<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಬ್ಯಾಲ ಹುಣ್ಸಿ ಬಳಿ ಅಕ್ರಮ ಗಣಿಗಾರಿಕೆ ಅಡ್ಡೆಯ ಮೇಲೆ ಶನಿವಾರ ರಾತ್ರಿ ತಹಶೀಲ್ದಾರ್ ವಿಜಯಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಯಾಂತ್ರೀಕೃತ ದೋಣಿ ಮತ್ತು ಜೆಸಿಬಿ ವಶಪಡಿಸಿಕೊಂಡಿದೆ.<br /> <br /> ತುಂಗಭದ್ರಾ ನದಿ ಪಾತ್ರದಲ್ಲಿ ರಾತ್ರೋ ರಾತ್ರಿ ಅಕ್ರಮ ದಂಧೆ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸ್ ಮತ್ತು ಪಿಡಬ್ಲೂಡಿ ಸಿಬ್ಬಂದಿಯ ತಂಡ ದಾಳಿ ನಡೆಸಿದ್ದರು.<br /> <br /> ಜೆಸಿಬಿ ಚಾಲಕ ಹಾಗೂ ದೋಣಿ ನಾವಿಕ ಪರಾರಿಯಾಗಿದ್ದಾರೆ. ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿರು ವವರನ್ನು ಪತ್ತೆ ಹಚ್ಚಲು ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ ಎಂದು ತಹಶೀಲ್ದಾರ್ ವಿಜಯಕುಮಾರ್ ತಿಳಿಸಿದ್ದಾರೆ.<br /> <br /> ತಾಲ್ಲೂಕಿನ ಅಧಿಕಾರಿಗಳು ತುಂಗಭದ್ರಾ ನದಿಯ ಬಲದಂಡೆಯುದ್ದಕ್ಕೂ ಅಕ್ರಮ ದಂಧೆಗೆ ಕಡಿವಾಣ ಹಾಕುತ್ತಿದ್ದರೂ ಎಡದಂಡೆಯ ಮರಳು ಚೋರರು ಗಡಿದಾಟಿ ಅಕ್ರಮವಾಗಿ ನೈಸರ್ಗಿಕ ಸಂಪತ್ತು ಲೂಟಿ ಮಾಡುತ್ತಿದ್ದಾರೆ.<br /> <br /> ತುಂಗಭದ್ರಾ ನದಿ ಹರಿಯುವಿಕೆ ಆಧರಿಸಿ ಬಳ್ಳಾರಿ, ಹಾವೇರಿ ಮತ್ತು ಗದಗ ಜಿಲ್ಲೆಯ ಗಡಿ ನಿರ್ಧಾರವಾಗಿದೆ. ಈ ಮೂರು ಜಿಲ್ಲೆಗಳಿಗೆ ಸಂಬಂಧಪಟ್ಟಂತೆ ನದಿಪಾತ್ರದಲ್ಲಿ ಜಂಟಿ ಸರ್ವೆ ನಡೆಸುವತನಕ ಮರಳು ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಎ.ಎ.ಬಿಸ್ವಾಸ್ ಸೂಚನೆ ನೀಡಿದರೂ ಜಂಟಿ ಸರ್ವೆ ಕಾರ್ಯಕ್ಕೆ ಇನ್ನೂ ಚಾಲನೆ ಸಿಕ್ಕಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ತಾಲ್ಲೂಕಿನ ಬ್ಯಾಲ ಹುಣ್ಸಿ ಬಳಿ ಅಕ್ರಮ ಗಣಿಗಾರಿಕೆ ಅಡ್ಡೆಯ ಮೇಲೆ ಶನಿವಾರ ರಾತ್ರಿ ತಹಶೀಲ್ದಾರ್ ವಿಜಯಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಯಾಂತ್ರೀಕೃತ ದೋಣಿ ಮತ್ತು ಜೆಸಿಬಿ ವಶಪಡಿಸಿಕೊಂಡಿದೆ.<br /> <br /> ತುಂಗಭದ್ರಾ ನದಿ ಪಾತ್ರದಲ್ಲಿ ರಾತ್ರೋ ರಾತ್ರಿ ಅಕ್ರಮ ದಂಧೆ ನಡೆಯುತ್ತಿದೆ ಎಂಬ ಮಾಹಿತಿ ಆಧರಿಸಿ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸ್ ಮತ್ತು ಪಿಡಬ್ಲೂಡಿ ಸಿಬ್ಬಂದಿಯ ತಂಡ ದಾಳಿ ನಡೆಸಿದ್ದರು.<br /> <br /> ಜೆಸಿಬಿ ಚಾಲಕ ಹಾಗೂ ದೋಣಿ ನಾವಿಕ ಪರಾರಿಯಾಗಿದ್ದಾರೆ. ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿರು ವವರನ್ನು ಪತ್ತೆ ಹಚ್ಚಲು ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ ಎಂದು ತಹಶೀಲ್ದಾರ್ ವಿಜಯಕುಮಾರ್ ತಿಳಿಸಿದ್ದಾರೆ.<br /> <br /> ತಾಲ್ಲೂಕಿನ ಅಧಿಕಾರಿಗಳು ತುಂಗಭದ್ರಾ ನದಿಯ ಬಲದಂಡೆಯುದ್ದಕ್ಕೂ ಅಕ್ರಮ ದಂಧೆಗೆ ಕಡಿವಾಣ ಹಾಕುತ್ತಿದ್ದರೂ ಎಡದಂಡೆಯ ಮರಳು ಚೋರರು ಗಡಿದಾಟಿ ಅಕ್ರಮವಾಗಿ ನೈಸರ್ಗಿಕ ಸಂಪತ್ತು ಲೂಟಿ ಮಾಡುತ್ತಿದ್ದಾರೆ.<br /> <br /> ತುಂಗಭದ್ರಾ ನದಿ ಹರಿಯುವಿಕೆ ಆಧರಿಸಿ ಬಳ್ಳಾರಿ, ಹಾವೇರಿ ಮತ್ತು ಗದಗ ಜಿಲ್ಲೆಯ ಗಡಿ ನಿರ್ಧಾರವಾಗಿದೆ. ಈ ಮೂರು ಜಿಲ್ಲೆಗಳಿಗೆ ಸಂಬಂಧಪಟ್ಟಂತೆ ನದಿಪಾತ್ರದಲ್ಲಿ ಜಂಟಿ ಸರ್ವೆ ನಡೆಸುವತನಕ ಮರಳು ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಎ.ಎ.ಬಿಸ್ವಾಸ್ ಸೂಚನೆ ನೀಡಿದರೂ ಜಂಟಿ ಸರ್ವೆ ಕಾರ್ಯಕ್ಕೆ ಇನ್ನೂ ಚಾಲನೆ ಸಿಕ್ಕಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>