<p>ಹುಬ್ಬಳ್ಳಿ: `ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಮುಖ ದಾಖಲೆಗಳೊಂದಿಗೆ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ)ಗೆ 164 ಪುಟಗಳ ಸಮಗ್ರ ವರದಿಯನ್ನು ಸಲ್ಲಿಸಲಾಗಿದೆ~ ಎಂದು ಧಾರವಾಡದ ಸಮಾಜ ಪರಿವರ್ತನಾ ಸಮುದಾಯ (ಎಸ್ಪಿಎಸ್) ಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಸೋಮವಾರ ಇಲ್ಲಿ ಹೇಳಿದರು.<br /> <br /> `ಎಸ್ಪಿಎಸ್, ಪ್ರಕೃತಿ ಸಂಪತ್ತಿನ ಸಂರಕ್ಷಣೆಗಾಗಿ ರಾಷ್ಟ್ರೀಯ ಸಮಿತಿ (ಎನ್ಸಿಪಿಎನ್ಆರ್) ಎಂಬ ಸಂಘಟನೆ ಸ್ಥಾಪಿಸಿದ್ದು ಇದರ ಅಡಿಯಲ್ಲಿ ವಿಶೇಷ ತಂಡ ನಡೆಸಿದ ಸಮೀಕ್ಷೆಯನ್ನುಆಧರಿಸಿ ವರದಿಯನ್ನು ಸಿಇಸಿಗೆ ಇದೇ 20ರಂದು ಸಲ್ಲಿಸಲಾಗಿದೆ.<br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅದಾನಿ ಎಂಟರ್ಪ್ರೈಸಸ್ ಹಾಗೂ ಜಿಂದಾಲ್ ಸ್ಟೀಲ್ ಲಿಮಿಟೆಡ್ ಕಂಪೆನಿಗಳು ನಡೆಸಿದ ಅಕ್ರಮಗಳ ಮಾಹಿತಿಯನ್ನು ಒದಗಿಸಲಾಗಿದೆ. ಇದಕ್ಕೆ ಸಂಬಂಧಿಸಿದ ವಿಚಾರಣೆ ಏಪ್ರಿಲ್ 11ರಂದು ನಡೆಯಲಿದ್ದು ಯಡಿಯೂರಪ್ಪ ಹಾಗೂ ಎರಡು ಕಂಪೆನಿಗಳ ಮುಖ್ಯಸ್ಥರು ಏಪ್ರಿಲ್ 9ರೊಳಗೆ ಉತ್ತರ ನೀಡಬೇಕಾಗಿದೆ~ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: `ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಮುಖ ದಾಖಲೆಗಳೊಂದಿಗೆ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ)ಗೆ 164 ಪುಟಗಳ ಸಮಗ್ರ ವರದಿಯನ್ನು ಸಲ್ಲಿಸಲಾಗಿದೆ~ ಎಂದು ಧಾರವಾಡದ ಸಮಾಜ ಪರಿವರ್ತನಾ ಸಮುದಾಯ (ಎಸ್ಪಿಎಸ್) ಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಸೋಮವಾರ ಇಲ್ಲಿ ಹೇಳಿದರು.<br /> <br /> `ಎಸ್ಪಿಎಸ್, ಪ್ರಕೃತಿ ಸಂಪತ್ತಿನ ಸಂರಕ್ಷಣೆಗಾಗಿ ರಾಷ್ಟ್ರೀಯ ಸಮಿತಿ (ಎನ್ಸಿಪಿಎನ್ಆರ್) ಎಂಬ ಸಂಘಟನೆ ಸ್ಥಾಪಿಸಿದ್ದು ಇದರ ಅಡಿಯಲ್ಲಿ ವಿಶೇಷ ತಂಡ ನಡೆಸಿದ ಸಮೀಕ್ಷೆಯನ್ನುಆಧರಿಸಿ ವರದಿಯನ್ನು ಸಿಇಸಿಗೆ ಇದೇ 20ರಂದು ಸಲ್ಲಿಸಲಾಗಿದೆ.<br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅದಾನಿ ಎಂಟರ್ಪ್ರೈಸಸ್ ಹಾಗೂ ಜಿಂದಾಲ್ ಸ್ಟೀಲ್ ಲಿಮಿಟೆಡ್ ಕಂಪೆನಿಗಳು ನಡೆಸಿದ ಅಕ್ರಮಗಳ ಮಾಹಿತಿಯನ್ನು ಒದಗಿಸಲಾಗಿದೆ. ಇದಕ್ಕೆ ಸಂಬಂಧಿಸಿದ ವಿಚಾರಣೆ ಏಪ್ರಿಲ್ 11ರಂದು ನಡೆಯಲಿದ್ದು ಯಡಿಯೂರಪ್ಪ ಹಾಗೂ ಎರಡು ಕಂಪೆನಿಗಳ ಮುಖ್ಯಸ್ಥರು ಏಪ್ರಿಲ್ 9ರೊಳಗೆ ಉತ್ತರ ನೀಡಬೇಕಾಗಿದೆ~ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>