<p><strong>ಚಿಕ್ಕಬಳ್ಳಾಪುರ: </strong>ನಗರದ ನಕ್ಕಲಕುಂಟೆ ಮತ್ತು ರಾಘವೇಂದ್ರ ಮಠದ ಬಳಿಯಿರುವ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಡುಗೆ ಅನಿಲ ಸಿಲಿಂಡರ್ಗಳನ್ನು ವಶಪಡಿಸಿ ಕೊಂಡಿದ್ದಾರೆ.</p>.<p> ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯತೀಶ್ (48) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಮನ್ಸೂರ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> `ಖಚಿತ ಸುಳಿವಿನ ಮೇರೆಗೆ ಮನೆಗಳ ಮೇಲೆ ದಾಳಿ ನಡೆಸಿ, 17 ದೊಡ್ಡ ಸಿಲಿಂಡರ್ ಮತ್ತು 10 ಚಿಕ್ಕ ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದೇವೆ. ಆರೋಪಿಗಳು ಸಿಲಿಂಡರ್ಗಳನ್ನು ಬೇರೆ ಕಾರಣಗಳಿಗೆ ದುರ್ಬಳಕೆ ಮಾಡುತ್ತಿದ್ದರು.</p>.<p>ಆಟೋರಿಕ್ಷಾಗಳಿಗೆ ಗ್ಯಾಸ್ರೀಫಿಲಿಂಗ್ ಮಾಡುವುದು. ಬೇರೆಯವರಿಗೆ ಸಿಲಿಂಡರ್ ಅಕ್ರಮವಾಗಿ ನೀಡುವುದು ಮುಂತಾದವುಗಳನ್ನು ಮಾಡುತ್ತಿದ್ದರು. ಅಕ್ರಮ ಸಿಲಿಂಡರ್ಗಳ ಸಂಗ್ರಹಣೆಗೆ ಸಂಬಂಧಿಸಿದಂತೆ ಆರೋಪಿಗಳ ಜಾಲವಿದೆ. ಪ್ರಕರಣದ ಪ್ರಮುಖ ಆರೋಪಿಗಳನ್ನು ಶೀಘ್ರವೇ ಸೆರೆ ಹಿಡಿಯಲಾಗುವುದು~ ಎಂದು ಸರ್ಕಲ್ ಇನ್ಸ್ಪೆಕ್ಟರ್ ಎಸ್.ಮಹೇಶ್ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ನಗರದ ನಕ್ಕಲಕುಂಟೆ ಮತ್ತು ರಾಘವೇಂದ್ರ ಮಠದ ಬಳಿಯಿರುವ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಡುಗೆ ಅನಿಲ ಸಿಲಿಂಡರ್ಗಳನ್ನು ವಶಪಡಿಸಿ ಕೊಂಡಿದ್ದಾರೆ.</p>.<p> ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯತೀಶ್ (48) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಮನ್ಸೂರ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> `ಖಚಿತ ಸುಳಿವಿನ ಮೇರೆಗೆ ಮನೆಗಳ ಮೇಲೆ ದಾಳಿ ನಡೆಸಿ, 17 ದೊಡ್ಡ ಸಿಲಿಂಡರ್ ಮತ್ತು 10 ಚಿಕ್ಕ ಸಿಲಿಂಡರ್ಗಳನ್ನು ವಶಪಡಿಸಿಕೊಂಡಿದ್ದೇವೆ. ಆರೋಪಿಗಳು ಸಿಲಿಂಡರ್ಗಳನ್ನು ಬೇರೆ ಕಾರಣಗಳಿಗೆ ದುರ್ಬಳಕೆ ಮಾಡುತ್ತಿದ್ದರು.</p>.<p>ಆಟೋರಿಕ್ಷಾಗಳಿಗೆ ಗ್ಯಾಸ್ರೀಫಿಲಿಂಗ್ ಮಾಡುವುದು. ಬೇರೆಯವರಿಗೆ ಸಿಲಿಂಡರ್ ಅಕ್ರಮವಾಗಿ ನೀಡುವುದು ಮುಂತಾದವುಗಳನ್ನು ಮಾಡುತ್ತಿದ್ದರು. ಅಕ್ರಮ ಸಿಲಿಂಡರ್ಗಳ ಸಂಗ್ರಹಣೆಗೆ ಸಂಬಂಧಿಸಿದಂತೆ ಆರೋಪಿಗಳ ಜಾಲವಿದೆ. ಪ್ರಕರಣದ ಪ್ರಮುಖ ಆರೋಪಿಗಳನ್ನು ಶೀಘ್ರವೇ ಸೆರೆ ಹಿಡಿಯಲಾಗುವುದು~ ಎಂದು ಸರ್ಕಲ್ ಇನ್ಸ್ಪೆಕ್ಟರ್ ಎಸ್.ಮಹೇಶ್ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>