<p><strong>ಎಚ್.ಡಿ.ಕೋಟೆ</strong>: ತಾಲ್ಲೂಕಿನ ಹಾಲನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗಡಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳು ಮತ್ತು ಪ್ರಭಾವಿಗಳು ಆಕ್ರಮಿಸಿಕೊಂಡಿದ್ದ 14 ನಿವೇಶನ ಗಳನ್ನು ತಾಲ್ಲೂಕು ಆಡಳಿತ ಮತ್ತು ಪ್ರಭಾರ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಮಂಗಳವಾರ ನೆಲಸಮಗೊಳಿಸಿ ಸರ್ಕಾರದ ವಶಕ್ಕೆ ತೆಗೆದುಕೊಳ್ಳಲಾಯಿತು.<br /> <br /> ಗಂಗಡಹಳ್ಳಿ ಗ್ರಾಮದ ಸರ್ವೆ ನಂ.1ರಲ್ಲಿ ಸರ್ಕಾರಕ್ಕೆ ಸೇರಿದ 4.16ಎಕರೆ ಜಾಗದಲ್ಲಿ 30ಗುಂಟೆ ರಾಷ್ಟ್ರೀಯ ಹೆದ್ದಾರಿಗೂ ಉಳಿದ 3.26 ಎಕರೆ ಜಾಗವನ್ನು 1958ರಲ್ಲಿ ಗ್ರಾ.ಪಂಗೆ ನಿವೇಶನಕ್ಕಾಗಿ ನೀಡಲಾಗಿತ್ತು. <br /> ಆದರೆ, 3.26 ಎಕರೆ ಜಾಗದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಜಿ ಕೆ.ವಿ. ಬಸವರಾಜು ಮತ್ತು ಮಾದೇಗೌಡ ದನದ ಕೊಟ್ಟಿಗೆಯನ್ನು ಅಕ್ರಮವಾಗಿ ನಿರ್ಮಿಸಿಕೊಂಡಿದ್ದರು. <br /> <br /> ಎರಡು ವಾಣಿಜ್ಯ ಮಳಿಗೆಯನ್ನು ರಾಮೇಗೌಡ ಮತ್ತು 1 ವಾಣಿಜ್ಯ ಮಳಿಗೆಯನ್ನು ಗೋವಿಂದೇಗೌಡ ಹಾಗೂ ಉಳಿಕೆ 15 ನಿವೇಶನಗಳನ್ನು ಪ್ರಭಾವಿ ವ್ಯಕ್ತಿಗಳು ಬೇಲಿ ಹಾಕಿಕೊಂಡು ಖಾತೆ ಮಾಡುವಂತೆ ಗ್ರಾಮ ಪಂಚಾಯಿತಿಯಲ್ಲಿ ಒತ್ತಾಯಿಸುತ್ತಿದ್ದರು.<br /> <br /> ಬಾಗಲಕೋಟೆಯಿಂದ ಬಿಳಿಗಿರಿ ರಂಗನಬೆಟ್ಟದ ವರೆಗೆ ರಾಷ್ಟ್ರೀಯ ಹೆದ್ದಾರಿ ಬರುವುದ ರಿಂದ ಗ್ರಾಮದ ಶಾಲೆಯನ್ನು ಸ್ಥಳಾಂತರಿಸಬೇಕಿದ್ದು ಅದಕ್ಕಾಗಿ ಶಾಲೆಗೆ ಈ ನಿವೇಶನವನ್ನು ನೀಡಬೇಕೆಂದು ಗ್ರಾಮ ಪಂಚಾ ಯಿತಿಗೆ ಕಳೆದ ಜೂನ್ ತಿಂಗಳಲ್ಲಿ ತಿಳಿಸಲಾಗಿತ್ತು. ಈ ಸಂಬಂಧ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿವೇಶನದಾರರಿಗೆ ಕೂಡಲೇ ಖಾಲಿ ಮಾಡುವಂತೆ ತಿಳಿಸಿ ನೋಟಿಸ್ ನೀಡಲಾಗಿತ್ತು. <br /> <br /> ಗ್ರಾಮ ಪಂಚಾಯಿತಿ ನೀಡಿರುವ ನೋಟಿಸ್ನ್ನು ಪ್ರಶ್ನಿಸಿ ಉಚ್ಚನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದರು. ನಂತರ ನ್ಯಾಯಾಲಯಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ 2011ರ ಅಕ್ಟೋಬರ್ನಲ್ಲಿ ತಡೆಯಾಜ್ಞೆ ವಜಾ ಆಗಿತ್ತು.<br /> <br /> ಈ ಸಂಬಂಧ ತಹಸೀಲ್ದಾರ್ ಮತ್ತು ತಾಲ್ಲೂಕು ಕಾರ್ಯ ನಿರ್ವಾಹಣಾಧಿಕಾರಿಗಳಿಗೆ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿಯಿಂದ ಪತ್ರ ಬರೆಯಲಾಗಿತ್ತು.ಹುಣಸೂರು ಪ್ರೊಬೇಷನರಿ ಉಪವಿಭಾಗಾಧಿಕಾರಿ ಪುಷ್ಪಲತಾ, ತಹಶೀಲ್ದಾರ್ ಎನ್.ಸಿ. ಜಗದೀಶ್, ಇಓ ಕೃಷ್ಣರಾಜು, ಪಿಡಿಓ ಶ್ರೀಧರ್, ಕಾರ್ಯದರ್ಶಿ ಚಿನ್ನಸ್ವಾಮಿ ಇದ್ದರು.<br /> <br /> ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಅಪರಾಧ ವಿಭಾಗದ ಆರಕ್ಷಕ ಉಪನಿರೀಕ್ಷಕ ತಿಪ್ಪೇಗೌಡ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ</strong>: ತಾಲ್ಲೂಕಿನ ಹಾಲನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗಡಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳು ಮತ್ತು ಪ್ರಭಾವಿಗಳು ಆಕ್ರಮಿಸಿಕೊಂಡಿದ್ದ 14 ನಿವೇಶನ ಗಳನ್ನು ತಾಲ್ಲೂಕು ಆಡಳಿತ ಮತ್ತು ಪ್ರಭಾರ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಮಂಗಳವಾರ ನೆಲಸಮಗೊಳಿಸಿ ಸರ್ಕಾರದ ವಶಕ್ಕೆ ತೆಗೆದುಕೊಳ್ಳಲಾಯಿತು.<br /> <br /> ಗಂಗಡಹಳ್ಳಿ ಗ್ರಾಮದ ಸರ್ವೆ ನಂ.1ರಲ್ಲಿ ಸರ್ಕಾರಕ್ಕೆ ಸೇರಿದ 4.16ಎಕರೆ ಜಾಗದಲ್ಲಿ 30ಗುಂಟೆ ರಾಷ್ಟ್ರೀಯ ಹೆದ್ದಾರಿಗೂ ಉಳಿದ 3.26 ಎಕರೆ ಜಾಗವನ್ನು 1958ರಲ್ಲಿ ಗ್ರಾ.ಪಂಗೆ ನಿವೇಶನಕ್ಕಾಗಿ ನೀಡಲಾಗಿತ್ತು. <br /> ಆದರೆ, 3.26 ಎಕರೆ ಜಾಗದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಜಿ ಕೆ.ವಿ. ಬಸವರಾಜು ಮತ್ತು ಮಾದೇಗೌಡ ದನದ ಕೊಟ್ಟಿಗೆಯನ್ನು ಅಕ್ರಮವಾಗಿ ನಿರ್ಮಿಸಿಕೊಂಡಿದ್ದರು. <br /> <br /> ಎರಡು ವಾಣಿಜ್ಯ ಮಳಿಗೆಯನ್ನು ರಾಮೇಗೌಡ ಮತ್ತು 1 ವಾಣಿಜ್ಯ ಮಳಿಗೆಯನ್ನು ಗೋವಿಂದೇಗೌಡ ಹಾಗೂ ಉಳಿಕೆ 15 ನಿವೇಶನಗಳನ್ನು ಪ್ರಭಾವಿ ವ್ಯಕ್ತಿಗಳು ಬೇಲಿ ಹಾಕಿಕೊಂಡು ಖಾತೆ ಮಾಡುವಂತೆ ಗ್ರಾಮ ಪಂಚಾಯಿತಿಯಲ್ಲಿ ಒತ್ತಾಯಿಸುತ್ತಿದ್ದರು.<br /> <br /> ಬಾಗಲಕೋಟೆಯಿಂದ ಬಿಳಿಗಿರಿ ರಂಗನಬೆಟ್ಟದ ವರೆಗೆ ರಾಷ್ಟ್ರೀಯ ಹೆದ್ದಾರಿ ಬರುವುದ ರಿಂದ ಗ್ರಾಮದ ಶಾಲೆಯನ್ನು ಸ್ಥಳಾಂತರಿಸಬೇಕಿದ್ದು ಅದಕ್ಕಾಗಿ ಶಾಲೆಗೆ ಈ ನಿವೇಶನವನ್ನು ನೀಡಬೇಕೆಂದು ಗ್ರಾಮ ಪಂಚಾ ಯಿತಿಗೆ ಕಳೆದ ಜೂನ್ ತಿಂಗಳಲ್ಲಿ ತಿಳಿಸಲಾಗಿತ್ತು. ಈ ಸಂಬಂಧ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿವೇಶನದಾರರಿಗೆ ಕೂಡಲೇ ಖಾಲಿ ಮಾಡುವಂತೆ ತಿಳಿಸಿ ನೋಟಿಸ್ ನೀಡಲಾಗಿತ್ತು. <br /> <br /> ಗ್ರಾಮ ಪಂಚಾಯಿತಿ ನೀಡಿರುವ ನೋಟಿಸ್ನ್ನು ಪ್ರಶ್ನಿಸಿ ಉಚ್ಚನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದರು. ನಂತರ ನ್ಯಾಯಾಲಯಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ 2011ರ ಅಕ್ಟೋಬರ್ನಲ್ಲಿ ತಡೆಯಾಜ್ಞೆ ವಜಾ ಆಗಿತ್ತು.<br /> <br /> ಈ ಸಂಬಂಧ ತಹಸೀಲ್ದಾರ್ ಮತ್ತು ತಾಲ್ಲೂಕು ಕಾರ್ಯ ನಿರ್ವಾಹಣಾಧಿಕಾರಿಗಳಿಗೆ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯಿತಿಯಿಂದ ಪತ್ರ ಬರೆಯಲಾಗಿತ್ತು.ಹುಣಸೂರು ಪ್ರೊಬೇಷನರಿ ಉಪವಿಭಾಗಾಧಿಕಾರಿ ಪುಷ್ಪಲತಾ, ತಹಶೀಲ್ದಾರ್ ಎನ್.ಸಿ. ಜಗದೀಶ್, ಇಓ ಕೃಷ್ಣರಾಜು, ಪಿಡಿಓ ಶ್ರೀಧರ್, ಕಾರ್ಯದರ್ಶಿ ಚಿನ್ನಸ್ವಾಮಿ ಇದ್ದರು.<br /> <br /> ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಅಪರಾಧ ವಿಭಾಗದ ಆರಕ್ಷಕ ಉಪನಿರೀಕ್ಷಕ ತಿಪ್ಪೇಗೌಡ ಹಾಗೂ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>