<p><strong>ತುಮಕೂರು:</strong> ನಗರದ ಹೊಸಳಯ್ಯನತೋಟ (ಮಂಜುನಾಥನಗರ) ಬಡಾವಣೆಯಲ್ಲಿ ಒಳಚರಂಡಿ ನೀರಿನ ಚೇಂಬರ್ ಒಡೆದು ಅಕ್ಕತಂಗಿಯರ ಕೆರೆಯ ಅಂಗಳಕ್ಕೆ ಕಲುಷಿತ ನೀರು ಸೇರುತ್ತಿದೆ.<br /> <br /> ದೇವರಾಯಪಟ್ಟಣ, ಬಟವಾಡಿ ಸೇರಿದಂತೆ ವಿವಿಧ ಬಡಾವಣೆಗಳ ಚರಂಡಿ ನೀರು ಕೆರೆಗೆ ಸೇರುವ ಸ್ಥಳದಲ್ಲಿ ಕೆಟ್ಟ ವಾಸನೆ ಇದೆ. ಸ್ಥಳೀಯರು ವಾಸ ಮಾಡುವುದೇ ಕಷ್ಟವಾಗಿದೆ ಎಂದು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಕಾರ್ಯದರ್ಶಿ ಸೈಯದ್ ಅಲ್ತಾಫ್ ಹಾಗೂ ಸ್ಥಳೀಯರು ದೂರಿದ್ದಾರೆ.<br /> <br /> ಕಳೆದ ವರ್ಷ ಇದೇ ಪ್ರದೇಶದಲ್ಲಿ ಒಡೆದಿದ್ದ ಒಳಚರಂಡಿ ಚೇಂಬರ್ಗೆ ಆಡುವ ಮಗು ಬಿದ್ದು ಸಾವನ್ನಪ್ಪಿತ್ತು. ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಚೇಂಬರ್ ದುರಸ್ತಿಪಡಿಸುವಂತೆ ನಗರಸಭೆಗೆ ಸೂಚಿಸಿದ್ದರು. ಇದೀಗ ಅದೇ ಪ್ರದೇಶದ ಮತ್ತೊಂದು ಚೇಂಬರ್ ಒಡೆದಿರುವುದು ವಿಪರ್ಯಾಸ.<br /> <br /> ಇದೇ ಪರಿಸ್ಥಿತಿ ಮುಂದುವರಿದರೆ ಕುಡಿಯುವ ನೀರು ಪೂರೈಕೆಗೆ ಕೆರೆಯ ಸುತ್ತ ಕೊರೆದಿರುವ ಕೊಳವೆಬಾವಿಗಳಲ್ಲಿ ಕಲುಷಿತ ನೀರು ಬರುತ್ತದೆ. ಸ್ಥಳೀಯ ನಗರಸಭೆ ಸದಸ್ಯರು ನಗರಸಭೆ ಉಪಾಧ್ಯಕ್ಷ ಅಸ್ಲಾಂಪಾಷ ಅವರನ್ನು ಸ್ಥಳಕ್ಕೆ ಕರೆಸಿ ಪರಿಸ್ಥಿತಿ ವಿವರಿಸಿದರೂ ಪ್ರಯೋಜನವಾಗಿಲ್ಲ.<br /> <br /> ಮತ್ತೊಂದು ಮಗು ಬಲಿಯಾಗುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಂಡು ನಗರಸಭೆಗೆ ಅಗತ್ಯ ಸೂಚನೆ ನೀಡಬೇಕು. ಇಲ್ಲದಿದ್ದರೆ ಸಮಿತಿ ಬೀದಿಗಿಳಿದು ಹೋರಾಟ ರೂಪಿಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರದ ಹೊಸಳಯ್ಯನತೋಟ (ಮಂಜುನಾಥನಗರ) ಬಡಾವಣೆಯಲ್ಲಿ ಒಳಚರಂಡಿ ನೀರಿನ ಚೇಂಬರ್ ಒಡೆದು ಅಕ್ಕತಂಗಿಯರ ಕೆರೆಯ ಅಂಗಳಕ್ಕೆ ಕಲುಷಿತ ನೀರು ಸೇರುತ್ತಿದೆ.<br /> <br /> ದೇವರಾಯಪಟ್ಟಣ, ಬಟವಾಡಿ ಸೇರಿದಂತೆ ವಿವಿಧ ಬಡಾವಣೆಗಳ ಚರಂಡಿ ನೀರು ಕೆರೆಗೆ ಸೇರುವ ಸ್ಥಳದಲ್ಲಿ ಕೆಟ್ಟ ವಾಸನೆ ಇದೆ. ಸ್ಥಳೀಯರು ವಾಸ ಮಾಡುವುದೇ ಕಷ್ಟವಾಗಿದೆ ಎಂದು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಕಾರ್ಯದರ್ಶಿ ಸೈಯದ್ ಅಲ್ತಾಫ್ ಹಾಗೂ ಸ್ಥಳೀಯರು ದೂರಿದ್ದಾರೆ.<br /> <br /> ಕಳೆದ ವರ್ಷ ಇದೇ ಪ್ರದೇಶದಲ್ಲಿ ಒಡೆದಿದ್ದ ಒಳಚರಂಡಿ ಚೇಂಬರ್ಗೆ ಆಡುವ ಮಗು ಬಿದ್ದು ಸಾವನ್ನಪ್ಪಿತ್ತು. ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಚೇಂಬರ್ ದುರಸ್ತಿಪಡಿಸುವಂತೆ ನಗರಸಭೆಗೆ ಸೂಚಿಸಿದ್ದರು. ಇದೀಗ ಅದೇ ಪ್ರದೇಶದ ಮತ್ತೊಂದು ಚೇಂಬರ್ ಒಡೆದಿರುವುದು ವಿಪರ್ಯಾಸ.<br /> <br /> ಇದೇ ಪರಿಸ್ಥಿತಿ ಮುಂದುವರಿದರೆ ಕುಡಿಯುವ ನೀರು ಪೂರೈಕೆಗೆ ಕೆರೆಯ ಸುತ್ತ ಕೊರೆದಿರುವ ಕೊಳವೆಬಾವಿಗಳಲ್ಲಿ ಕಲುಷಿತ ನೀರು ಬರುತ್ತದೆ. ಸ್ಥಳೀಯ ನಗರಸಭೆ ಸದಸ್ಯರು ನಗರಸಭೆ ಉಪಾಧ್ಯಕ್ಷ ಅಸ್ಲಾಂಪಾಷ ಅವರನ್ನು ಸ್ಥಳಕ್ಕೆ ಕರೆಸಿ ಪರಿಸ್ಥಿತಿ ವಿವರಿಸಿದರೂ ಪ್ರಯೋಜನವಾಗಿಲ್ಲ.<br /> <br /> ಮತ್ತೊಂದು ಮಗು ಬಲಿಯಾಗುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತುಕೊಂಡು ನಗರಸಭೆಗೆ ಅಗತ್ಯ ಸೂಚನೆ ನೀಡಬೇಕು. ಇಲ್ಲದಿದ್ದರೆ ಸಮಿತಿ ಬೀದಿಗಿಳಿದು ಹೋರಾಟ ರೂಪಿಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>