<p><strong>ಲಿಂಗಸುಗೂರು:</strong> ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ನವಲಿ ಗ್ರಾಮದ ನಾಲಾದ ಮರಳನ್ನು ತಾಲ್ಲೂಕಿನ ಯಳಗುಂದಿ ಗ್ರಾಮದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ 5 ಟಿಪ್ಪರ್ ಗಳನ್ನು ತಹಶೀಲ್ದಾರ್ ಜಿ.ಎಸ್. ಮಹಾಜನ ನೇತೃತ್ವದಲ್ಲಿ ಜಪ್ತಿ ಮಾಡಲಾಗಿದೆ.<br /> <br /> ಶುಕ್ರವಾರ ಲಿಂಗಸುಗೂರು ಮಾರ್ಗವಾಗಿ ತೆರಳುತ್ತಿದ್ದ ಟಿಪ್ಪರ್ಗಳ ದಾಖಲೆ ಪರಿಶೀಲಿಸಿದಾಗ ಪರವಾನಗಿ ದಾಖಲೆಳಲ್ಲಿ ಮರಳು ಕ್ವಾರಿ ಇರುವ ಗ್ರಾಮ ನವಲಿ ಎಂದು ನಮೂದಿಸಲಾಗಿದೆ. ಆದರೆ ಅದೇ ದಾಖಲೆಯಲ್ಲಿ ಈಚನಾಳ ಗ್ರಾಮದಿಂದ ಕೆಸರಟ್ಟಿ ಗ್ರಾಮಕ್ಕೆ<br /> ಮರಳು ಸಾಗಣೆ ಮಾಡುತ್ತಿರುವ ಬಗ್ಗೆ ದಾಖಲಿಸಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಈ ಕಾರಣ ದಿಂದ ಟಿಪ್ಪರ್ಗಳನ್ನು ಜಪ್ತಿ ಮಾಡಿದ್ದಾಗಿ ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ದಾಖಲೆಗಳಲ್ಲಿನ ಮಾಹಿತಿ ಅಸ್ಪಷ್ಟವಾಗಿದ್ದು ಚಾಲಕರು ನೀಡುವ ಮಾಹಿತಿಗೆ ಹೊಂದಾಣಿಕೆ ಆಗುತ್ತಿಲ್ಲ. ಈ ಕುರಿತು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಲಾಗುವುದು ಎಂದು ಕಂದಾಯ ಮೂಲಗಳು ಸ್ಪಷ್ಟಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ನವಲಿ ಗ್ರಾಮದ ನಾಲಾದ ಮರಳನ್ನು ತಾಲ್ಲೂಕಿನ ಯಳಗುಂದಿ ಗ್ರಾಮದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ 5 ಟಿಪ್ಪರ್ ಗಳನ್ನು ತಹಶೀಲ್ದಾರ್ ಜಿ.ಎಸ್. ಮಹಾಜನ ನೇತೃತ್ವದಲ್ಲಿ ಜಪ್ತಿ ಮಾಡಲಾಗಿದೆ.<br /> <br /> ಶುಕ್ರವಾರ ಲಿಂಗಸುಗೂರು ಮಾರ್ಗವಾಗಿ ತೆರಳುತ್ತಿದ್ದ ಟಿಪ್ಪರ್ಗಳ ದಾಖಲೆ ಪರಿಶೀಲಿಸಿದಾಗ ಪರವಾನಗಿ ದಾಖಲೆಳಲ್ಲಿ ಮರಳು ಕ್ವಾರಿ ಇರುವ ಗ್ರಾಮ ನವಲಿ ಎಂದು ನಮೂದಿಸಲಾಗಿದೆ. ಆದರೆ ಅದೇ ದಾಖಲೆಯಲ್ಲಿ ಈಚನಾಳ ಗ್ರಾಮದಿಂದ ಕೆಸರಟ್ಟಿ ಗ್ರಾಮಕ್ಕೆ<br /> ಮರಳು ಸಾಗಣೆ ಮಾಡುತ್ತಿರುವ ಬಗ್ಗೆ ದಾಖಲಿಸಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಈ ಕಾರಣ ದಿಂದ ಟಿಪ್ಪರ್ಗಳನ್ನು ಜಪ್ತಿ ಮಾಡಿದ್ದಾಗಿ ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ದಾಖಲೆಗಳಲ್ಲಿನ ಮಾಹಿತಿ ಅಸ್ಪಷ್ಟವಾಗಿದ್ದು ಚಾಲಕರು ನೀಡುವ ಮಾಹಿತಿಗೆ ಹೊಂದಾಣಿಕೆ ಆಗುತ್ತಿಲ್ಲ. ಈ ಕುರಿತು ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಲಾಗುವುದು ಎಂದು ಕಂದಾಯ ಮೂಲಗಳು ಸ್ಪಷ್ಟಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>