<p><strong>ಬೆಂಗಳೂರು: ‘</strong>ಸಮಾಜದಲ್ಲಿ ಅಘೋಷಿತ ಅಸ್ಪೃಶ್ಯತೆ ಅಸ್ತಿತ್ವದಲ್ಲಿದ್ದು, ಅದರ ವಿರುದ್ಧ ಹೋರಾಡಲು ಸಂಘಟಿತರಾಗಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಲಹೆ ನೀಡಿದರು.<br /> <br /> ಛಲವಾದಿ ಮಹಾಸಭಾವು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಮಾತನಾಡಿ, ‘ಅಸ್ಪೃಶ್ಯತೆಯೆಂಬುದು ಮನಸ್ಸಿಗೆ ಅಂಟಿದ ಮೈಲಿಗೆ. ಅದನ್ನು ತೊಡೆದುಹಾಕುವ ನಿಟ್ಟಿನಲ್ಲಿ ಪಣ ತೊಡಬೇಕಿದೆ’ ಎಂದು ಹೇಳಿದರು.<br /> <br /> ಸಭಾದ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ, ‘ಸ್ವಾತಂತ್ರ್ಯ ಬಂದು 60 ವರ್ಷಗಳು ಕಳೆದಿದ್ದರೂ, ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಕೆಂಗೇರಿಗಿಂತ ತುಸು ಮುಂದೆ ಹೋದರೆ ದಲಿತರಿಗೆ ಹೋಟೆಲ್ನಲ್ಲಿ ಪ್ರವೇಶವಿಲ್ಲವೆಂಬುದು ಇಂದಿನ ಕಟು ವಾಸ್ತವ’ ಎಂದು ಹೇಳಿದರು.<br /> <br /> ‘ಛಲವಾದಿ ಸಮುದಾಯದಿಂದ ಈವರೆಗೆ ಒಬ್ಬರೂ ಮುಖ್ಯಮಂತ್ರಿಯಾಗಿಲ್ಲ. ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಬಾರದು ಎಂಬ ಕಾರಣದಿಂದಲೇ ಅವರನ್ನು ಚುನಾವಣೆಯಲ್ಲಿ ಸೋಲಿಸಲಾಗಿದೆ’ ಎಂದು ಆರೋಪಿಸಿದರು.<br /> <br /> ‘ಹಿಂದುಳಿದ ಜಾತಿಗಳು ಹಾಗೂ ಉಪಜಾತಿಗಳು ಸಂಘಟನೆಯಾಗುತ್ತಿರುವ ಈ ಹೊತ್ತಿನಲ್ಲಿ ಛಲವಾದಿ ಸಮುದಾಯವು ಒಗ್ಗಟ್ಟನ್ನು ಪ್ರದರ್ಶಿಸಬೇಕು. ಆ ಮೂಲಕ ರಾಜಕೀಯ ಪ್ರಾತಿನಿಧ್ಯ ಪಡೆಯುವ ತುರ್ತು ಎದುರಾಗಿದೆ’ ಎಂದರು.<br /> <br /> ವಿಧಾನಪರಿಷತ್ ಸದಸ್ಯೆ ಮೋಟಮ್ಮ, ‘ದಲಿತ ಮಹಿಳೆಯರು ಸ್ವಾಭಿಮಾನದಿಂದ ಸ್ವಾವಲಂಬಿಗಳಾಗಬೇಕು. ಆ ಮೂಲಕ ಸಮುದಾಯಕ್ಕೆ ಉತ್ತಮ ಹೆಸರು ತರಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಸಮಾಜದಲ್ಲಿ ಅಘೋಷಿತ ಅಸ್ಪೃಶ್ಯತೆ ಅಸ್ತಿತ್ವದಲ್ಲಿದ್ದು, ಅದರ ವಿರುದ್ಧ ಹೋರಾಡಲು ಸಂಘಟಿತರಾಗಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಲಹೆ ನೀಡಿದರು.<br /> <br /> ಛಲವಾದಿ ಮಹಾಸಭಾವು ನಗರದಲ್ಲಿ ಭಾನುವಾರ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಮಾತನಾಡಿ, ‘ಅಸ್ಪೃಶ್ಯತೆಯೆಂಬುದು ಮನಸ್ಸಿಗೆ ಅಂಟಿದ ಮೈಲಿಗೆ. ಅದನ್ನು ತೊಡೆದುಹಾಕುವ ನಿಟ್ಟಿನಲ್ಲಿ ಪಣ ತೊಡಬೇಕಿದೆ’ ಎಂದು ಹೇಳಿದರು.<br /> <br /> ಸಭಾದ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ, ‘ಸ್ವಾತಂತ್ರ್ಯ ಬಂದು 60 ವರ್ಷಗಳು ಕಳೆದಿದ್ದರೂ, ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಕೆಂಗೇರಿಗಿಂತ ತುಸು ಮುಂದೆ ಹೋದರೆ ದಲಿತರಿಗೆ ಹೋಟೆಲ್ನಲ್ಲಿ ಪ್ರವೇಶವಿಲ್ಲವೆಂಬುದು ಇಂದಿನ ಕಟು ವಾಸ್ತವ’ ಎಂದು ಹೇಳಿದರು.<br /> <br /> ‘ಛಲವಾದಿ ಸಮುದಾಯದಿಂದ ಈವರೆಗೆ ಒಬ್ಬರೂ ಮುಖ್ಯಮಂತ್ರಿಯಾಗಿಲ್ಲ. ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಬಾರದು ಎಂಬ ಕಾರಣದಿಂದಲೇ ಅವರನ್ನು ಚುನಾವಣೆಯಲ್ಲಿ ಸೋಲಿಸಲಾಗಿದೆ’ ಎಂದು ಆರೋಪಿಸಿದರು.<br /> <br /> ‘ಹಿಂದುಳಿದ ಜಾತಿಗಳು ಹಾಗೂ ಉಪಜಾತಿಗಳು ಸಂಘಟನೆಯಾಗುತ್ತಿರುವ ಈ ಹೊತ್ತಿನಲ್ಲಿ ಛಲವಾದಿ ಸಮುದಾಯವು ಒಗ್ಗಟ್ಟನ್ನು ಪ್ರದರ್ಶಿಸಬೇಕು. ಆ ಮೂಲಕ ರಾಜಕೀಯ ಪ್ರಾತಿನಿಧ್ಯ ಪಡೆಯುವ ತುರ್ತು ಎದುರಾಗಿದೆ’ ಎಂದರು.<br /> <br /> ವಿಧಾನಪರಿಷತ್ ಸದಸ್ಯೆ ಮೋಟಮ್ಮ, ‘ದಲಿತ ಮಹಿಳೆಯರು ಸ್ವಾಭಿಮಾನದಿಂದ ಸ್ವಾವಲಂಬಿಗಳಾಗಬೇಕು. ಆ ಮೂಲಕ ಸಮುದಾಯಕ್ಕೆ ಉತ್ತಮ ಹೆಸರು ತರಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>