<p><strong>ಬೆಂಗಳೂರು:`</strong>ಬದುಕಿನಲ್ಲಿ ಮನುಷ್ಯ ಎಲ್ಲ ರೀತಿಯ ಆಘಾತಗಳನ್ನೂ ಎದುರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು~ ಎಂದು ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘ ರಾಜೇಂದ್ರ ಶರಣರು ಕರೆ ನೀಡಿದರು.<br /> <br /> ನಗರದಲ್ಲಿ ಬುಧವಾರ ಬಸವಕೇಂದ್ರ ಮತ್ತು ಕರ್ನಾಟಕ ರಾಜ್ಯ ವೀರಶೈವ ನೌಕರರ ಲಿಂಗಾಯಿತ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ `ಶರಣ ಸಂಗಮ - ಅರಿವಿನ ಅಂಗಳ~ ಕಾರ್ಯಕ್ರಮದಲ್ಲಿ ಅವರ ಮಾತನಾಡಿದರು.<br /> <br /> `ಪ್ರಸ್ತುತ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿನ ಜನರಲ್ಲಿಯೂ ಜಿಗುಪ್ಸೆ ಹಾಗೂ ಜಡತ್ವಗಳು ಹೆಚ್ಚುತ್ತಿವೆ. ವಿದ್ಯಾರ್ಥಿಗಳಲ್ಲಿ ಸೋಲಿನ ಬಗ್ಗೆ ಸಾಕಷ್ಟು ಭೀತಿಗಳು ಹುಟ್ಟಿಕೊಂಡಿವೆ. ಪರೀಕ್ಷೆಗಳಲ್ಲಿ ಕಡಿಮೆ ಅಂಕಗಳ ಕಾರಣಕ್ಕೆ ತಾವೇ ದುರಂತಗಳಿಗೆ ಈಡಾಗುವ ವಿದ್ಯಾರ್ಥಿಗಳು ಹೆಚ್ಚಾಗುತ್ತಿದ್ದಾರೆ. <br /> <br /> ಕೇವಲ ಅಂಕಗಳ ವಿದ್ಯೆಯೇ ಬದುಕಿನಲ್ಲಿ ಮುಖ್ಯವಲ್ಲ ಎಂಬ ವಿಚಾರವನ್ನು ಎಲ್ಲ ವಿದ್ಯಾರ್ಥಿಗಳು ಅರಿಯಬೇಕು. ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ತುಂಬುವ ಬಗ್ಗೆ ಎಲ್ಲರೂ ಯೋಚಿಸಬೇಕು~ ಎಂದರು. ಕಾರ್ಯಕ್ರಮದಲ್ಲಿ ಸಮಾಜದ ಎಸ್.ಚಂದ್ರಣ್ಣ, ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎ. ದೇವಪ್ರಕಾಶ್, ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾದ ಬಿ.ಸಚ್ಚಿದಾನಂದ ಹಾಗೂ ಸೈಯ್ಯದ್ ಜಮಾಲ್ ಅವರನ್ನು ಸನ್ಮಾನಿಸಲಾಯಿತು. <br /> <br /> ಶ್ರೀಪಾದಗಡ್ಡಿ ಮತ್ತು ತಂಡದವರು ವಚನ ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.<br /> ಕರ್ನಾಟಕ ರಾಜ್ಯ ವೀರಶೈವ ನೌಕರರ ಲಿಂಗಾಯಿತ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಸವಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಸೋಮೇಶ್ ಚಿಕ್ಕಮಠ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:`</strong>ಬದುಕಿನಲ್ಲಿ ಮನುಷ್ಯ ಎಲ್ಲ ರೀತಿಯ ಆಘಾತಗಳನ್ನೂ ಎದುರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು~ ಎಂದು ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘ ರಾಜೇಂದ್ರ ಶರಣರು ಕರೆ ನೀಡಿದರು.<br /> <br /> ನಗರದಲ್ಲಿ ಬುಧವಾರ ಬಸವಕೇಂದ್ರ ಮತ್ತು ಕರ್ನಾಟಕ ರಾಜ್ಯ ವೀರಶೈವ ನೌಕರರ ಲಿಂಗಾಯಿತ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ `ಶರಣ ಸಂಗಮ - ಅರಿವಿನ ಅಂಗಳ~ ಕಾರ್ಯಕ್ರಮದಲ್ಲಿ ಅವರ ಮಾತನಾಡಿದರು.<br /> <br /> `ಪ್ರಸ್ತುತ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿನ ಜನರಲ್ಲಿಯೂ ಜಿಗುಪ್ಸೆ ಹಾಗೂ ಜಡತ್ವಗಳು ಹೆಚ್ಚುತ್ತಿವೆ. ವಿದ್ಯಾರ್ಥಿಗಳಲ್ಲಿ ಸೋಲಿನ ಬಗ್ಗೆ ಸಾಕಷ್ಟು ಭೀತಿಗಳು ಹುಟ್ಟಿಕೊಂಡಿವೆ. ಪರೀಕ್ಷೆಗಳಲ್ಲಿ ಕಡಿಮೆ ಅಂಕಗಳ ಕಾರಣಕ್ಕೆ ತಾವೇ ದುರಂತಗಳಿಗೆ ಈಡಾಗುವ ವಿದ್ಯಾರ್ಥಿಗಳು ಹೆಚ್ಚಾಗುತ್ತಿದ್ದಾರೆ. <br /> <br /> ಕೇವಲ ಅಂಕಗಳ ವಿದ್ಯೆಯೇ ಬದುಕಿನಲ್ಲಿ ಮುಖ್ಯವಲ್ಲ ಎಂಬ ವಿಚಾರವನ್ನು ಎಲ್ಲ ವಿದ್ಯಾರ್ಥಿಗಳು ಅರಿಯಬೇಕು. ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ತುಂಬುವ ಬಗ್ಗೆ ಎಲ್ಲರೂ ಯೋಚಿಸಬೇಕು~ ಎಂದರು. ಕಾರ್ಯಕ್ರಮದಲ್ಲಿ ಸಮಾಜದ ಎಸ್.ಚಂದ್ರಣ್ಣ, ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎ. ದೇವಪ್ರಕಾಶ್, ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾದ ಬಿ.ಸಚ್ಚಿದಾನಂದ ಹಾಗೂ ಸೈಯ್ಯದ್ ಜಮಾಲ್ ಅವರನ್ನು ಸನ್ಮಾನಿಸಲಾಯಿತು. <br /> <br /> ಶ್ರೀಪಾದಗಡ್ಡಿ ಮತ್ತು ತಂಡದವರು ವಚನ ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.<br /> ಕರ್ನಾಟಕ ರಾಜ್ಯ ವೀರಶೈವ ನೌಕರರ ಲಿಂಗಾಯಿತ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಸವಲಿಂಗಯ್ಯ, ಪ್ರಧಾನ ಕಾರ್ಯದರ್ಶಿ ಸೋಮೇಶ್ ಚಿಕ್ಕಮಠ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>