<p><strong>ಲಖನೌ (ಪಿಟಿಐ): </strong>ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸಿದ ಯುವ ನಾಯಕ ಅಖಿಲೇಶ್ ಯಾದವ್ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲು ಪಕ್ಷದಲ್ಲಿ ಹಲವರು ತುದಿಗಾಲ ಮೇಲೆ ನಿಂತಿದ್ದಾರೆ.<br /> <br /> ಇನ್ನೊಂದೆಡೆ ಅಖಿಲೇಶ್ ಹಾಗೂ ಮುಲಾಯಂ ಸಿಂಗ್ ಯಾದವ್ ಇಬ್ಬರೂ ಬುಧವಾರ ಸಂಜೆ ರಾಜ್ಯಪಾಲ ಬಿ.ಎಲ್.ಜೋಶಿ ಅವರನ್ನು ಭೇಟಿಯಾಗಿ ಸರ್ಕಾರ ರಚಿಸುವ ಹಕ್ಕು ಮಂಡಿಸಿದರು.<br /> <br /> ಇದಕ್ಕೂ ಮುನ್ನ ನಡೆದ ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಚರ್ಚೆಯಾಗಿದ್ದು, ಬಹುತೇಕರು ಅಖಿಲೇಶ್ ಹೆಸರನ್ನು ಸೂಚಿಸಿದರು. `ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದನ್ನು ಹೋಳಿ ಹಬ್ಬದ ನಂತರ ತೀರ್ಮಾನಿಸಲಾಗುತ್ತದೆ. ನೂತನ ಶಾಸಕರ ಸಭೆಯನ್ನು ಶನಿವಾರ (ಮಾರ್ಚ್ 10) ಕರೆಯಲಾಗಿದೆ. ಪಕ್ಷದ ವರಿಷ್ಠ ಮುಲಾಯಂ ಸಿಂಗ್, ಸಿ.ಎಂ ಆಯ್ಕೆ ಅಂತಿಮ ನಿರ್ಧಾರ ತೆಗೆದುಕೊಳ್ಳುವರು~ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನರೇಶ್ ಅಗರ್ವಾಲ್ ತಿಳಿಸಿದ್ದಾರೆ. 4 <br /> <br /> ಈ ನಡುವೆ ಅಖಿಲೇಶ್, `ನೇತಾಜಿ~ (ಮುಲಾಯಂ ಸಿಂಗ್) ಅವರೇ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎಂದಿದ್ದಾರೆ. ಆದರೆ ಅಖಿಲೇಶ್ ಪರ ಒಲವು ಹೆಚ್ಚಿರುವುದರಿಂದ ಅವರೇ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.<br /> <br /> <strong>ಮುಸ್ಲಿಮರ ಬೆಂಬಲ </strong><br /> ರಾಜ್ಯದಲ್ಲಿ ಎಸ್ಪಿ ಗೆಲ್ಲಲು ಪರೋಕ್ಷವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರಣ ಎಂದು ಬಿಎಸ್ಪಿ ನಾಯಕಿ ಮಾಯಾವತಿ ದೂಷಿಸಿದ್ದಾರೆ.<br /> <br /> ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಸಲ್ಲಿಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ಒಳಮೀಸಲಾತಿ ನೀಡುವ ವಿಷಯದಲ್ಲಿ ಈ ಎರಡೂ ಪಕ್ಷಗಳು ಅಂತಿಮವಾಗಿ ಎಸ್ಪಿಗೆ ಲಾಭ ಮಾಡಿಕೊಟ್ಟಿವೆ. <br /> <br /> ಇದರಿಂದಾ ಗಿಯೇ ಶೇ 70ರಷ್ಟು ಮುಸ್ಲಿಂ ಮತಗಳು ಎಸ್ಪಿ ಬುಟ್ಟಿಗೆ ಬಿದ್ದವು ಎಂದು ಹೇಳಿದರು.<br /> ಭ್ರಷ್ಟಾಚಾರದ ಆರೋಪವೇ ಬಿಎಸ್ಪಿ ಸೋಲಿಗೆ ಕಾರಣ ಎನ್ನುವುದನ್ನು ಅವರು ಈ ಸಂದರ್ಭದಲ್ಲಿ ಅಲ್ಲಗಳೆದರು.<br /> <br /> <strong>`ಮಾಯಾಗೆ ಆಭಾರಿ~</strong><br /> `ಉತ್ತರ ಪ್ರದೇಶದಲ್ಲಿ ಎಸ್ಪಿ ಗೆಲುವಿಗೆ ಕಾಂಗ್ರೆಸ್ ಕಾರಣ ಎಂದಿರುವ ಮಾಯಾವತಿ ಅವರಿಗೆ ನಾನು ಆಭಾರಿ~ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು ನವದೆಹಲಿಯಲ್ಲಿ ವ್ಯಂಗ್ಯವಾಡಿದ್ದಾರೆ.<br /> <br /> ಎಐಸಿಸಿ ಪ್ರಧಾನ ಕಚೇರಿಯಲ್ಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ಈ ರೀತಿ ಪ್ರತಿಕ್ರಿಯಿಸಿದರು. ಮಾಯಾವತಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸೋನಿಯಾ, `ಇಷ್ಟಕ್ಕೂ ಚುನಾವಣೆಯಲ್ಲಿ ಪೈಪೋಟಿ ಇದ್ದೇ ಇರುತ್ತದೆ~ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ (ಪಿಟಿಐ): </strong>ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸಿದ ಯುವ ನಾಯಕ ಅಖಿಲೇಶ್ ಯಾದವ್ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲು ಪಕ್ಷದಲ್ಲಿ ಹಲವರು ತುದಿಗಾಲ ಮೇಲೆ ನಿಂತಿದ್ದಾರೆ.<br /> <br /> ಇನ್ನೊಂದೆಡೆ ಅಖಿಲೇಶ್ ಹಾಗೂ ಮುಲಾಯಂ ಸಿಂಗ್ ಯಾದವ್ ಇಬ್ಬರೂ ಬುಧವಾರ ಸಂಜೆ ರಾಜ್ಯಪಾಲ ಬಿ.ಎಲ್.ಜೋಶಿ ಅವರನ್ನು ಭೇಟಿಯಾಗಿ ಸರ್ಕಾರ ರಚಿಸುವ ಹಕ್ಕು ಮಂಡಿಸಿದರು.<br /> <br /> ಇದಕ್ಕೂ ಮುನ್ನ ನಡೆದ ಪಕ್ಷದ ಸಂಸದೀಯ ಮಂಡಳಿ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಚರ್ಚೆಯಾಗಿದ್ದು, ಬಹುತೇಕರು ಅಖಿಲೇಶ್ ಹೆಸರನ್ನು ಸೂಚಿಸಿದರು. `ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದನ್ನು ಹೋಳಿ ಹಬ್ಬದ ನಂತರ ತೀರ್ಮಾನಿಸಲಾಗುತ್ತದೆ. ನೂತನ ಶಾಸಕರ ಸಭೆಯನ್ನು ಶನಿವಾರ (ಮಾರ್ಚ್ 10) ಕರೆಯಲಾಗಿದೆ. ಪಕ್ಷದ ವರಿಷ್ಠ ಮುಲಾಯಂ ಸಿಂಗ್, ಸಿ.ಎಂ ಆಯ್ಕೆ ಅಂತಿಮ ನಿರ್ಧಾರ ತೆಗೆದುಕೊಳ್ಳುವರು~ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನರೇಶ್ ಅಗರ್ವಾಲ್ ತಿಳಿಸಿದ್ದಾರೆ. 4 <br /> <br /> ಈ ನಡುವೆ ಅಖಿಲೇಶ್, `ನೇತಾಜಿ~ (ಮುಲಾಯಂ ಸಿಂಗ್) ಅವರೇ ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎಂದಿದ್ದಾರೆ. ಆದರೆ ಅಖಿಲೇಶ್ ಪರ ಒಲವು ಹೆಚ್ಚಿರುವುದರಿಂದ ಅವರೇ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆಯನ್ನೂ ತಳ್ಳಿಹಾಕುವಂತಿಲ್ಲ.<br /> <br /> <strong>ಮುಸ್ಲಿಮರ ಬೆಂಬಲ </strong><br /> ರಾಜ್ಯದಲ್ಲಿ ಎಸ್ಪಿ ಗೆಲ್ಲಲು ಪರೋಕ್ಷವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರಣ ಎಂದು ಬಿಎಸ್ಪಿ ನಾಯಕಿ ಮಾಯಾವತಿ ದೂಷಿಸಿದ್ದಾರೆ.<br /> <br /> ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಸಲ್ಲಿಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ಒಳಮೀಸಲಾತಿ ನೀಡುವ ವಿಷಯದಲ್ಲಿ ಈ ಎರಡೂ ಪಕ್ಷಗಳು ಅಂತಿಮವಾಗಿ ಎಸ್ಪಿಗೆ ಲಾಭ ಮಾಡಿಕೊಟ್ಟಿವೆ. <br /> <br /> ಇದರಿಂದಾ ಗಿಯೇ ಶೇ 70ರಷ್ಟು ಮುಸ್ಲಿಂ ಮತಗಳು ಎಸ್ಪಿ ಬುಟ್ಟಿಗೆ ಬಿದ್ದವು ಎಂದು ಹೇಳಿದರು.<br /> ಭ್ರಷ್ಟಾಚಾರದ ಆರೋಪವೇ ಬಿಎಸ್ಪಿ ಸೋಲಿಗೆ ಕಾರಣ ಎನ್ನುವುದನ್ನು ಅವರು ಈ ಸಂದರ್ಭದಲ್ಲಿ ಅಲ್ಲಗಳೆದರು.<br /> <br /> <strong>`ಮಾಯಾಗೆ ಆಭಾರಿ~</strong><br /> `ಉತ್ತರ ಪ್ರದೇಶದಲ್ಲಿ ಎಸ್ಪಿ ಗೆಲುವಿಗೆ ಕಾಂಗ್ರೆಸ್ ಕಾರಣ ಎಂದಿರುವ ಮಾಯಾವತಿ ಅವರಿಗೆ ನಾನು ಆಭಾರಿ~ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು ನವದೆಹಲಿಯಲ್ಲಿ ವ್ಯಂಗ್ಯವಾಡಿದ್ದಾರೆ.<br /> <br /> ಎಐಸಿಸಿ ಪ್ರಧಾನ ಕಚೇರಿಯಲ್ಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ಈ ರೀತಿ ಪ್ರತಿಕ್ರಿಯಿಸಿದರು. ಮಾಯಾವತಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸೋನಿಯಾ, `ಇಷ್ಟಕ್ಕೂ ಚುನಾವಣೆಯಲ್ಲಿ ಪೈಪೋಟಿ ಇದ್ದೇ ಇರುತ್ತದೆ~ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>