<p><strong>ಬೆಂಗಳೂ</strong>ರು: ಕರ್ನಾಟಕದ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಬೋರೇಗೌಡ ಆನಂದ್ ಕುಮಾರ್ ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ರ್ಯಾಂಕಿಂಗ್ ಪಟ್ಟಿಯ ಸಿಂಗಲ್ಸ್ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.<br /> <br /> ಎಸ್ಎಲ್-4 ವಿಭಾಗದಲ್ಲಿ ಮೊದಲ ಸ್ಥಾನದಲ್ಲಿರುವ ಆನಂದ್, ಡಬಲ್ಸ್ನಲ್ಲಿ ಏಳನೇ ಸ್ಥಾನ ಹೊಂದಿದ್ದಾರೆ. ಇದೇ ವರ್ಷದ ಏಪ್ರಿಲ್ನಲ್ಲಿ ಟರ್ಕಿ ಪ್ಯಾರಾಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಜಯಿಸಿದ್ದಾಗ ಎರಡನೇ ಸ್ಥಾನದಲ್ಲಿದ್ದರು.<br /> ಈ ಟೂರ್ನಿ ಮುಗಿದ ಕೆಲ ದಿನಗಳ ನಂತರ ಅಗ್ರಸ್ಥಾನಕ್ಕೇರುವ ಮೂಲಕ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಕಳೆದ ವರ್ಷದ ಸೋಲ್ನಲ್ಲಿ ಜರುಗಿದ ಮೂರನೇ ವಿಕ್ಟರ್ ಏಷ್ಯನ್ ಪ್ಯಾರಾಬ್ಯಾಡ್ಮಿಂಟನ್ ಟೂರ್ನಿಯ ಸಿಂಗಲ್ಸ್ನಲ್ಲಿ ಚಿನ್ನ ಮತ್ತು ಡಬಲ್ಸ್ನಲ್ಲಿ ಕಂಚು ಜಯಿಸಿದ್ದರು.<br /> <br /> `ಅಗ್ರಸ್ಥಾನ ಪಡೆಯಬೇಕೆನ್ನುವುದು ನನ್ನ ಕನಸಾಗಿತ್ತು. ಆ ಕನಸು ಈಗ ನನಸಾಗಿದೆ. ಆದರೆ, ಸಿಕ್ಕ ಸ್ಥಾನವನ್ನು ಉಳಿಸಿಕೊಂಡು ಹೋಗುವ ಸವಾಲಿದೆ. ನವೆಂಬರ್ನಲ್ಲಿ ಜರ್ಮನ್ಯಲ್ಲಿ ವಿಶ್ವ ಪ್ಯಾರಾಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನಡೆಯಲಿದೆ. ಅಲ್ಲಿಯೂ ಪ್ರಶಸ್ತಿ ಗೆಲ್ಲಬೇಕೆಂಬ ಕನಸಿದೆ. ಅದಕ್ಕಾಗಿ ಈಗಿನಿಂದಲೇ ಕಠಿಣ ಅಭ್ಯಾಸ ನಡೆಸುತ್ತಿದ್ದೇನೆ' ಎಂದು ಆನಂದ್ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ಶಾಸಕ ಸಿ. ಎನ್. ಅಶ್ವತ್ಥ್ ನಾರಾಯಣ್, ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ (ಕೆಬಿಎ) ಗೌರವ ಕಾರ್ಯದರ್ಶಿ ಸುಧೀರ್ ಮತ್ತು ಬೆಂಗಳೂರು ಉತ್ತರ ಜಿಲ್ಲೆ ಬ್ಯಾಡ್ಮಿಂಟನ್ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂ</strong>ರು: ಕರ್ನಾಟಕದ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಬೋರೇಗೌಡ ಆನಂದ್ ಕುಮಾರ್ ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ರ್ಯಾಂಕಿಂಗ್ ಪಟ್ಟಿಯ ಸಿಂಗಲ್ಸ್ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.<br /> <br /> ಎಸ್ಎಲ್-4 ವಿಭಾಗದಲ್ಲಿ ಮೊದಲ ಸ್ಥಾನದಲ್ಲಿರುವ ಆನಂದ್, ಡಬಲ್ಸ್ನಲ್ಲಿ ಏಳನೇ ಸ್ಥಾನ ಹೊಂದಿದ್ದಾರೆ. ಇದೇ ವರ್ಷದ ಏಪ್ರಿಲ್ನಲ್ಲಿ ಟರ್ಕಿ ಪ್ಯಾರಾಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನಲ್ಲಿ ಚಿನ್ನದ ಪದಕ ಜಯಿಸಿದ್ದಾಗ ಎರಡನೇ ಸ್ಥಾನದಲ್ಲಿದ್ದರು.<br /> ಈ ಟೂರ್ನಿ ಮುಗಿದ ಕೆಲ ದಿನಗಳ ನಂತರ ಅಗ್ರಸ್ಥಾನಕ್ಕೇರುವ ಮೂಲಕ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಕಳೆದ ವರ್ಷದ ಸೋಲ್ನಲ್ಲಿ ಜರುಗಿದ ಮೂರನೇ ವಿಕ್ಟರ್ ಏಷ್ಯನ್ ಪ್ಯಾರಾಬ್ಯಾಡ್ಮಿಂಟನ್ ಟೂರ್ನಿಯ ಸಿಂಗಲ್ಸ್ನಲ್ಲಿ ಚಿನ್ನ ಮತ್ತು ಡಬಲ್ಸ್ನಲ್ಲಿ ಕಂಚು ಜಯಿಸಿದ್ದರು.<br /> <br /> `ಅಗ್ರಸ್ಥಾನ ಪಡೆಯಬೇಕೆನ್ನುವುದು ನನ್ನ ಕನಸಾಗಿತ್ತು. ಆ ಕನಸು ಈಗ ನನಸಾಗಿದೆ. ಆದರೆ, ಸಿಕ್ಕ ಸ್ಥಾನವನ್ನು ಉಳಿಸಿಕೊಂಡು ಹೋಗುವ ಸವಾಲಿದೆ. ನವೆಂಬರ್ನಲ್ಲಿ ಜರ್ಮನ್ಯಲ್ಲಿ ವಿಶ್ವ ಪ್ಯಾರಾಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನಡೆಯಲಿದೆ. ಅಲ್ಲಿಯೂ ಪ್ರಶಸ್ತಿ ಗೆಲ್ಲಬೇಕೆಂಬ ಕನಸಿದೆ. ಅದಕ್ಕಾಗಿ ಈಗಿನಿಂದಲೇ ಕಠಿಣ ಅಭ್ಯಾಸ ನಡೆಸುತ್ತಿದ್ದೇನೆ' ಎಂದು ಆನಂದ್ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ಶಾಸಕ ಸಿ. ಎನ್. ಅಶ್ವತ್ಥ್ ನಾರಾಯಣ್, ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ (ಕೆಬಿಎ) ಗೌರವ ಕಾರ್ಯದರ್ಶಿ ಸುಧೀರ್ ಮತ್ತು ಬೆಂಗಳೂರು ಉತ್ತರ ಜಿಲ್ಲೆ ಬ್ಯಾಡ್ಮಿಂಟನ್ ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>