ಅಡ್ಡ ಮತದಾನ: ತಪ್ಪಿತಸ್ಥರ ಪತ್ತೆಗೆ ಸಮಿತಿ ರಚನೆ
ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲೂ ಬಿಜೆಪಿಯ ಕೆಲ ಶಾಸಕರು ಅಡ್ಡ ಮತದಾನ ಮಾಡಿರುವುದನ್ನು ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರನ್ನು ಪತ್ತೆಹಚ್ಚಲು ಸಮಿತಿಯೊಂದನ್ನು ರಚಿಸಲಿದ್ದಾರೆ.
ಈ ವಿಷಯವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ `ಪ್ರಜಾವಾಣಿ~ಗೆ ತಿಳಿಸಿದರು.
`ಇದು ಬೇಸರದ ಸಂಗತಿ. ಆದರೆ, ಈ ಕೃತ್ಯ ಎಸಗಿದವರನ್ನು ಪತ್ತೆಹಚ್ಚುವವರೆಗೂ ವಿರಮಿಸುವುದಿಲ್ಲ. ವರಿಷ್ಠರು ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ~ ಎಂದು ಅವರು ಹೇಳಿದರು.
ಪಕ್ಷ ವಿರೋಧಿ ಕೆಲಸವನ್ನು ಯಾರು ಮಾಡಿದ್ದಾರೆ ಎಂಬುದನ್ನು ನಿಖರವಾಗಿ ಹೇಳುವುದು ಕಷ್ಟ. ಈ ಕುರಿತು ತನಿಖೆ ನಡೆಸುವ ಸಲುವಾಗಿಯೇ ಸಮಿತಿ ರಚಿಸಲಾಗುವುದು~ ಎಂದು ಅವರು ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.