<p>ಧಾರವಾಡ: ಇಲ್ಲಿಯ ಮಣಕಿಲ್ಲಾದ ಗೋದಾಮಿನಲ್ಲಿ ಪಡಿತರ ಚೀಟಿದಾರರಿಗೆ ಪೂರೈಸಬೇಕಿದ್ದ ಗೋಧಿ ಹಾಗೂ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಆರೋಪಿಯನ್ನು ಶಹರ ಠಾಣೆ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ.<br /> <br /> ಮಾಳಾಪುರದ ಜಾಫರ್ ಜೈಲಾನಿ ಅಮ್ಮಿನಬಾವಿ ಬಂಧಿತ. ಈತ ಸೂಪರ್ ಮಾರ್ಕೆಟ್ನಲ್ಲಿ ಅಂಗಡಿ ಇಟ್ಟುಕೊಂಡಿದ್ದಾನೆ. ಇತ್ತೀಚೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸೇರಿದ 13 ಚೀಲ ಗೋದಿ, 4 ಚೀಲ ಅಕ್ಕಿಯನ್ನು ಜಾಫರ್, ತನ್ನ ಮಣಕಿಲ್ಲಾದ ಗೋದಾಮಿನಲ್ಲಿ ದಾಸ್ತಾನು ಮಾಡಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದ ಪೊಲೀಸರು, 17 ಕ್ವಿಂಟಾಲ್ ಧಾನ್ಯಗಳನ್ನು ವಶಪಡಿಸಿಕೊಂಡಿದ್ದಾರೆ.<br /> <br /> ಎಸಿಪಿ ಎಚ್.ಎಸ್.ಕೇರಿ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಬಸವೇಶ್ವರ ಹೀರಾ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಇನ್ಸ್ಪೆಕ್ಟರ್ ಶೇಖರಪ್ಪ ಹಾಗೂ ಸಿಬ್ಬಂದಿ ಇದ್ದರು.<br /> <br /> <strong>ಅಮರಗೋಳದಲ್ಲೂ ಪರಿಶೀಲನೆ</strong><br /> ಹುಬ್ಬಳ್ಳಿ: ಇಲ್ಲಿನ ಬಂಕಾಪುರ ಚೌಕದ ಗೋದಾಮಿನಲ್ಲಿ ಪಡಿತರ ಅಕ್ಕಿ ವಶಪಡಿಸಿಕೊಂಡ ಪ್ರಕರಣಕ್ಕೆ ಪೂರಕವಾಗಿ ಅಮರಗೋಳದ ಎಪಿಎಂಸಿ ಪ್ರಾಂಗಣದಲ್ಲಿರುವ ಉಗ್ರಾಣವೊಂದರ ಮೇಲೆ ಎಸಿಪಿ ಯಶೋದಾ ಒಂಟಗೋಡಿ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು.<br /> <br /> ಬಂಕಾಪುರ ಚೌಕದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಎಪಿಎಂಸಿ ಪ್ರಾಂಗಣದ ಆ ಉಗ್ರಾಣದಿಂದ ಖರೀದಿಸಲಾಗಿತ್ತು ಎಂಬ ಮಾಹಿತಿಯ ಹಿನ್ನೆಲೆಯಲ್ಲಿದಾಳಿ ನಡೆಸಲಾಗಿತ್ತು. ದಾಳಿಯ ವೇಳೆ ಪಡಿತರ ಅಕ್ಕಿ ಸೇರಿದಂತೆ ಯಾವುದೇ ಧಾನ್ಯಗಳ ಅಕ್ರಮ ದಾಸ್ತಾನು ಕಂಡುಬರಲಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ಇಲ್ಲಿಯ ಮಣಕಿಲ್ಲಾದ ಗೋದಾಮಿನಲ್ಲಿ ಪಡಿತರ ಚೀಟಿದಾರರಿಗೆ ಪೂರೈಸಬೇಕಿದ್ದ ಗೋಧಿ ಹಾಗೂ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಆರೋಪಿಯನ್ನು ಶಹರ ಠಾಣೆ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ.<br /> <br /> ಮಾಳಾಪುರದ ಜಾಫರ್ ಜೈಲಾನಿ ಅಮ್ಮಿನಬಾವಿ ಬಂಧಿತ. ಈತ ಸೂಪರ್ ಮಾರ್ಕೆಟ್ನಲ್ಲಿ ಅಂಗಡಿ ಇಟ್ಟುಕೊಂಡಿದ್ದಾನೆ. ಇತ್ತೀಚೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸೇರಿದ 13 ಚೀಲ ಗೋದಿ, 4 ಚೀಲ ಅಕ್ಕಿಯನ್ನು ಜಾಫರ್, ತನ್ನ ಮಣಕಿಲ್ಲಾದ ಗೋದಾಮಿನಲ್ಲಿ ದಾಸ್ತಾನು ಮಾಡಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದ ಪೊಲೀಸರು, 17 ಕ್ವಿಂಟಾಲ್ ಧಾನ್ಯಗಳನ್ನು ವಶಪಡಿಸಿಕೊಂಡಿದ್ದಾರೆ.<br /> <br /> ಎಸಿಪಿ ಎಚ್.ಎಸ್.ಕೇರಿ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಬಸವೇಶ್ವರ ಹೀರಾ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಇನ್ಸ್ಪೆಕ್ಟರ್ ಶೇಖರಪ್ಪ ಹಾಗೂ ಸಿಬ್ಬಂದಿ ಇದ್ದರು.<br /> <br /> <strong>ಅಮರಗೋಳದಲ್ಲೂ ಪರಿಶೀಲನೆ</strong><br /> ಹುಬ್ಬಳ್ಳಿ: ಇಲ್ಲಿನ ಬಂಕಾಪುರ ಚೌಕದ ಗೋದಾಮಿನಲ್ಲಿ ಪಡಿತರ ಅಕ್ಕಿ ವಶಪಡಿಸಿಕೊಂಡ ಪ್ರಕರಣಕ್ಕೆ ಪೂರಕವಾಗಿ ಅಮರಗೋಳದ ಎಪಿಎಂಸಿ ಪ್ರಾಂಗಣದಲ್ಲಿರುವ ಉಗ್ರಾಣವೊಂದರ ಮೇಲೆ ಎಸಿಪಿ ಯಶೋದಾ ಒಂಟಗೋಡಿ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು.<br /> <br /> ಬಂಕಾಪುರ ಚೌಕದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಎಪಿಎಂಸಿ ಪ್ರಾಂಗಣದ ಆ ಉಗ್ರಾಣದಿಂದ ಖರೀದಿಸಲಾಗಿತ್ತು ಎಂಬ ಮಾಹಿತಿಯ ಹಿನ್ನೆಲೆಯಲ್ಲಿದಾಳಿ ನಡೆಸಲಾಗಿತ್ತು. ದಾಳಿಯ ವೇಳೆ ಪಡಿತರ ಅಕ್ಕಿ ಸೇರಿದಂತೆ ಯಾವುದೇ ಧಾನ್ಯಗಳ ಅಕ್ರಮ ದಾಸ್ತಾನು ಕಂಡುಬರಲಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>