<p><strong>ಬೆಂಗಳೂರು:</strong> ನಗರದ ವಿವಿಧೆಡೆ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ಬಿಬಿಎಂಪಿ ಶನಿವಾರ ತೆರವುಗೊಳಿಸಿತು. ಯಲಹಂಕದ ಥಣಿಸಂದ್ರ, ರಾಜರಾಜೇಶ್ವರಿನಗರದ ಶ್ರೀಗಂಧದ ಕಾವಲು ಹಾಗೂ ಜವರೇಗೌಡನದೊಡ್ಡಿಗಳಲ್ಲಿ ಪೊಲೀಸರ ನೆರವಿನೊಂದಿಗೆ ಬಿಬಿಎಂಪಿ ಸಿಬ್ಬಂದಿ ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.<br /> <br /> ಯಲಹಂಕ ಬಳಿಯ ಥಣಿಸಂದ್ರ ಗ್ರಾಮದಲ್ಲಿ ಹಾದುಹೋಗುವ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾದ 12 ಮನೆಗಳನ್ನು ನೆಲಸಮ ಮಾಡಲಾಯಿತು. ಪಾಲಿಕೆ ಆಯುಕ್ತರ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಯಿತು. <br /> <br /> ಬೃಹತ್ ನೀರುಗಾಲುವೆ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಘವೇಂದ್ರ ಅವರ ನೇತೃತ್ವದ ತಂಡ, ಬಿಎಂಟಿಎಫ್ ಸಿಬ್ಬಂದಿ ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. <br /> <br /> ರಾಜರಾಜೇಶ್ವರಿನಗರದ ಶ್ರೀಗಂಧದ ಕಾವಲು ಸಮೀಪದ ಕೆರೆಯನ್ನು ಒತ್ತುವರಿ ಮಾಡಿಕೊಂಡು 1 ಎಕರೆ 28 ಗುಂಟೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಮನೆ ಹಾಗೂ ಕಾಂಪೌಂಡ್ಗಳನ್ನು ಪಾಲಿಕೆಯ ಕೆರೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತೆರವುಗೊಳಿಸಿದರು. <br /> <br /> ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ ಬಡಾವಣೆಯ ಜವರೇಗೌಡನದೊಡ್ಡಿ ಹತ್ತಿರ ಉದ್ಯಾನದಲ್ಲಿ ಮುನಿಯಪ್ಪ ಎಂಬುವವರು ಅನಧಿಕೃತವಾಗಿ ಕಟ್ಟಡ ನಿರ್ಮಿಸಿ ಉದ್ಯಾನದ ತಂತಿಬೇಲಿ ಕಾಮಗಾರಿ ನಡೆಸದಂತೆ ತಡೆಯುಂಟು ಮಾಡುತ್ತಿದ್ದರು. ಈ ಪ್ರದೇಶವನ್ನು ಪೊಲೀಸರು ಹಾಗೂ ಬಿಬಿಎಂಪಿ ಯೋಜನಾ ವಿಭಾಗದ ಸಿಬ್ಬಂದಿ ನೆರವಿನಿಂದ ತೆರವುಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ವಿವಿಧೆಡೆ ಅಕ್ರಮವಾಗಿ ನಿರ್ಮಿಸಲಾಗಿದ್ದ ಕಟ್ಟಡಗಳನ್ನು ಬಿಬಿಎಂಪಿ ಶನಿವಾರ ತೆರವುಗೊಳಿಸಿತು. ಯಲಹಂಕದ ಥಣಿಸಂದ್ರ, ರಾಜರಾಜೇಶ್ವರಿನಗರದ ಶ್ರೀಗಂಧದ ಕಾವಲು ಹಾಗೂ ಜವರೇಗೌಡನದೊಡ್ಡಿಗಳಲ್ಲಿ ಪೊಲೀಸರ ನೆರವಿನೊಂದಿಗೆ ಬಿಬಿಎಂಪಿ ಸಿಬ್ಬಂದಿ ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.<br /> <br /> ಯಲಹಂಕ ಬಳಿಯ ಥಣಿಸಂದ್ರ ಗ್ರಾಮದಲ್ಲಿ ಹಾದುಹೋಗುವ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಲಾದ 12 ಮನೆಗಳನ್ನು ನೆಲಸಮ ಮಾಡಲಾಯಿತು. ಪಾಲಿಕೆ ಆಯುಕ್ತರ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಯಿತು. <br /> <br /> ಬೃಹತ್ ನೀರುಗಾಲುವೆ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಘವೇಂದ್ರ ಅವರ ನೇತೃತ್ವದ ತಂಡ, ಬಿಎಂಟಿಎಫ್ ಸಿಬ್ಬಂದಿ ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. <br /> <br /> ರಾಜರಾಜೇಶ್ವರಿನಗರದ ಶ್ರೀಗಂಧದ ಕಾವಲು ಸಮೀಪದ ಕೆರೆಯನ್ನು ಒತ್ತುವರಿ ಮಾಡಿಕೊಂಡು 1 ಎಕರೆ 28 ಗುಂಟೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಮನೆ ಹಾಗೂ ಕಾಂಪೌಂಡ್ಗಳನ್ನು ಪಾಲಿಕೆಯ ಕೆರೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತೆರವುಗೊಳಿಸಿದರು. <br /> <br /> ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ ಬಡಾವಣೆಯ ಜವರೇಗೌಡನದೊಡ್ಡಿ ಹತ್ತಿರ ಉದ್ಯಾನದಲ್ಲಿ ಮುನಿಯಪ್ಪ ಎಂಬುವವರು ಅನಧಿಕೃತವಾಗಿ ಕಟ್ಟಡ ನಿರ್ಮಿಸಿ ಉದ್ಯಾನದ ತಂತಿಬೇಲಿ ಕಾಮಗಾರಿ ನಡೆಸದಂತೆ ತಡೆಯುಂಟು ಮಾಡುತ್ತಿದ್ದರು. ಈ ಪ್ರದೇಶವನ್ನು ಪೊಲೀಸರು ಹಾಗೂ ಬಿಬಿಎಂಪಿ ಯೋಜನಾ ವಿಭಾಗದ ಸಿಬ್ಬಂದಿ ನೆರವಿನಿಂದ ತೆರವುಗೊಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>