<p>ಮಹದೇವಪುರ: ಕಾಡುಗೋಡಿ ಸರ್ವೇ ನಂ.1ರಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ತಲೆ ಎತ್ತಿದ ಅಕ್ರಮ ಕಟ್ಟಡಗಳನ್ನು ಅರಣ್ಯ ಇಲಾಖೆ ತೆರವುಗೊಳಿಸಿ ಸುಮಾರು ರೂ 10 ಕೋಟಿ ಮೌಲ್ಯದ ಜಮೀನನ್ನು ವಶಪಡಿಸಿಕೊಂಡಿತು.<br /> <br /> ಕಾಡುಗೋಡಿ ಸುತ್ತಮುತ್ತಲೂ ಸುಮಾರು 700 ಎಕರೆಗೂ ಹೆಚ್ಚು ಮೀಸಲು ಅರಣ್ಯ ಭೂಪ್ರದೇಶವಿದ್ದು, ಅನೇಕ ಕಡೆಗಳಲ್ಲಿ ಕೆಲ ಖಾಸಗಿ ಕಂಪನಿಯ ಮಾಲೀಕರು ಅನಧಿಕೃವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಕುರಿತು ಸೂಕ್ತ ಕ್ರಮ ಜರುಗಿಸಲಾಗುತ್ತಿದೆ. ತೆರವು ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ನಗರ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ವನಶ್ರೀ ಸಿಂಗ್ ತಿಳಿಸಿದರು.<br /> <br /> ಸರ್ವೇ ನಂ.1ರಲ್ಲಿನ 22 ಸಾವಿರ ಅಡಿಗಳಷ್ಟು ಭೂಮಿಯನ್ನು ಕಳೆದ ಹದಿನೈದು ವರ್ಷಗಳಿಂದ ಜೋಗಮಯಿ ಎಂಬ ಹೆಸರಿನ ಖಾಸಗಿ ಕಟ್ಟಿಗೆ ಇಂಡಸ್ಟ್ರೀಯ ಮಾಲೀಕರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು. ಅಷ್ಟೇ ಅಲ್ಲ ಆ ಭೂಮಿಯನ್ನು ತಮ್ಮ ಕಂಪನಿಯ ಉಪಯೋಗಕ್ಕೆ ಬಳಸಿಕೊಂಡಿದ್ದರು. ಈ ಕುರಿತು ಅರಣ್ಯ ಇಲಾಖೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಇತ್ತೀಚೆಗೆಷ್ಟೇ ನ್ಯಾಯಾಲಯ ಅರಣ್ಯ ಇಲಾಖೆಯ ಪರವಾಗಿ ತೀರ್ಪು ನೀಡಿತು. <br /> <br /> ಒತ್ತುವರಿಗೊಂಡ ಮೀಸಲು ಅರಣ್ಯ ಭೂಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಎಲ್ಲಾ ಕಟ್ಟಡಗಳನ್ನು ತೆರವುಗೊಳಿಸುವಂತೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹದೇವಪುರ: ಕಾಡುಗೋಡಿ ಸರ್ವೇ ನಂ.1ರಲ್ಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ತಲೆ ಎತ್ತಿದ ಅಕ್ರಮ ಕಟ್ಟಡಗಳನ್ನು ಅರಣ್ಯ ಇಲಾಖೆ ತೆರವುಗೊಳಿಸಿ ಸುಮಾರು ರೂ 10 ಕೋಟಿ ಮೌಲ್ಯದ ಜಮೀನನ್ನು ವಶಪಡಿಸಿಕೊಂಡಿತು.<br /> <br /> ಕಾಡುಗೋಡಿ ಸುತ್ತಮುತ್ತಲೂ ಸುಮಾರು 700 ಎಕರೆಗೂ ಹೆಚ್ಚು ಮೀಸಲು ಅರಣ್ಯ ಭೂಪ್ರದೇಶವಿದ್ದು, ಅನೇಕ ಕಡೆಗಳಲ್ಲಿ ಕೆಲ ಖಾಸಗಿ ಕಂಪನಿಯ ಮಾಲೀಕರು ಅನಧಿಕೃವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ. ಈ ಕುರಿತು ಸೂಕ್ತ ಕ್ರಮ ಜರುಗಿಸಲಾಗುತ್ತಿದೆ. ತೆರವು ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ನಗರ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ವನಶ್ರೀ ಸಿಂಗ್ ತಿಳಿಸಿದರು.<br /> <br /> ಸರ್ವೇ ನಂ.1ರಲ್ಲಿನ 22 ಸಾವಿರ ಅಡಿಗಳಷ್ಟು ಭೂಮಿಯನ್ನು ಕಳೆದ ಹದಿನೈದು ವರ್ಷಗಳಿಂದ ಜೋಗಮಯಿ ಎಂಬ ಹೆಸರಿನ ಖಾಸಗಿ ಕಟ್ಟಿಗೆ ಇಂಡಸ್ಟ್ರೀಯ ಮಾಲೀಕರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದರು. ಅಷ್ಟೇ ಅಲ್ಲ ಆ ಭೂಮಿಯನ್ನು ತಮ್ಮ ಕಂಪನಿಯ ಉಪಯೋಗಕ್ಕೆ ಬಳಸಿಕೊಂಡಿದ್ದರು. ಈ ಕುರಿತು ಅರಣ್ಯ ಇಲಾಖೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಇತ್ತೀಚೆಗೆಷ್ಟೇ ನ್ಯಾಯಾಲಯ ಅರಣ್ಯ ಇಲಾಖೆಯ ಪರವಾಗಿ ತೀರ್ಪು ನೀಡಿತು. <br /> <br /> ಒತ್ತುವರಿಗೊಂಡ ಮೀಸಲು ಅರಣ್ಯ ಭೂಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ಎಲ್ಲಾ ಕಟ್ಟಡಗಳನ್ನು ತೆರವುಗೊಳಿಸುವಂತೆ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>