<p><strong>ಮಂಡ್ಯ: </strong>ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದ ಪ್ರಮಾಣ ಹೆಚ್ಚಾಗಿದ್ದು, ಗ್ರಾಮೀಣ ಭಾಗದಲ್ಲಿ ಕುಟುಂಬಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ವಿವಿಧ ಮಹಿಳಾ ಸಂಘಟನೆಗಳ ಸದಸ್ಯರು ಗುರುವಾರ ಮಂಡ್ಯದಲ್ಲಿ ಪ್ರತಿಭಟನಾ ಜಾಥಾ, ಧರಣಿ ನಡೆಸಿದರು.<br /> <br /> ಮಹಿಳಾ ಮುನ್ನಡೆ ಸಂಘಟನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಅಬಕಾರಿ ಇಲಾಖೆ ಕಚೇರಿ ಬಳಿ ಪ್ರತಿಭಟಿಸಿದ ಪ್ರತಿಭಟನಾಕಾರರು, ಜಿಲ್ಲೆಯಲ್ಲಿ ಅನಧಿಕೃತ ಮದ್ಯ ಮಾರಾಟ ವ್ಯಾಪಕವಾಗಿದೆ. ಕಳಪೆ ಗುಣಮಟ್ಟದ ಮದ್ಯ ಮಾರಾಟ ಆಗುತ್ತಿದ್ದರೂ ಇಲಾಖೆಯ ಅಧಿಕಾರಿಗಳು ಕಂಡೂ ಕಾಣದಂತೆ ಇದ್ದಾರೆ ಎಂದು ದೂರಿದರು.<br /> <br /> ಸಿಲ್ವರ್ ಜ್ಯೂಬಿಲಿ ಪಾರ್ಕ್ನಿಂದ ಮೆರವಣಿಗೆಯಲ್ಲಿ ತೆರಳಿದ ಕಾರ್ಯಕರ್ತೆಯರು, ಸದಸ್ಯರು ಇಲಾಖೆಯ ಅಧಿಕಾರಿಗಳ ವೈಫಲ್ಯದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನೂ ಕೂಗಿದರು. ವಿವಿಧ ಭಿತ್ತಿಪತ್ರಗಳನ್ನು ಹಿಡಿದಿದ್ದು, ಆದಷ್ಟು ತ್ವರಿತಗತಿಯಲ್ಲಿ ಇಂಥ ಅಕ್ರಮ ಮಾರಾಟದ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.<br /> <br /> <strong>ಬೇಡಿಕೆಗಳು: </strong>ಅನಧಿಕೃತ ಮದ್ಯದಂಗಡಿಗಳನ್ನು ಮುಚ್ಚಿಸಬೇಕು, ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು, ಜಿಲ್ಲೆಗಳಿಗೆ ನಿಗದಿತ ಮದ್ಯ ಮಾರಾಟದ ಗುರಿ ನಿಗದಿಸುವುದನ್ನು ಕೈಬಿಡಬೇಕು, ಜನವಸತಿ ಪ್ರದೇಶದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಬಾರದು ಎಂಬ ಬೇಡಿಕೆಗಳಿರುವ ಮನವಿಯನ್ನು ನೀಡಿದರು.<br /> <br /> ಮಹಿಳಾ ಮುನ್ನಡೆ ಸಂಘಟನೆ ನೇತೃತ್ವದ ಪ್ರತಿಭಟನೆಯಲ್ಲಿ ಹಿರಿಯ ಗಾಂಧಿವಾದಿ ಸುರೇಂದ್ರ ಕೌಲಗಿ, ಸ್ಪಂದನಾ ಸಂಘಟನೆಯ ನಾಗರೇವಕ್ಕ, ಕರ್ನಾಟಕ ಜನಶಕ್ತಿ ಸಂಘಟನೆಯ ಡಾ. ವಾಸು, ಮಹಿಳಾ ಮುನ್ನಡೆ ಸಂಘಟನೆಯ ಮಲ್ಲಿಗೆ, ವಿಶ್ವನಾಥ್, ಸ್ಲಂ ನಿವಾಸಿಗಳ ಒಕ್ಕೂಟದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದ ಪ್ರಮಾಣ ಹೆಚ್ಚಾಗಿದ್ದು, ಗ್ರಾಮೀಣ ಭಾಗದಲ್ಲಿ ಕುಟುಂಬಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ ವಿವಿಧ ಮಹಿಳಾ ಸಂಘಟನೆಗಳ ಸದಸ್ಯರು ಗುರುವಾರ ಮಂಡ್ಯದಲ್ಲಿ ಪ್ರತಿಭಟನಾ ಜಾಥಾ, ಧರಣಿ ನಡೆಸಿದರು.<br /> <br /> ಮಹಿಳಾ ಮುನ್ನಡೆ ಸಂಘಟನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಅಬಕಾರಿ ಇಲಾಖೆ ಕಚೇರಿ ಬಳಿ ಪ್ರತಿಭಟಿಸಿದ ಪ್ರತಿಭಟನಾಕಾರರು, ಜಿಲ್ಲೆಯಲ್ಲಿ ಅನಧಿಕೃತ ಮದ್ಯ ಮಾರಾಟ ವ್ಯಾಪಕವಾಗಿದೆ. ಕಳಪೆ ಗುಣಮಟ್ಟದ ಮದ್ಯ ಮಾರಾಟ ಆಗುತ್ತಿದ್ದರೂ ಇಲಾಖೆಯ ಅಧಿಕಾರಿಗಳು ಕಂಡೂ ಕಾಣದಂತೆ ಇದ್ದಾರೆ ಎಂದು ದೂರಿದರು.<br /> <br /> ಸಿಲ್ವರ್ ಜ್ಯೂಬಿಲಿ ಪಾರ್ಕ್ನಿಂದ ಮೆರವಣಿಗೆಯಲ್ಲಿ ತೆರಳಿದ ಕಾರ್ಯಕರ್ತೆಯರು, ಸದಸ್ಯರು ಇಲಾಖೆಯ ಅಧಿಕಾರಿಗಳ ವೈಫಲ್ಯದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನೂ ಕೂಗಿದರು. ವಿವಿಧ ಭಿತ್ತಿಪತ್ರಗಳನ್ನು ಹಿಡಿದಿದ್ದು, ಆದಷ್ಟು ತ್ವರಿತಗತಿಯಲ್ಲಿ ಇಂಥ ಅಕ್ರಮ ಮಾರಾಟದ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.<br /> <br /> <strong>ಬೇಡಿಕೆಗಳು: </strong>ಅನಧಿಕೃತ ಮದ್ಯದಂಗಡಿಗಳನ್ನು ಮುಚ್ಚಿಸಬೇಕು, ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು, ಜಿಲ್ಲೆಗಳಿಗೆ ನಿಗದಿತ ಮದ್ಯ ಮಾರಾಟದ ಗುರಿ ನಿಗದಿಸುವುದನ್ನು ಕೈಬಿಡಬೇಕು, ಜನವಸತಿ ಪ್ರದೇಶದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಬಾರದು ಎಂಬ ಬೇಡಿಕೆಗಳಿರುವ ಮನವಿಯನ್ನು ನೀಡಿದರು.<br /> <br /> ಮಹಿಳಾ ಮುನ್ನಡೆ ಸಂಘಟನೆ ನೇತೃತ್ವದ ಪ್ರತಿಭಟನೆಯಲ್ಲಿ ಹಿರಿಯ ಗಾಂಧಿವಾದಿ ಸುರೇಂದ್ರ ಕೌಲಗಿ, ಸ್ಪಂದನಾ ಸಂಘಟನೆಯ ನಾಗರೇವಕ್ಕ, ಕರ್ನಾಟಕ ಜನಶಕ್ತಿ ಸಂಘಟನೆಯ ಡಾ. ವಾಸು, ಮಹಿಳಾ ಮುನ್ನಡೆ ಸಂಘಟನೆಯ ಮಲ್ಲಿಗೆ, ವಿಶ್ವನಾಥ್, ಸ್ಲಂ ನಿವಾಸಿಗಳ ಒಕ್ಕೂಟದ ಮುಖಂಡರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>