<p><strong>ಬೆಂಗಳೂರು</strong>: ಗುಟ್ಕಾ ಪ್ಯಾಕಿಂಗ್ನಲ್ಲಿ ಪ್ಲಾಸ್ಟಿಕ್ ಸ್ಯಾಶೆ ಬಳಕೆಗೆ ಪೂರಕವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಶೀಘ್ರದಲ್ಲಿ ನಿಯೋಗ ಕೊಂಡೊಯ್ಯುವಂತೆ ಒತ್ತಾಯಿಸಿ ಅಡಿಕೆ ಬೆಳೆಗಾರರ ಕ್ಷೇತ್ರದ ಶಾಸಕರು ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.<br /> <br /> ವಿಧಾನಸಭೆಯಲ್ಲಿನ ಸರ್ಕಾರದ ಮುಖ್ಯ ಸಚೇತಕ ಡಿ.ಎನ್.ಜೀವರಾಜ್ ಮತ್ತು ವಿರೋಧಪಕ್ಷದ ಸಚೇತಕ ಕೆ.ಅಭಯಚಂದ್ರ ಜೈನ್ ನೇತೃತ್ವದಲ್ಲಿ ವಿಧಾನಸಭೆಯ ಮೊಗಸಾಲೆಯಲ್ಲಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕರನ್ನು ಪ್ರತ್ಯೇಕವಾಗಿ ಭೇಟಿಮಾಡಿದ ಶಾಸಕರು, ಅಡಿಕೆ ಬೆಳೆಗಾರರ ರಕ್ಷಣೆಗೆ ಬರುವಂತೆ ಮನವಿ ಸಲ್ಲಿಸಿದರು. <br /> <br /> ರಾಜ್ಯದಿಂದ ತಕ್ಷಣವೇ ದೆಹಲಿಗೆ ಉನ್ನತಮಟ್ಟದ ನಿಯೋಗ ಕೊಂಡೊಯ್ಯಬೇಕು. ಗುಟ್ಕಾ ಪ್ಯಾಕಿಂಗ್ನಲ್ಲಿ ಪ್ಲಾಸ್ಟಿಕ್ ಸ್ಯಾಶೆ ಬಳಕೆಗೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಬೆಲೆ ಕುಸಿತದಿಂದ ಕಂಗಾಲಾಗಿರುವ ಅಡಿಕೆ ಬೆಳೆಗಾರರನ್ನು ರಕ್ಷಿಸಲು ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರವನ್ನು ಆಗ್ರಹಿಸಬೇಕು ಎಂದು ಈ ಶಾಸಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗುಟ್ಕಾ ಪ್ಯಾಕಿಂಗ್ನಲ್ಲಿ ಪ್ಲಾಸ್ಟಿಕ್ ಸ್ಯಾಶೆ ಬಳಕೆಗೆ ಪೂರಕವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಶೀಘ್ರದಲ್ಲಿ ನಿಯೋಗ ಕೊಂಡೊಯ್ಯುವಂತೆ ಒತ್ತಾಯಿಸಿ ಅಡಿಕೆ ಬೆಳೆಗಾರರ ಕ್ಷೇತ್ರದ ಶಾಸಕರು ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.<br /> <br /> ವಿಧಾನಸಭೆಯಲ್ಲಿನ ಸರ್ಕಾರದ ಮುಖ್ಯ ಸಚೇತಕ ಡಿ.ಎನ್.ಜೀವರಾಜ್ ಮತ್ತು ವಿರೋಧಪಕ್ಷದ ಸಚೇತಕ ಕೆ.ಅಭಯಚಂದ್ರ ಜೈನ್ ನೇತೃತ್ವದಲ್ಲಿ ವಿಧಾನಸಭೆಯ ಮೊಗಸಾಲೆಯಲ್ಲಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕರನ್ನು ಪ್ರತ್ಯೇಕವಾಗಿ ಭೇಟಿಮಾಡಿದ ಶಾಸಕರು, ಅಡಿಕೆ ಬೆಳೆಗಾರರ ರಕ್ಷಣೆಗೆ ಬರುವಂತೆ ಮನವಿ ಸಲ್ಲಿಸಿದರು. <br /> <br /> ರಾಜ್ಯದಿಂದ ತಕ್ಷಣವೇ ದೆಹಲಿಗೆ ಉನ್ನತಮಟ್ಟದ ನಿಯೋಗ ಕೊಂಡೊಯ್ಯಬೇಕು. ಗುಟ್ಕಾ ಪ್ಯಾಕಿಂಗ್ನಲ್ಲಿ ಪ್ಲಾಸ್ಟಿಕ್ ಸ್ಯಾಶೆ ಬಳಕೆಗೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಬೆಲೆ ಕುಸಿತದಿಂದ ಕಂಗಾಲಾಗಿರುವ ಅಡಿಕೆ ಬೆಳೆಗಾರರನ್ನು ರಕ್ಷಿಸಲು ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರವನ್ನು ಆಗ್ರಹಿಸಬೇಕು ಎಂದು ಈ ಶಾಸಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>