<p><strong>ಬೆಂಗಳೂರು, (ಪಿಟಿಐ):</strong> ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ ಮಾಲಿಕತ್ವದ ಓಬಳಾಪುರಂ ಗಣಿ ಕಂಪೆನಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದು, ಅದನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತರಾಗಿರುವ ನಾಯ್ಯಮೂರ್ತಿ ಸಂತೋಷ ಹೆಗ್ಡೆ ಅವರು ಪ್ರತಿಪಾದಿಸಿದ್ದಾರೆ.</p>.<p>ಸೋಮವಾರ ಬೆಳಿಗ್ಗೆ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ಬಂಧಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕುರಿತು ತಾವು ಕಳೆದ ಜುಲೈ 27 ರಂದು ಸಲ್ಲಿಸಿದ್ದ ತನಿಖಾ ವರದಿಯ ಆಧಾರದ ಮೇಲೆ ಈ ಬಂಧನ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p>ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ಸಿಬಿಐಗೆ ಒಪ್ಪಿಸಿಲ್ಲ. ಆಂಧ್ರ ಪ್ರದೇಶದ ಸರ್ಕಾರ ತಮ್ಮ ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರ ಈ ಬಂಧನ ನಡೆದಿದೆ ಎಂದು ಅವರು ತಿಳಿಸಿದ್ದಾರೆ.</p>.<p>~ಹಲವಾರು ಬಾರಿ ಓಎಂಸಿ ತಾನು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಲ್ಲ ಎಂದು ಹೇಳಿಕೊಂಡಿದೆ. ಆದರೆ ನಾವು (ನಮ್ಮ ಲೋಕಾಯುಕ್ತ ವರದಿಯಲ್ಲಿ) ಅದು ಅಕ್ರಮಗಳಲ್ಲಿ ತೊಡಗಿರುವುದರ ಬಗ್ಗೆ ದಾಖಲೆ ಸಮೇತ ತೋರಿಸಿದ್ದೇವೆ~ ಎಂದು ಅವರು ಹೇಳಿದ್ದಾರೆ.</p>.<p>ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ಅಗತ್ಯವಾಗಿದೆ ಎಂದು ಪ್ರತಿಪಾದಿಸಿರುವ ಸಂತೋಷ್ ಹೆಗ್ಡೆ ಅವರು, ಕರ್ನಾಟಕದಲ್ಲಿನ ಓಎಂಸಿಯ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂಬುದು ತಮ್ಮ ಅಭಿಪ್ರಾಯ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು, (ಪಿಟಿಐ):</strong> ಮಾಜಿ ಸಚಿವ ಜಿ ಜನಾರ್ದನ ರೆಡ್ಡಿ ಮಾಲಿಕತ್ವದ ಓಬಳಾಪುರಂ ಗಣಿ ಕಂಪೆನಿ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದು, ಅದನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ಕರ್ನಾಟಕ ಲೋಕಾಯುಕ್ತರಾಗಿ ನಿವೃತ್ತರಾಗಿರುವ ನಾಯ್ಯಮೂರ್ತಿ ಸಂತೋಷ ಹೆಗ್ಡೆ ಅವರು ಪ್ರತಿಪಾದಿಸಿದ್ದಾರೆ.</p>.<p>ಸೋಮವಾರ ಬೆಳಿಗ್ಗೆ ಜನಾರ್ದನ ರೆಡ್ಡಿ ಅವರನ್ನು ಸಿಬಿಐ ಬಂಧಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಕುರಿತು ತಾವು ಕಳೆದ ಜುಲೈ 27 ರಂದು ಸಲ್ಲಿಸಿದ್ದ ತನಿಖಾ ವರದಿಯ ಆಧಾರದ ಮೇಲೆ ಈ ಬಂಧನ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>.<p>ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ಸಿಬಿಐಗೆ ಒಪ್ಪಿಸಿಲ್ಲ. ಆಂಧ್ರ ಪ್ರದೇಶದ ಸರ್ಕಾರ ತಮ್ಮ ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರ ಈ ಬಂಧನ ನಡೆದಿದೆ ಎಂದು ಅವರು ತಿಳಿಸಿದ್ದಾರೆ.</p>.<p>~ಹಲವಾರು ಬಾರಿ ಓಎಂಸಿ ತಾನು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಲ್ಲ ಎಂದು ಹೇಳಿಕೊಂಡಿದೆ. ಆದರೆ ನಾವು (ನಮ್ಮ ಲೋಕಾಯುಕ್ತ ವರದಿಯಲ್ಲಿ) ಅದು ಅಕ್ರಮಗಳಲ್ಲಿ ತೊಡಗಿರುವುದರ ಬಗ್ಗೆ ದಾಖಲೆ ಸಮೇತ ತೋರಿಸಿದ್ದೇವೆ~ ಎಂದು ಅವರು ಹೇಳಿದ್ದಾರೆ.</p>.<p>ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ಅಗತ್ಯವಾಗಿದೆ ಎಂದು ಪ್ರತಿಪಾದಿಸಿರುವ ಸಂತೋಷ್ ಹೆಗ್ಡೆ ಅವರು, ಕರ್ನಾಟಕದಲ್ಲಿನ ಓಎಂಸಿಯ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂಬುದು ತಮ್ಮ ಅಭಿಪ್ರಾಯ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>