<p>ಚಿಕ್ಕಮಗಳೂರು: ಸಮೀಪದ ಮಲ್ಲೇನಹಳ್ಳಿ ಸುತ್ತಲ ಪ್ರದೇಶಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟ ತಡೆಗಟ್ಟಬೇಕು ಎಂದು ಆಗ್ರಹಿಸಿ ವಿವಿಧ ಗ್ರಾಮಗಳ ಮಹಿಳೆಯರು ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.<br /> <br /> ಅಕ್ರಮ ಮದ್ಯ ಮಾರಾಟ ದಂಧೆಗೆ ಕಡಿವಾಣ ಹಾಕುವಂತೆ ಘೋಷಣೆ ಹಾಕಿದ ಮಹಿಳೆಯರು, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಬೇಕು. ಆದಷ್ಟು ಶೀಘ್ರ ಅಕ್ರಮ ಮದ್ಯ ಮಾರಾಟ ದಂಧೆ ತಡೆಗಟ್ಟಬೇಕು ಎಂದು ಆಗ್ರಹಿಸಿದರು.<br /> <br /> ಮಲ್ಲೇನಹಳ್ಳಿ, ಕುಮಾರಗಿರಿ, ಹೂವೇನಹಳ್ಳಿ, ಕಾಮೇನಹಳ್ಳಿ, ಹೊಸೂರು ಸೇರಿದಂತೆ ಸುತ್ತಲ ಹಳ್ಳಿಗಳಲ್ಲಿ ಮದ್ಯ ಮಾರಾಟಗಾರರು ಮನೆ ಮನೆಗೇ ಬಂದು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಈ ಗ್ರಾಮಗಳ ಬಹುತೇಕ ಎಲ್ಲ ಮನೆಗಳಲ್ಲಿನ ದುಡಿಯುವ ಪುರುಷರೆಲ್ಲ ಕುಡಿತಕ್ಕೆ ದಾಸರಾಗಿ ಹೋಗಿದ್ದಾರೆ. ಕುಡಿದ ಅಮಲಿನಲ್ಲಿ ಮನೆಯ ಹೆಂಗಸರನ್ನು ಹಿಡಿದು ಬಡಿಯುತ್ತಿದ್ದಾರೆ. ಮಕ್ಕಳಿಗೂ ಕಿರುಕುಳ ಹೆಚ್ಚುತ್ತಿದೆ ಎಂದು ಮಹಿಳೆಯರು ಅಲವತ್ತುಕೊಂಡರು.<br /> <br /> ಮದ್ಯ ಮಾರುವವರನ್ನು ಪ್ರಶ್ನಿಸಿದರೆ ಬೆದರಿಕೆ ಹಾಕುತ್ತಾರೆ. ಕೂಲಿ ಹಣವೆಲ್ಲ ಕುಡಿತಕ್ಕೆ ಹೋಗುತ್ತಿದ್ದು, ಸಂಸಾರ ನಿರ್ವಹಣೆಯೇ ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಹೆಚ್ಚುವರಿ ಜಿಲ್ಲಾಧಿಕಾರಿ ಮನವಿಪತ್ರ ಸ್ವೀಕರಿಸಿದರು. <br /> <br /> ಮೀನಾಕ್ಷಿ, ಮಮತಾ, ಪುಟ್ಟಮ್ಮ, ಚಂದ್ರಮ್ಮ, ಲಕ್ಕಮ್ಮ ಧರಣಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಸಮೀಪದ ಮಲ್ಲೇನಹಳ್ಳಿ ಸುತ್ತಲ ಪ್ರದೇಶಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟ ತಡೆಗಟ್ಟಬೇಕು ಎಂದು ಆಗ್ರಹಿಸಿ ವಿವಿಧ ಗ್ರಾಮಗಳ ಮಹಿಳೆಯರು ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.<br /> <br /> ಅಕ್ರಮ ಮದ್ಯ ಮಾರಾಟ ದಂಧೆಗೆ ಕಡಿವಾಣ ಹಾಕುವಂತೆ ಘೋಷಣೆ ಹಾಕಿದ ಮಹಿಳೆಯರು, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಬೇಕು. ಆದಷ್ಟು ಶೀಘ್ರ ಅಕ್ರಮ ಮದ್ಯ ಮಾರಾಟ ದಂಧೆ ತಡೆಗಟ್ಟಬೇಕು ಎಂದು ಆಗ್ರಹಿಸಿದರು.<br /> <br /> ಮಲ್ಲೇನಹಳ್ಳಿ, ಕುಮಾರಗಿರಿ, ಹೂವೇನಹಳ್ಳಿ, ಕಾಮೇನಹಳ್ಳಿ, ಹೊಸೂರು ಸೇರಿದಂತೆ ಸುತ್ತಲ ಹಳ್ಳಿಗಳಲ್ಲಿ ಮದ್ಯ ಮಾರಾಟಗಾರರು ಮನೆ ಮನೆಗೇ ಬಂದು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಈ ಗ್ರಾಮಗಳ ಬಹುತೇಕ ಎಲ್ಲ ಮನೆಗಳಲ್ಲಿನ ದುಡಿಯುವ ಪುರುಷರೆಲ್ಲ ಕುಡಿತಕ್ಕೆ ದಾಸರಾಗಿ ಹೋಗಿದ್ದಾರೆ. ಕುಡಿದ ಅಮಲಿನಲ್ಲಿ ಮನೆಯ ಹೆಂಗಸರನ್ನು ಹಿಡಿದು ಬಡಿಯುತ್ತಿದ್ದಾರೆ. ಮಕ್ಕಳಿಗೂ ಕಿರುಕುಳ ಹೆಚ್ಚುತ್ತಿದೆ ಎಂದು ಮಹಿಳೆಯರು ಅಲವತ್ತುಕೊಂಡರು.<br /> <br /> ಮದ್ಯ ಮಾರುವವರನ್ನು ಪ್ರಶ್ನಿಸಿದರೆ ಬೆದರಿಕೆ ಹಾಕುತ್ತಾರೆ. ಕೂಲಿ ಹಣವೆಲ್ಲ ಕುಡಿತಕ್ಕೆ ಹೋಗುತ್ತಿದ್ದು, ಸಂಸಾರ ನಿರ್ವಹಣೆಯೇ ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಹೆಚ್ಚುವರಿ ಜಿಲ್ಲಾಧಿಕಾರಿ ಮನವಿಪತ್ರ ಸ್ವೀಕರಿಸಿದರು. <br /> <br /> ಮೀನಾಕ್ಷಿ, ಮಮತಾ, ಪುಟ್ಟಮ್ಮ, ಚಂದ್ರಮ್ಮ, ಲಕ್ಕಮ್ಮ ಧರಣಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>