<p>ದೊಡ್ಡಬಳ್ಳಾಪುರ: `ಅಕ್ರಮವಾಗಿ ಗಳಿಸಿರುವ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಳ್ಳುವ ನೀತಿ ಜಾರಿಯಾಗದ ಹೊರತು ಭ್ರಷ್ಟಾಚಾರಕ್ಕೆ ಕಡಿವಾಣಹಾಕಲು ಸಾಧ್ಯವಿಲ್ಲ~ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ಹೇಳಿದರು.<br /> <br /> ತಾಲ್ಲೂಕಿನ ಎಸ್.ಎಸ್.ಘಾಟಿ ಕ್ಷೇತ್ರದಲ್ಲಿ ರೈತ ಸಂಘದ ನೂತನ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> `ಸ್ವಾತಂತ್ರ್ಯ ಬಂದು ಆರು ದಶಕಗಳು ಕಳೆದಿದ್ದರೂ ಸಹ ಉತ್ತರ ಕರ್ನಾಟಕದ ಜನ ನಗರಗಳಿಗೆ ಗುಳೆ ಹೋಗುವುದನ್ನು ತಡೆಯುವಂತಹ ಅಭಿವೃದ್ಧಿ ಪರ ಬಜೆಟ್, ಕಾನೂನುಗಳನ್ನು ರೂಪಿಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ. <br /> <br /> ಸರ್ಕಾರಿ ನೌಕರರ ಸಂಬಳ ಪ್ರತಿ ವರ್ಷ ಏರಿಕೆಯಾಗುತ್ತಲೇ ಇದೆ ಆದರೆ ಕೃಷಿ ಉತ್ಪನ್ನಗಳ ಬೆಲೆ ಮಾತ್ರ ಪ್ರತಿ ವರ್ಷ ಕುಸಿತವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> `ಕಾಯಕ ಧರ್ಮದ ಬಸವಣ್ಣ ರೂಪಿಸಿದ್ದ ಆರ್ಥಿಕ ನೀತಿ ಜಾರಿಗೆ ಬಂದಾಗ ಮಾತ್ರ ನಿರುದ್ಯೋಗ ನಿವಾರಣೆ ಸಾಧ್ಯ. ದೇಶದ ಆಹಾರ ಭದ್ರತೆಯಲ್ಲಿ ಮಹಿಳೆಯರ ಪಾಲು ದೊಡ್ಡದು. ಆದರೆ ದುಡಿಯುವ ಮಹಿಳೆಯರು ಅನಾರೋಗ್ಯಕ್ಕೆ ತುತ್ತಾದಾಗ ಅವರ ಚಿಕಿತ್ಸೆಗಾಗಿ ವಿಶೇಷ ಸೌಲಭ್ಯಗಳು ಮಾತ್ರ ಇಲ್ಲ ಎಂದರು.<br /> <br /> ಬಡವರ ಹಾಗೂ ದುಡಿಯುವ ವರ್ಗದ ಜನರ ಬದುಕಿನ ಬಗ್ಗೆ ಯಾವುದೇ ರಾಜಕೀಯ ಪಕ್ಷಗಳಿಗೂ ಕನಸುಗಳೆ ಇಲ್ಲದಾಗಿವೆ. ಉದ್ಯೋಗ ಸೃಷ್ಟಿಸುವಂತಹ ಸಾಲ ನೀತಿಯಿಂದ ಹಾಗೂ ಬಡ್ಡಿ ರಹಿತ ಕೃಷಿ ಸಾಲದಿಂದ ಮಾತ್ರ ದೇಶದಲ್ಲಿ ಆರ್ಥಿಕ ಸಮಾನತೆ ತರಲು ಸಾಧ್ಯವಾಗಲಿದೆ ಎಂದರು.<br /> <br /> ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಡಾ.ಎನ್.ವೆಂಕಟರೆಡ್ಡಿ ಮಾತನಾಡಿ, ಎಸ್.ಎಸ್.ಘಾಟಿ ಕ್ಷೇತ್ರದಲ್ಲಿ ಆರ್.ಎಸ್.ಎಸ್ ಅಂಗ ಸಂಸ್ಥೆ ನಡೆಸುತ್ತಿರುವ ಗೋ ಶಾಲೆಗೆ ಸರ್ಕಾರ ರಾತ್ರೋರಾತ್ರಿ ನೂರು ಎಕರೆ ಭೂಮಿಯನ್ನು ನಿಯಮ ಮೀರಿ ಮಂಜೂರು ಮಾಡಲಾಗಿದೆ. ಈ ಭೂಮಿಯಲ್ಲಿ ಬಗರ್ ಹುಕ್ಕುಂ ಭೂಮಿಯೇ ಹೆಚ್ಚಾಗಿದೆ. ಗೋ ಶಾಲೆ ನಿರ್ಮಿಸುವ ದಾವಂತದಲ್ಲಿ ಐತಿಹಾಸಿಕ ವಿಶ್ವೇಶ್ವರಯ್ಯ ಪಿಕ್ ಡ್ಯಾಮ್ ಅನ್ನು ಸಹ ಕಾಂಪೌಡ್ ಒಳಗೆ ಸೇರಿಸಿಕೊಳ್ಳಲಾಗಿದೆ. ಈ ಡ್ಯಾಮ್ನಲ್ಲಿ ನಿಲ್ಲುತ್ತಿದ್ದ ನೀರನ್ನು ಹೊರಬಿಡಲಾಗಿದೆ ಎಂದು ತಿಳಿಸಿದ ಅವರು ನಿಯಮ ಮೀರಿ ಗೋ ಶಾಲೆಗೆ ಮಂಜೂರು ಮಾಡಿರುವ ಭೂಮಿಯನ್ನು ಬಗರ್ಹುಕಂ ಸಾಗುವಳಿದಾರ ರೈತರಿಗೆ ಹಿಂದಿರುಗಿಸುವವರೆಗೂ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಸದ್ಯದಲ್ಲೇ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ದೇಶದಲ್ಲಿ ಹೊಸ ಭೂಸ್ವಾಧೀನ ಕಾಯಿದೆ ರೂಪಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ ಅಕ್ಟೋಬರ್ 18 ರಂದು ದೆಹಲಿಯಲ್ಲಿ ದೇಶದ ಎಲ್ಲಾ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. <br /> <br /> ಸಮಾರಂಭದ ಅಧ್ಯಕ್ಷತೆಯನ್ನು ಲಕ್ಷ್ಮಾನಾಯ್ಕ ವಹಿಸಿದ್ದರು. ರಾಜ್ಯ ರೈತ ಸಂಘದ ಯುವ ಮುಖಂಡ ಪಚ್ಚೆನಂಜುಂಡಸ್ವಾಮಿ, ಬೆಂ.ಗ್ರಾ.ಜಿಲ್ಲಾ ಅಧ್ಯಕ್ಷ ವೆಂಕಟನಾರಾಯಣಪ್ಪ, ಕಾರ್ಯದರ್ಶಿ ಡಾ.ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ಪ್ರಸನ್ನ, ಮುತ್ತೇಗೌಡ, ಕೆ.ಪಿ.ಕುಮಾರ್, ನಾರಾಯಣಸ್ವಾಮಿ, ಬಸವರಾಜು ಮುಂತಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: `ಅಕ್ರಮವಾಗಿ ಗಳಿಸಿರುವ ಆಸ್ತಿಯನ್ನು ಮುಟ್ಟುಗೊಲು ಹಾಕಿಕೊಳ್ಳುವ ನೀತಿ ಜಾರಿಯಾಗದ ಹೊರತು ಭ್ರಷ್ಟಾಚಾರಕ್ಕೆ ಕಡಿವಾಣಹಾಕಲು ಸಾಧ್ಯವಿಲ್ಲ~ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ಹೇಳಿದರು.<br /> <br /> ತಾಲ್ಲೂಕಿನ ಎಸ್.ಎಸ್.ಘಾಟಿ ಕ್ಷೇತ್ರದಲ್ಲಿ ರೈತ ಸಂಘದ ನೂತನ ಶಾಖೆ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> `ಸ್ವಾತಂತ್ರ್ಯ ಬಂದು ಆರು ದಶಕಗಳು ಕಳೆದಿದ್ದರೂ ಸಹ ಉತ್ತರ ಕರ್ನಾಟಕದ ಜನ ನಗರಗಳಿಗೆ ಗುಳೆ ಹೋಗುವುದನ್ನು ತಡೆಯುವಂತಹ ಅಭಿವೃದ್ಧಿ ಪರ ಬಜೆಟ್, ಕಾನೂನುಗಳನ್ನು ರೂಪಿಸಲು ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ. <br /> <br /> ಸರ್ಕಾರಿ ನೌಕರರ ಸಂಬಳ ಪ್ರತಿ ವರ್ಷ ಏರಿಕೆಯಾಗುತ್ತಲೇ ಇದೆ ಆದರೆ ಕೃಷಿ ಉತ್ಪನ್ನಗಳ ಬೆಲೆ ಮಾತ್ರ ಪ್ರತಿ ವರ್ಷ ಕುಸಿತವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> `ಕಾಯಕ ಧರ್ಮದ ಬಸವಣ್ಣ ರೂಪಿಸಿದ್ದ ಆರ್ಥಿಕ ನೀತಿ ಜಾರಿಗೆ ಬಂದಾಗ ಮಾತ್ರ ನಿರುದ್ಯೋಗ ನಿವಾರಣೆ ಸಾಧ್ಯ. ದೇಶದ ಆಹಾರ ಭದ್ರತೆಯಲ್ಲಿ ಮಹಿಳೆಯರ ಪಾಲು ದೊಡ್ಡದು. ಆದರೆ ದುಡಿಯುವ ಮಹಿಳೆಯರು ಅನಾರೋಗ್ಯಕ್ಕೆ ತುತ್ತಾದಾಗ ಅವರ ಚಿಕಿತ್ಸೆಗಾಗಿ ವಿಶೇಷ ಸೌಲಭ್ಯಗಳು ಮಾತ್ರ ಇಲ್ಲ ಎಂದರು.<br /> <br /> ಬಡವರ ಹಾಗೂ ದುಡಿಯುವ ವರ್ಗದ ಜನರ ಬದುಕಿನ ಬಗ್ಗೆ ಯಾವುದೇ ರಾಜಕೀಯ ಪಕ್ಷಗಳಿಗೂ ಕನಸುಗಳೆ ಇಲ್ಲದಾಗಿವೆ. ಉದ್ಯೋಗ ಸೃಷ್ಟಿಸುವಂತಹ ಸಾಲ ನೀತಿಯಿಂದ ಹಾಗೂ ಬಡ್ಡಿ ರಹಿತ ಕೃಷಿ ಸಾಲದಿಂದ ಮಾತ್ರ ದೇಶದಲ್ಲಿ ಆರ್ಥಿಕ ಸಮಾನತೆ ತರಲು ಸಾಧ್ಯವಾಗಲಿದೆ ಎಂದರು.<br /> <br /> ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಡಾ.ಎನ್.ವೆಂಕಟರೆಡ್ಡಿ ಮಾತನಾಡಿ, ಎಸ್.ಎಸ್.ಘಾಟಿ ಕ್ಷೇತ್ರದಲ್ಲಿ ಆರ್.ಎಸ್.ಎಸ್ ಅಂಗ ಸಂಸ್ಥೆ ನಡೆಸುತ್ತಿರುವ ಗೋ ಶಾಲೆಗೆ ಸರ್ಕಾರ ರಾತ್ರೋರಾತ್ರಿ ನೂರು ಎಕರೆ ಭೂಮಿಯನ್ನು ನಿಯಮ ಮೀರಿ ಮಂಜೂರು ಮಾಡಲಾಗಿದೆ. ಈ ಭೂಮಿಯಲ್ಲಿ ಬಗರ್ ಹುಕ್ಕುಂ ಭೂಮಿಯೇ ಹೆಚ್ಚಾಗಿದೆ. ಗೋ ಶಾಲೆ ನಿರ್ಮಿಸುವ ದಾವಂತದಲ್ಲಿ ಐತಿಹಾಸಿಕ ವಿಶ್ವೇಶ್ವರಯ್ಯ ಪಿಕ್ ಡ್ಯಾಮ್ ಅನ್ನು ಸಹ ಕಾಂಪೌಡ್ ಒಳಗೆ ಸೇರಿಸಿಕೊಳ್ಳಲಾಗಿದೆ. ಈ ಡ್ಯಾಮ್ನಲ್ಲಿ ನಿಲ್ಲುತ್ತಿದ್ದ ನೀರನ್ನು ಹೊರಬಿಡಲಾಗಿದೆ ಎಂದು ತಿಳಿಸಿದ ಅವರು ನಿಯಮ ಮೀರಿ ಗೋ ಶಾಲೆಗೆ ಮಂಜೂರು ಮಾಡಿರುವ ಭೂಮಿಯನ್ನು ಬಗರ್ಹುಕಂ ಸಾಗುವಳಿದಾರ ರೈತರಿಗೆ ಹಿಂದಿರುಗಿಸುವವರೆಗೂ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಸದ್ಯದಲ್ಲೇ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ದೇಶದಲ್ಲಿ ಹೊಸ ಭೂಸ್ವಾಧೀನ ಕಾಯಿದೆ ರೂಪಿಸಲು ಹೊರಟಿರುವ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ ಅಕ್ಟೋಬರ್ 18 ರಂದು ದೆಹಲಿಯಲ್ಲಿ ದೇಶದ ಎಲ್ಲಾ ರೈತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. <br /> <br /> ಸಮಾರಂಭದ ಅಧ್ಯಕ್ಷತೆಯನ್ನು ಲಕ್ಷ್ಮಾನಾಯ್ಕ ವಹಿಸಿದ್ದರು. ರಾಜ್ಯ ರೈತ ಸಂಘದ ಯುವ ಮುಖಂಡ ಪಚ್ಚೆನಂಜುಂಡಸ್ವಾಮಿ, ಬೆಂ.ಗ್ರಾ.ಜಿಲ್ಲಾ ಅಧ್ಯಕ್ಷ ವೆಂಕಟನಾರಾಯಣಪ್ಪ, ಕಾರ್ಯದರ್ಶಿ ಡಾ.ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ಪ್ರಸನ್ನ, ಮುತ್ತೇಗೌಡ, ಕೆ.ಪಿ.ಕುಮಾರ್, ನಾರಾಯಣಸ್ವಾಮಿ, ಬಸವರಾಜು ಮುಂತಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>