<p>ಔರಾದ್: ರಾಜ್ಯದ ವಿವಿಧ ಭಾಷಾ ಅಲ್ಪಸಂಖ್ಯಾತ ಕಾಲೇಜು ವೈದ್ಯಕೀಯ ಸೀಟು ಹಂಚಿಕೆಯಲ್ಲಿನ ಅಕ್ರಮ ಖಂಡಿಸಿ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.<br /> <br /> ವಿವಿಧ ಕಾಲೇಜು ವಿದ್ಯಾರ್ಥಿಗಳು ಪಟ್ಟಣದ ಕನ್ನಡಾಂಬೆ ವೃತ್ತದ ಬಳಿ ಜಮಾಯಿಸಿ ಕೆಲಕಾಲ ರಸ್ತೆತಡೆ ನಡೆಸಿದರು.<br /> ರಾಜ್ಯದ ಭಾಷಾ ಅಲ್ಪಸಂಖ್ಯಾತ ಕಾಲೇಜುಗಳು ವೈದ್ಯಕೀಯ ಪ್ರವೇಶ ನೀಡುವಲ್ಲಿ ಅಕ್ರಮ ನಡೆಸಿವೆ. ಈ ಬಗ್ಗೆ ಸರ್ಕಾರ ಮೌನ ವಹಿಸಿ ಅಕ್ರಮ ಮುಚ್ಚುವ ಹುನ್ನಾರ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಈ ಕುರಿತು ಸಿಒಡಿಯಿಂದ ತನಿಖೆ ನಡೆಸಬೇಕು. ಎಲ್ಲ ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸೀಟು ಹಂಚಿಕೆ ಸಿಇಟಿ ಮೂಲಕ ನಡೆಸಬೇಕು.<br /> <br /> ಪ್ರಕರಣ ಸಂಬಂಧ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದು ಕಡ್ಡಾಯ ರಜೆ ಮೇಲೆ ಕಳುಹಿಸಿದ ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿಯನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿ, ತಹಶೀಲ್ದಾರ್ ವೆಂಕಣ್ಣ ಅವರಿಗೆ ಮನವಿ ಸಲ್ಲಿಸಿದರು.<br /> <br /> ಎಬಿವಿಪಿ ಜಿಲ್ಲಾ ಸಂಚಾಲಕ ಅಶೋಕ ಶೆಂಬೆಳ್ಳಿ, ಅರುಣ ಪಾಟೀಲ, ಅಂಬಾದಾಸ ನೇಳಗೆ, ಬಸವರಾಜ ಹಳ್ಳೆ, ಹಾವಪ್ಪ ದ್ಯಾಡೆ, ಸಿದ್ದು ಪಾಟೀಲ, ಅನಿಲ ಮೇತ್ರೆ, ರಮೇಶ, ಆಕಾಶ ಸ್ವಾಮಿ, ಸಚಿನ್ ಚಿದ್ರೆ, ಸಚಿನ್ ಸಿಂಧೆ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ರಾಜ್ಯದ ವಿವಿಧ ಭಾಷಾ ಅಲ್ಪಸಂಖ್ಯಾತ ಕಾಲೇಜು ವೈದ್ಯಕೀಯ ಸೀಟು ಹಂಚಿಕೆಯಲ್ಲಿನ ಅಕ್ರಮ ಖಂಡಿಸಿ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಸಿದರು.<br /> <br /> ವಿವಿಧ ಕಾಲೇಜು ವಿದ್ಯಾರ್ಥಿಗಳು ಪಟ್ಟಣದ ಕನ್ನಡಾಂಬೆ ವೃತ್ತದ ಬಳಿ ಜಮಾಯಿಸಿ ಕೆಲಕಾಲ ರಸ್ತೆತಡೆ ನಡೆಸಿದರು.<br /> ರಾಜ್ಯದ ಭಾಷಾ ಅಲ್ಪಸಂಖ್ಯಾತ ಕಾಲೇಜುಗಳು ವೈದ್ಯಕೀಯ ಪ್ರವೇಶ ನೀಡುವಲ್ಲಿ ಅಕ್ರಮ ನಡೆಸಿವೆ. ಈ ಬಗ್ಗೆ ಸರ್ಕಾರ ಮೌನ ವಹಿಸಿ ಅಕ್ರಮ ಮುಚ್ಚುವ ಹುನ್ನಾರ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಈ ಕುರಿತು ಸಿಒಡಿಯಿಂದ ತನಿಖೆ ನಡೆಸಬೇಕು. ಎಲ್ಲ ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸೀಟು ಹಂಚಿಕೆ ಸಿಇಟಿ ಮೂಲಕ ನಡೆಸಬೇಕು.<br /> <br /> ಪ್ರಕರಣ ಸಂಬಂಧ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದು ಕಡ್ಡಾಯ ರಜೆ ಮೇಲೆ ಕಳುಹಿಸಿದ ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿಯನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿ, ತಹಶೀಲ್ದಾರ್ ವೆಂಕಣ್ಣ ಅವರಿಗೆ ಮನವಿ ಸಲ್ಲಿಸಿದರು.<br /> <br /> ಎಬಿವಿಪಿ ಜಿಲ್ಲಾ ಸಂಚಾಲಕ ಅಶೋಕ ಶೆಂಬೆಳ್ಳಿ, ಅರುಣ ಪಾಟೀಲ, ಅಂಬಾದಾಸ ನೇಳಗೆ, ಬಸವರಾಜ ಹಳ್ಳೆ, ಹಾವಪ್ಪ ದ್ಯಾಡೆ, ಸಿದ್ದು ಪಾಟೀಲ, ಅನಿಲ ಮೇತ್ರೆ, ರಮೇಶ, ಆಕಾಶ ಸ್ವಾಮಿ, ಸಚಿನ್ ಚಿದ್ರೆ, ಸಚಿನ್ ಸಿಂಧೆ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>