<p>ಹಾಸನ: ಗ್ರಾಮದಲ್ಲಿ ಹಲವು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಅದನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಕರೀಗೌಡನಕೊಪ್ಪಲಿನಲ್ಲಿ ನಡೆದಿದೆ.<br /> <br /> ಕರೀಗೌಡನಕೊಪ್ಪಲು ಗ್ರಾಮದಲ್ಲಿ ಯೋಗೇಶ, ರಾಜೇಗೌಡ ಹಾಗೂ ರಾಮಕೃಷ್ಣ ಎಂಬುವವರು ಕಳೆದ ಮೂರು ವರ್ಷಗಳಿಂದ ಅನಧಿಕೃತವಾಗಿ ಮದ್ಯ ಮಾಡಾಟ ಮಾಡುತ್ತಿದ್ದಾರೆ. ಈ ಬಗ್ಗೆ ಆಗಸ್ಟ್ 16ರಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಇವರನ್ನು ನಿಯಂತ್ರಿಸಲು ವಿನಂತಿಸಲಾಗಿತ್ತು. ಆದರೆ ಈ ವರೆಗೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಾತ್ರವಲ್ಲ ಅಬಕಾರಿ ಇನ್ಸ್ಪೆಕ್ಟರ್ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಅವರು ಅಕ್ರಮ ಮದ್ಯ ಮಾರಾಟಗಾರರನ್ನು ನಿಯಂತ್ರಿಸುವ ಬದಲು ಅವರಿಂದಲೇ ಹಣ ಪಡೆಯುತ್ತಿದ್ದಾರೆ~ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> `ಗ್ರಾಮಸ್ಥರಿಂದ ಈ ಅಕ್ರಮವನ್ನು ತಡೆಯಲು ಆಗುತ್ತಿಲ್ಲ. ಬದಲಿಗೆ ಅವರೇ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಸಂಜೆ ವೇಳೆ ಮದ್ಯಪಾನ ಮಾಡಿ ಊರವರನ್ನು ಏಕವಚನದಲ್ಲಿ ಬಯ್ದಾಡುತ್ತಾರೆ. ತಡರಾತ್ರಿವರೆಗೂ ಗದ್ದಲ, ಜಗಳ ನಡೆಯುತ್ತದೆ ಎಂದು ಮಹಿಳೆಯರು ದೂರಿದರು.<br /> <br /> ಶುಕ್ರವಾರ ಪ್ರತಿಭಟನೆಗೆ ಇಳಿದ ಗ್ರಾಮಸ್ಥರು ಮದ್ಯದ ಬಾಟಲುಗ ಳನ್ನು ಮಾರ್ಗದ ಮಧ್ಯದಲ್ಲಿಟ್ಟು ಸ್ವಲ್ಪ ಹೊತ್ತು ರಸ್ತೆ ತಡೆ ನಡೆಸಿದರು. ಅಬಕಾರಿ ಇಲಾಖೆಯ ಅಧಿಕಾರಿಗಳು ಬಂದು ನಮ್ಮ ಮನವಿ ಸ್ವೀಕರಿಸುವವರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದರು.<br /> <br /> ಶೀಘ್ರದಲ್ಲೇ ಅಕ್ರಮ ಮದ್ಯ ಮಾರಾಟವನ್ನು ನಿಯಂತ್ರಿಸದಿದ್ದರೆ ಈ ವೃತ್ತಿಗೆ ಸರ್ಕಾರದ ಅನುಮತಿ ಇದೆ ಎಂದು ಭಾವಿಸಿ ಮನೆಮನೆಗಳಲ್ಲೂ ಅಂಗಡಿ ತೆರೆಯುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಗ್ರಾಮದಲ್ಲಿ ಹಲವು ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಅದನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಕರೀಗೌಡನಕೊಪ್ಪಲಿನಲ್ಲಿ ನಡೆದಿದೆ.<br /> <br /> ಕರೀಗೌಡನಕೊಪ್ಪಲು ಗ್ರಾಮದಲ್ಲಿ ಯೋಗೇಶ, ರಾಜೇಗೌಡ ಹಾಗೂ ರಾಮಕೃಷ್ಣ ಎಂಬುವವರು ಕಳೆದ ಮೂರು ವರ್ಷಗಳಿಂದ ಅನಧಿಕೃತವಾಗಿ ಮದ್ಯ ಮಾಡಾಟ ಮಾಡುತ್ತಿದ್ದಾರೆ. ಈ ಬಗ್ಗೆ ಆಗಸ್ಟ್ 16ರಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಇವರನ್ನು ನಿಯಂತ್ರಿಸಲು ವಿನಂತಿಸಲಾಗಿತ್ತು. ಆದರೆ ಈ ವರೆಗೆ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮಾತ್ರವಲ್ಲ ಅಬಕಾರಿ ಇನ್ಸ್ಪೆಕ್ಟರ್ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಅವರು ಅಕ್ರಮ ಮದ್ಯ ಮಾರಾಟಗಾರರನ್ನು ನಿಯಂತ್ರಿಸುವ ಬದಲು ಅವರಿಂದಲೇ ಹಣ ಪಡೆಯುತ್ತಿದ್ದಾರೆ~ ಎಂದು ಪ್ರತಿಭಟನಾಕಾರರು ಆರೋಪಿಸಿದರು.<br /> <br /> `ಗ್ರಾಮಸ್ಥರಿಂದ ಈ ಅಕ್ರಮವನ್ನು ತಡೆಯಲು ಆಗುತ್ತಿಲ್ಲ. ಬದಲಿಗೆ ಅವರೇ ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಸಂಜೆ ವೇಳೆ ಮದ್ಯಪಾನ ಮಾಡಿ ಊರವರನ್ನು ಏಕವಚನದಲ್ಲಿ ಬಯ್ದಾಡುತ್ತಾರೆ. ತಡರಾತ್ರಿವರೆಗೂ ಗದ್ದಲ, ಜಗಳ ನಡೆಯುತ್ತದೆ ಎಂದು ಮಹಿಳೆಯರು ದೂರಿದರು.<br /> <br /> ಶುಕ್ರವಾರ ಪ್ರತಿಭಟನೆಗೆ ಇಳಿದ ಗ್ರಾಮಸ್ಥರು ಮದ್ಯದ ಬಾಟಲುಗ ಳನ್ನು ಮಾರ್ಗದ ಮಧ್ಯದಲ್ಲಿಟ್ಟು ಸ್ವಲ್ಪ ಹೊತ್ತು ರಸ್ತೆ ತಡೆ ನಡೆಸಿದರು. ಅಬಕಾರಿ ಇಲಾಖೆಯ ಅಧಿಕಾರಿಗಳು ಬಂದು ನಮ್ಮ ಮನವಿ ಸ್ವೀಕರಿಸುವವರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದರು.<br /> <br /> ಶೀಘ್ರದಲ್ಲೇ ಅಕ್ರಮ ಮದ್ಯ ಮಾರಾಟವನ್ನು ನಿಯಂತ್ರಿಸದಿದ್ದರೆ ಈ ವೃತ್ತಿಗೆ ಸರ್ಕಾರದ ಅನುಮತಿ ಇದೆ ಎಂದು ಭಾವಿಸಿ ಮನೆಮನೆಗಳಲ್ಲೂ ಅಂಗಡಿ ತೆರೆಯುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>