<p>ಶಿವಮೊಗ್ಗ: ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಳಿತಿದ್ದು ಎಲ್ಲರ ಹುಬ್ಬೇರಿಸಿತು.<br /> <br /> ಸದಾನಂದಗೌಡ ಅವರು ಮಾತನಾಡಿ ಮುಗಿಸುವವರೆಗೂ ಸುಮ್ಮನೆ ಕುಳಿತಿದ್ದ ಯಡಿಯೂರಪ್ಪ, ಕೊನೆಯಲ್ಲಿ, ತಾವು ಜಿಲ್ಲೆಗೆ ನೀಡಿದ ವಿಶೇಷ ಅನುದಾನಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು; ಹಾಗೆಯೇ, ಜಿಲ್ಲೆಗೆ ಬಜೆಟ್ನಲ್ಲಿ ಘೋಷಿಸಿದ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೆತ್ತಿಕೊಳ್ಳಬೇಕು ಎಂದು ಸಲಹೆ ರೂಪದ ಸೂಚನೆ ನೀಡಿದರು.<br /> <br /> ಸಭೆಯ ಮಧ್ಯೆ ಗಾಂಧಿ ಪಾರ್ಕ್ಗೆ ಬಾಕಿ ್ಙ ಐದು ಕೋಟಿ ನೀಡುವಂತೆ ಹೇಳಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಸದಾನಂದಗೌಡ, `ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ; ಅದರಂತೆ ್ಙ ಐದು ಕೋಟಿ ತಕ್ಷಣ ಬಿಡುಗಡೆ ಮಾಡಲಾಗುವುದು~ ಎಂದರು.</p>.<p><br /> ಸಭೆಯ ಹೆಚ್ಚಿನ ಸಮಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಗಿಂತ ಶಾಸಕರಾದ ಕಿಮ್ಮೆನೆ ರತ್ನಾಕರ, ಬೇಳೂರು ಗೋಪಾಲಕೃಷ್ಣ, ಕೆ.ಜಿ. ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಆರ್.ಕೆ. ಸಿದ್ದರಾಮಣ್ಣ ಕ್ಷೇತ್ರದ ಸಮಸ್ಯೆಗಳನ್ನು ಆಲಿಸುವುದರಲ್ಲಿ ಕಳೆಯಿತು.<br /> <br /> ಸಭೆಯಲ್ಲಿ ಪಾಲ್ಗೊಳ್ಳಲು ಜಿ.ಪಂ. ಕಚೇರಿ ಬಾಗಿಲುವರೆಗೆ ಬಂದು ಶಾಸಕ ಕೆ.ಎಸ್. ಈಶ್ವರಪ್ಪ ಹಿಂತಿರುಗಿದ್ದು ನಿಗೂಢವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಳಿತಿದ್ದು ಎಲ್ಲರ ಹುಬ್ಬೇರಿಸಿತು.<br /> <br /> ಸದಾನಂದಗೌಡ ಅವರು ಮಾತನಾಡಿ ಮುಗಿಸುವವರೆಗೂ ಸುಮ್ಮನೆ ಕುಳಿತಿದ್ದ ಯಡಿಯೂರಪ್ಪ, ಕೊನೆಯಲ್ಲಿ, ತಾವು ಜಿಲ್ಲೆಗೆ ನೀಡಿದ ವಿಶೇಷ ಅನುದಾನಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು; ಹಾಗೆಯೇ, ಜಿಲ್ಲೆಗೆ ಬಜೆಟ್ನಲ್ಲಿ ಘೋಷಿಸಿದ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೆತ್ತಿಕೊಳ್ಳಬೇಕು ಎಂದು ಸಲಹೆ ರೂಪದ ಸೂಚನೆ ನೀಡಿದರು.<br /> <br /> ಸಭೆಯ ಮಧ್ಯೆ ಗಾಂಧಿ ಪಾರ್ಕ್ಗೆ ಬಾಕಿ ್ಙ ಐದು ಕೋಟಿ ನೀಡುವಂತೆ ಹೇಳಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಸದಾನಂದಗೌಡ, `ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ; ಅದರಂತೆ ್ಙ ಐದು ಕೋಟಿ ತಕ್ಷಣ ಬಿಡುಗಡೆ ಮಾಡಲಾಗುವುದು~ ಎಂದರು.</p>.<p><br /> ಸಭೆಯ ಹೆಚ್ಚಿನ ಸಮಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆಗಿಂತ ಶಾಸಕರಾದ ಕಿಮ್ಮೆನೆ ರತ್ನಾಕರ, ಬೇಳೂರು ಗೋಪಾಲಕೃಷ್ಣ, ಕೆ.ಜಿ. ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಆರ್.ಕೆ. ಸಿದ್ದರಾಮಣ್ಣ ಕ್ಷೇತ್ರದ ಸಮಸ್ಯೆಗಳನ್ನು ಆಲಿಸುವುದರಲ್ಲಿ ಕಳೆಯಿತು.<br /> <br /> ಸಭೆಯಲ್ಲಿ ಪಾಲ್ಗೊಳ್ಳಲು ಜಿ.ಪಂ. ಕಚೇರಿ ಬಾಗಿಲುವರೆಗೆ ಬಂದು ಶಾಸಕ ಕೆ.ಎಸ್. ಈಶ್ವರಪ್ಪ ಹಿಂತಿರುಗಿದ್ದು ನಿಗೂಢವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>