<p><strong>ಬಳ್ಳಾರಿ:</strong> ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಅವರ ಸಹೋದರರು ಭಾಗಿಯಾಗಿರುವ ಎಲ್ಲ ಅಕ್ರಮಗಳಲ್ಲಿ ಶಾಸಕ ಬಿ.ಶ್ರೀರಾಮುಲು ಅವರ ಪಾಲು ಸಾಕಷ್ಟಿದೆ ಎಂದು ಸಿಪಿಎಂ ಮುಖಂಡ ಜಿ.ಎನ್. ನಾಗರಾಜ್ ದೂರಿದರು.<br /> <br /> ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೆಡ್ಡಿ ಸಹೋದರರ ಭ್ರಷ್ಟಾಚಾರಕ್ಕೆ ರಕ್ಷಣೆ ಒದಗಿಸಲೆಂದೇ ರಾಮುಲು ನೂತನ ಪಕ್ಷ ಸ್ಥಾಪಿಸಿದ್ದಾರೆ. ಅವರಿಗೆ ಯಾವ ಸ್ವಾಭಿಮಾನವೂ ಇಲ್ಲ. ಇದ್ದಿದ್ದರೆ ಪಕ್ಷ ಸ್ಥಾಪಿಸುತ್ತಿರಲಿಲ್ಲ ಎಂದರು.<br /> <br /> ಸ್ವಾಭಿಮಾನ ಅಡವಿಟ್ಟು ರೆಡ್ಡಿ ಸಹೋದರರ ಅಕ್ರಮದಲ್ಲಿ ಪಾಲ್ಗೊಂಡವರು, `ಸ್ವಾಭಿಮಾನಿ~ ಎಂದು ಸ್ವಯಂ ಘೋಷಣೆ ಮಾಡಿಕೊಂಡಿರುವುದು ನಾಚಿಕೆಗೇಡು ಎಂದು ಅವರು ಹೇಳಿದರು.<br /> <br /> ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರು ತನಿಖೆ ನಡೆಸಿ ಸಲ್ಲಿಸಿರುವ ವರದಿಯಲ್ಲಿ ಇವರ ಹೆಸರಿದ್ದು, ರಿಪಬ್ಲಿಕ್ ಆಫ್ ಬಳ್ಳಾರಿ ಕುಖ್ಯಾತಿಯಲ್ಲಿ ಶ್ರೀರಾಮುಲು ಅವರಿಗೇ ಸಿಂಹಪಾಲು ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಅವರ ಸಹೋದರರು ಭಾಗಿಯಾಗಿರುವ ಎಲ್ಲ ಅಕ್ರಮಗಳಲ್ಲಿ ಶಾಸಕ ಬಿ.ಶ್ರೀರಾಮುಲು ಅವರ ಪಾಲು ಸಾಕಷ್ಟಿದೆ ಎಂದು ಸಿಪಿಎಂ ಮುಖಂಡ ಜಿ.ಎನ್. ನಾಗರಾಜ್ ದೂರಿದರು.<br /> <br /> ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೆಡ್ಡಿ ಸಹೋದರರ ಭ್ರಷ್ಟಾಚಾರಕ್ಕೆ ರಕ್ಷಣೆ ಒದಗಿಸಲೆಂದೇ ರಾಮುಲು ನೂತನ ಪಕ್ಷ ಸ್ಥಾಪಿಸಿದ್ದಾರೆ. ಅವರಿಗೆ ಯಾವ ಸ್ವಾಭಿಮಾನವೂ ಇಲ್ಲ. ಇದ್ದಿದ್ದರೆ ಪಕ್ಷ ಸ್ಥಾಪಿಸುತ್ತಿರಲಿಲ್ಲ ಎಂದರು.<br /> <br /> ಸ್ವಾಭಿಮಾನ ಅಡವಿಟ್ಟು ರೆಡ್ಡಿ ಸಹೋದರರ ಅಕ್ರಮದಲ್ಲಿ ಪಾಲ್ಗೊಂಡವರು, `ಸ್ವಾಭಿಮಾನಿ~ ಎಂದು ಸ್ವಯಂ ಘೋಷಣೆ ಮಾಡಿಕೊಂಡಿರುವುದು ನಾಚಿಕೆಗೇಡು ಎಂದು ಅವರು ಹೇಳಿದರು.<br /> <br /> ಅಕ್ರಮ ಗಣಿಗಾರಿಕೆ ಕುರಿತು ಲೋಕಾಯುಕ್ತರು ತನಿಖೆ ನಡೆಸಿ ಸಲ್ಲಿಸಿರುವ ವರದಿಯಲ್ಲಿ ಇವರ ಹೆಸರಿದ್ದು, ರಿಪಬ್ಲಿಕ್ ಆಫ್ ಬಳ್ಳಾರಿ ಕುಖ್ಯಾತಿಯಲ್ಲಿ ಶ್ರೀರಾಮುಲು ಅವರಿಗೇ ಸಿಂಹಪಾಲು ಎಂದು ಅವರು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>