<p><strong>ಮಳವಳ್ಳಿ/ಮದ್ದೂರು: </strong>ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಮರಳು ಸಾಗಣೆ ಮಾಡುತ್ತಿದ್ದ 41 ಲಾರಿ ಹಾಗೂ ಎರಡು ಟ್ರ್ಯಾಕ್ಟರ್ಗಳನ್ನು ಶನಿವಾರ ವಶಪಡಿಸಿಕೊಳ್ಳಲಾಗಿದ್ದು, 12 ಮಂದಿಯನ್ನು ಬಂಧಿಸಲಾಗಿದೆ.<br /> <br /> ಮಳವಳ್ಳಿ ತಾಲ್ಲೂಕಿನಲ್ಲಿ ಕಾವೇರಿ ನದಿ ವ್ಯಾಪ್ತಿಯಿಂದ ಬೆಂಗಳೂರಿಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 24 ಲಾರಿ ಹಾಗೂ ಎರಡು ಟ್ರ್ಯಾಕ್ಟರ್ ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ಪೂರಿಗಾಲಿ, ಬೆಳಕವಾಡಿ, ರಾವಣಿ, ಸರಗೂರು ಹಾಗೂ ಕನಕಪುರ ರಸ್ತೆ ಮೂಲಕ ಅಕ್ರಮ ಮರಳು ಲಾರಿಗಳು ಸಂಚರಿಸುತ್ತಿದ್ದವು. <br /> <br /> ಮದ್ದೂರು ತಾಲ್ಲೂಕಿನ ಬಿ.ಹೊಸೂರು ಪಟ್ಟಣದ ಟಿ.ಬಿ. ವೃತ್ತದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಈ ಸಂಬಂಧ 12 ಮಂದಿಯನ್ನು ಬಂಧಿಸಲಾಗಿದೆ.<br /> <br /> ಲಾರಿ ಚಾಲಕರು ಹಾಗೂ ಮಾಲೀಕರಿಗೆ ಪೊಲೀಸರ ಬಗ್ಗೆ ಮಾಹಿತಿ ನೀಡುತ್ತಿದ್ದ ಆರೋಪದ ಮೇಲೆ 12 ಜನರನ್ನು ಬಂಧಿಸಲಾಗಿದೆ. ಅಲ್ಲದೆ, ಬಂಧಿತರು ಬಳಸುತ್ತಿದ್ದ ಎರಡು ಕಾರು, 4 ಬೈಕ್ಗಳನ್ನೂ ವಶಪಡಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ/ಮದ್ದೂರು: </strong>ಪ್ರತ್ಯೇಕ ಪ್ರಕರಣದಲ್ಲಿ ಅಕ್ರಮವಾಗಿ ಮರಳು ಮರಳು ಸಾಗಣೆ ಮಾಡುತ್ತಿದ್ದ 41 ಲಾರಿ ಹಾಗೂ ಎರಡು ಟ್ರ್ಯಾಕ್ಟರ್ಗಳನ್ನು ಶನಿವಾರ ವಶಪಡಿಸಿಕೊಳ್ಳಲಾಗಿದ್ದು, 12 ಮಂದಿಯನ್ನು ಬಂಧಿಸಲಾಗಿದೆ.<br /> <br /> ಮಳವಳ್ಳಿ ತಾಲ್ಲೂಕಿನಲ್ಲಿ ಕಾವೇರಿ ನದಿ ವ್ಯಾಪ್ತಿಯಿಂದ ಬೆಂಗಳೂರಿಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 24 ಲಾರಿ ಹಾಗೂ ಎರಡು ಟ್ರ್ಯಾಕ್ಟರ್ ವಶಪಡಿಸಿಕೊಳ್ಳಲಾಗಿದೆ. ತಾಲ್ಲೂಕಿನ ಪೂರಿಗಾಲಿ, ಬೆಳಕವಾಡಿ, ರಾವಣಿ, ಸರಗೂರು ಹಾಗೂ ಕನಕಪುರ ರಸ್ತೆ ಮೂಲಕ ಅಕ್ರಮ ಮರಳು ಲಾರಿಗಳು ಸಂಚರಿಸುತ್ತಿದ್ದವು. <br /> <br /> ಮದ್ದೂರು ತಾಲ್ಲೂಕಿನ ಬಿ.ಹೊಸೂರು ಪಟ್ಟಣದ ಟಿ.ಬಿ. ವೃತ್ತದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 17 ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಈ ಸಂಬಂಧ 12 ಮಂದಿಯನ್ನು ಬಂಧಿಸಲಾಗಿದೆ.<br /> <br /> ಲಾರಿ ಚಾಲಕರು ಹಾಗೂ ಮಾಲೀಕರಿಗೆ ಪೊಲೀಸರ ಬಗ್ಗೆ ಮಾಹಿತಿ ನೀಡುತ್ತಿದ್ದ ಆರೋಪದ ಮೇಲೆ 12 ಜನರನ್ನು ಬಂಧಿಸಲಾಗಿದೆ. ಅಲ್ಲದೆ, ಬಂಧಿತರು ಬಳಸುತ್ತಿದ್ದ ಎರಡು ಕಾರು, 4 ಬೈಕ್ಗಳನ್ನೂ ವಶಪಡಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>