<p>ಹರಿಹರ: ‘ದೇವರು ಒಬ್ಬನೇ ಎಂಬ ಮನೋಭಾವ ಬೆಳೆಸಿಕೊಂಡಾಗ ಸಹೋದರತ್ವ ಜಾಗೃತವಾಗುತ್ತದೆ’ ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಅಯ್ಯಪ್ಪಸ್ವಾಮಿ ಮಹಾ ದೀಪೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಮಹಾದೀಪೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.<br /> <br /> ಅಜ್ಞಾನವೆಂಬ ಅಂಧಕಾರ ಕಳೆದು ಜ್ಞಾನ ಬೆಳಕು ಪಡೆಯುವ ಉದ್ದೇಶದಿಂದ ದೀಪೋತ್ಸವ ಆಚರಿಸುತ್ತಾರೆ. ದೀಪೋತ್ಸವದಂದು ದುರ್ಗಣ ಬಿಟ್ಟು ಸದ್ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.<br /> <br /> ಮಕ್ಕಳಿಗೆ ದೇವರ ಹೆಸರು ನಾಮಕರಣ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಬೆಳೆಯುವಾಗ ಮಕ್ಕಳು ಕೆಟ್ಟ ಹವ್ಯಾಸಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಬೋಧನೆ ಮಾಡಿದರು.<br /> <br /> ಕಾರ್ಯಕ್ರಮಕ್ಕೂ ಮುನ್ನ ನಗರದ ಜೋಡು ಬಸವೇಶ್ವರ ದೇವಸ್ಥಾನದಿಂದ ಆರಂಭವಾದ ದೀಪೋತ್ಸವ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆ ಯಿಂದ ಸಂಚರಿಸಿತು. ನೂರಾರು ಬಾಲಕಿಯರು ಹಾಗೂ ಯುವತಿಯರು ದೀಪೋತ್ಸವದಲ್ಲಿ ಭಾಗವಹಿಸಿದ್ದರು.<br /> <br /> ದೀಪೋತ್ಸವದ ನಂತರ ನಡೆದ ವಿವಿಧ ಬಗೆಯ ಸಿಡಿಮದ್ದು ಹಾಗೂ ಬಾಣ ಬಿರುಸುಗಳ ಪ್ರದರ್ಶನ ನೆರಿದಿದ್ದ ಭಕ್ತರ ಮನಸೂರೆಗೊಂಡಿತ್ತು.<br /> <br /> ಅಯ್ಯಪಸ್ವಾಮಿ ಮಹಾ ದೀಪೋತ್ಸವ ಸಮಿತಿ ವತಿಯಿಂದ ನಗರದ ತುಂಗಭದ್ರ ನದಿ ದಡದಲ್ಲಿರುವ ಅಯ್ಯಪ್ಪ ದೇವಸ್ಥಾನದ ಆವರಣದಲ್ಲಿ ಭಾನುವಾರ ಅನ್ನ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪ್ರಸಾದ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ‘ದೇವರು ಒಬ್ಬನೇ ಎಂಬ ಮನೋಭಾವ ಬೆಳೆಸಿಕೊಂಡಾಗ ಸಹೋದರತ್ವ ಜಾಗೃತವಾಗುತ್ತದೆ’ ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಅಯ್ಯಪ್ಪಸ್ವಾಮಿ ಮಹಾ ದೀಪೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಮಹಾದೀಪೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.<br /> <br /> ಅಜ್ಞಾನವೆಂಬ ಅಂಧಕಾರ ಕಳೆದು ಜ್ಞಾನ ಬೆಳಕು ಪಡೆಯುವ ಉದ್ದೇಶದಿಂದ ದೀಪೋತ್ಸವ ಆಚರಿಸುತ್ತಾರೆ. ದೀಪೋತ್ಸವದಂದು ದುರ್ಗಣ ಬಿಟ್ಟು ಸದ್ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.<br /> <br /> ಮಕ್ಕಳಿಗೆ ದೇವರ ಹೆಸರು ನಾಮಕರಣ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಬೆಳೆಯುವಾಗ ಮಕ್ಕಳು ಕೆಟ್ಟ ಹವ್ಯಾಸಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಬೋಧನೆ ಮಾಡಿದರು.<br /> <br /> ಕಾರ್ಯಕ್ರಮಕ್ಕೂ ಮುನ್ನ ನಗರದ ಜೋಡು ಬಸವೇಶ್ವರ ದೇವಸ್ಥಾನದಿಂದ ಆರಂಭವಾದ ದೀಪೋತ್ಸವ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆ ಯಿಂದ ಸಂಚರಿಸಿತು. ನೂರಾರು ಬಾಲಕಿಯರು ಹಾಗೂ ಯುವತಿಯರು ದೀಪೋತ್ಸವದಲ್ಲಿ ಭಾಗವಹಿಸಿದ್ದರು.<br /> <br /> ದೀಪೋತ್ಸವದ ನಂತರ ನಡೆದ ವಿವಿಧ ಬಗೆಯ ಸಿಡಿಮದ್ದು ಹಾಗೂ ಬಾಣ ಬಿರುಸುಗಳ ಪ್ರದರ್ಶನ ನೆರಿದಿದ್ದ ಭಕ್ತರ ಮನಸೂರೆಗೊಂಡಿತ್ತು.<br /> <br /> ಅಯ್ಯಪಸ್ವಾಮಿ ಮಹಾ ದೀಪೋತ್ಸವ ಸಮಿತಿ ವತಿಯಿಂದ ನಗರದ ತುಂಗಭದ್ರ ನದಿ ದಡದಲ್ಲಿರುವ ಅಯ್ಯಪ್ಪ ದೇವಸ್ಥಾನದ ಆವರಣದಲ್ಲಿ ಭಾನುವಾರ ಅನ್ನ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಿತು. ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಪ್ರಸಾದ ಸ್ವೀಕರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>