ್, ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ, ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರು ಬುಧವಾರ ಇಲ್ಲಿ ಸಂಘದ ಅಧ್ಯಕ್ಷ ಡಿ.ಜಿ.ಶಾಂತನಗೌಡ ಮತ್ತು ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾದರು.<br /> <br /> ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಯಚಂದ್ರ, ವಾರ್ಷಿಕ ಐದು ಲಕ್ಷ ಟನ್ ಬದಲು 2.5 ಲಕ್ಷ ಟನ್ ಅಕ್ಕಿಯನ್ನು ಮಾತ್ರ ಲೆವಿ ರೂಪದಲ್ಲಿ ಸಂಗ್ರಹಿಸಲಾಗುವುದು ಎಂದು ಪ್ರಕಟಿಸಿದರು.<br /> <br /> 1.5 ಲಕ್ಷ ಟನ್ ಅಕ್ಕಿಯನ್ನು ಮಾರ್ಚ್ ಒಳಗೆ ಹಾಗೂ ಉಳಿದ ಒಂದು ಲಕ್ಷ ಟನ್ ಅಕ್ಕಿಯನ್ನು ಸೆಪ್ಟೆಂಬರ್ ಒಳಗೆ ನೀಡಬೇಕು. ಗಿರಣಿ ಮಾಲೀಕರು ಇದಕ್ಕೆ ಒಪ್ಪಿದ್ದಾರೆ ಎಂದರು.<br /> <br /> ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ ಒಂದು ರೂಪಾಯಿಗೆ ನೀಡುವ ಅಕ್ಕಿಯನ್ನು ವಾಮಮಾರ್ಗದ ಮೂಲಕ ಖರೀದಿ ಮಾಡುವುದಿಲ್ಲ ಎಂದು ಗಿರಣಿ ಮಾಲೀಕರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.<br /> <br /> ಕೆ.ಜಿ.ಗೆ 24 ರೂಪಾಯಿ ದರದಲ್ಲಿ ಗಿರಣಿಗಳಿಂದ ಅಕ್ಕಿ ಖರೀದಿ ಮಾಡಲಾಗುವುದು. ಇದಕ್ಕೆ ಮಾಲೀಕರು ಒಪ್ಪಿದ್ದಾರೆ ಎಂದರು. 90 ದಿನಗಳ ಕಾಲ ಭತ್ತದ ದಾಸ್ತಾನು ಇಟ್ಟುಕೊಳ್ಳಲು ಅನುಮತಿ ನೀಡಬೇಕು ಎಂಬ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಲೆವಿ ನೀತಿ ವಿರೋಧಿಸಿ ರಾಜ್ಯ ಅಕ್ಕಿ ಗಿರಣಿದಾರರ ಸಂಘ ಸೋಮವಾರದಿಂದ ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆದಿದೆ. ಹೀಗಾಗಿ ಗುರುವಾರದಿಂದ ಗಿರಣಿಗಳು ಪುನರಾರಂಭವಾಗಲಿವೆ.<br /> <br /> ಕಾನೂನು ಸಚಿವ ಟಿ.ಬಿ.ಜಯಚಂದ್ರ, ಆಹಾರ ಸಚಿವ ದಿನೇಶ್ ಗುಂಡೂರಾವ್, ತೋಟಗಾರಿಕಾ ಸಚಿವ ಶಾಮನೂರು ಶಿವಶಂಕರಪ್ಪ, ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಅವರು ಬುಧವಾರ ಇಲ್ಲಿ ಸಂಘದ ಅಧ್ಯಕ್ಷ ಡಿ.ಜಿ.ಶಾಂತನಗೌಡ ಮತ್ತು ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾದರು.<br /> <br /> ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಯಚಂದ್ರ, ವಾರ್ಷಿಕ ಐದು ಲಕ್ಷ ಟನ್ ಬದಲು 2.5 ಲಕ್ಷ ಟನ್ ಅಕ್ಕಿಯನ್ನು ಮಾತ್ರ ಲೆವಿ ರೂಪದಲ್ಲಿ ಸಂಗ್ರಹಿಸಲಾಗುವುದು ಎಂದು ಪ್ರಕಟಿಸಿದರು.<br /> <br /> 1.5 ಲಕ್ಷ ಟನ್ ಅಕ್ಕಿಯನ್ನು ಮಾರ್ಚ್ ಒಳಗೆ ಹಾಗೂ ಉಳಿದ ಒಂದು ಲಕ್ಷ ಟನ್ ಅಕ್ಕಿಯನ್ನು ಸೆಪ್ಟೆಂಬರ್ ಒಳಗೆ ನೀಡಬೇಕು. ಗಿರಣಿ ಮಾಲೀಕರು ಇದಕ್ಕೆ ಒಪ್ಪಿದ್ದಾರೆ ಎಂದರು.<br /> <br /> ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ ಒಂದು ರೂಪಾಯಿಗೆ ನೀಡುವ ಅಕ್ಕಿಯನ್ನು ವಾಮಮಾರ್ಗದ ಮೂಲಕ ಖರೀದಿ ಮಾಡುವುದಿಲ್ಲ ಎಂದು ಗಿರಣಿ ಮಾಲೀಕರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.<br /> <br /> ಕೆ.ಜಿ.ಗೆ 24 ರೂಪಾಯಿ ದರದಲ್ಲಿ ಗಿರಣಿಗಳಿಂದ ಅಕ್ಕಿ ಖರೀದಿ ಮಾಡಲಾಗುವುದು. ಇದಕ್ಕೆ ಮಾಲೀಕರು ಒಪ್ಪಿದ್ದಾರೆ ಎಂದರು. 90 ದಿನಗಳ ಕಾಲ ಭತ್ತದ ದಾಸ್ತಾನು ಇಟ್ಟುಕೊಳ್ಳಲು ಅನುಮತಿ ನೀಡಬೇಕು ಎಂಬ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>