<p>ಬೆಂಗಳೂರು: ‘ಅಡಿಕೆಯ ಕುರಿತು ನೈಜವಾದ ಸಂಶೋಧನಾ ವರದಿಗಳನ್ನು ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು.<br /> <br /> ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಆರೋಗ್ಯ ಸಚಿವಾಲಯವು ಮೊದಲು ಅಡಿಕೆ ಮಿಶ್ರಿತ ತಂಬಾಕು ತಿಂದರೆ ಕ್ಯಾನ್ಸರ್ ಬರುತ್ತದೆಯೆಂದು ಹೇಳಿದ್ದು, ಈಗ ಬರೀ ಅಡಿಕೆ ಸೇವನೆಯಿಂದಲೂ ಕ್ಯಾನ್ಸರ್ಗೆ ತುತ್ತಾಗಬೇಕಾಗುತ್ತದೆ ಎಂದು ಹೇಳಿಕೆ ನೀಡಿದೆ. ಈ ಹೇಳಿಕೆಯು ಅವೈಜ್ಞಾನಿಕವಾಗಿದೆ’ ಎಂದರು.<br /> <br /> ‘ಜವಾಹರ್ಲಾಲ್ ವಿಶ್ವವಿದ್ಯಾಲಯದ ಕ್ಯಾನ್ಸರ್ ಬಯಾಲಜಿ ಸಂಶೋಧನಾ ಕೇಂದ್ರವು ಅಡಿಕೆಯ ಬಗೆಗೆ ಸಂಶೋಧನೆ ಕೈಗೊಂಡು ಅಡಿಕೆ ತಿನ್ನುವುದರಿಂದ ಕ್ಯಾನ್ಸರ್ ಬರುವುದಿಲ್ಲ ವೆಂದು ದಾಖಲೆಗಳನ್ನು ನೀಡಿದೆ’ ಎಂದರು.<br /> <br /> ‘ಸಂಶೋಧನಾ ಕೇಂದ್ರದ ದಾಖಲೆಗಳನ್ನು ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಬೇಕು. ಅಡಿಕೆಯ ಬಗೆಗಿರುವ ತಪ್ಪು ಗ್ರಹಿಕೆಗಳನ್ನು ಹೋಗಲಾಡಿಸಬೇಕು. ಜನತೆಗೆ ತಪ್ಪು ಮಾಹಿತಿ ರವಾನಿಸುವುದನ್ನು ತಪ್ಪಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಅಡಿಕೆಯ ಕುರಿತು ನೈಜವಾದ ಸಂಶೋಧನಾ ವರದಿಗಳನ್ನು ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು.<br /> <br /> ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಆರೋಗ್ಯ ಸಚಿವಾಲಯವು ಮೊದಲು ಅಡಿಕೆ ಮಿಶ್ರಿತ ತಂಬಾಕು ತಿಂದರೆ ಕ್ಯಾನ್ಸರ್ ಬರುತ್ತದೆಯೆಂದು ಹೇಳಿದ್ದು, ಈಗ ಬರೀ ಅಡಿಕೆ ಸೇವನೆಯಿಂದಲೂ ಕ್ಯಾನ್ಸರ್ಗೆ ತುತ್ತಾಗಬೇಕಾಗುತ್ತದೆ ಎಂದು ಹೇಳಿಕೆ ನೀಡಿದೆ. ಈ ಹೇಳಿಕೆಯು ಅವೈಜ್ಞಾನಿಕವಾಗಿದೆ’ ಎಂದರು.<br /> <br /> ‘ಜವಾಹರ್ಲಾಲ್ ವಿಶ್ವವಿದ್ಯಾಲಯದ ಕ್ಯಾನ್ಸರ್ ಬಯಾಲಜಿ ಸಂಶೋಧನಾ ಕೇಂದ್ರವು ಅಡಿಕೆಯ ಬಗೆಗೆ ಸಂಶೋಧನೆ ಕೈಗೊಂಡು ಅಡಿಕೆ ತಿನ್ನುವುದರಿಂದ ಕ್ಯಾನ್ಸರ್ ಬರುವುದಿಲ್ಲ ವೆಂದು ದಾಖಲೆಗಳನ್ನು ನೀಡಿದೆ’ ಎಂದರು.<br /> <br /> ‘ಸಂಶೋಧನಾ ಕೇಂದ್ರದ ದಾಖಲೆಗಳನ್ನು ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಬೇಕು. ಅಡಿಕೆಯ ಬಗೆಗಿರುವ ತಪ್ಪು ಗ್ರಹಿಕೆಗಳನ್ನು ಹೋಗಲಾಡಿಸಬೇಕು. ಜನತೆಗೆ ತಪ್ಪು ಮಾಹಿತಿ ರವಾನಿಸುವುದನ್ನು ತಪ್ಪಿಸಬೇಕು’ ಎಂದು ಅವರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>