<p><strong>ಬೆಂಗಳೂರು:</strong> ಕೂಡುಂಕುಳಂ ಅಣು ಸ್ಥಾವರದ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ನಗರದ ಪುರಭವನದ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.<br /> <br /> ಕಳೆದ ವರ್ಷ ಸಂಭವಿಸಿದ ಫುಕೋಶಿಮಾ ಅಣು ಸ್ಥಾವರ ಸ್ಫೋಟದಿಂದ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಈಗ ಮತ್ತೊಂದು ಅಣು ಸ್ಥಾವರವನ್ನು ಸ್ಥಾಪಿಸಲು ಚಿಂತನೆ ನಡೆಸಿದ್ದು, ಅದನ್ನು ವಿರೋಧಿಸಿ ಹೋರಾಟ ಮಾಡಿದವರನ್ನು ಬಂಧಿಸಲು ಸರ್ಕಾರ ಮುಂದಾಗಿದೆ. <br /> <br /> ಇದಕ್ಕಾಗಿ ಕೂಡುಂಕುಳಂ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲಿ ಸಾವಿರಾರು ಪೊಲೀಸರನ್ನು ಹಾಗೂ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆಯಾಗದೇ ಜನ ಪರದಾಡುತ್ತಿದ್ದಾರೆ. ಭಾರತದಲ್ಲಿ ಮತ್ತೊಂದು ಅಣು ಸ್ಥಾವರ ವಿಪತ್ತು ಸಂಭವಿಸಿದರೆ ದೇಶ ಸುಧಾರಿಸಿಕೊಳ್ಳುವುದು ಕಷ್ಟ ಎಂದು ಜಪಾನ್ ಸರ್ಕಾರ ಕೂಡಾ ಸಲಹೆ ನೀಡಿದೆ. ಆದರೂ, ಸರ್ಕಾರ ಈ ಬಗ್ಗೆ ಚಿಂತಿಸುತ್ತಿಲ್ಲ. ಅಣು ಸ್ಥಾವರದ ಸ್ಥಾಪನೆಯಾದರೆ ಸುತ್ತಮುತ್ತಲ ನಿವಾಸಿಗಳು ಮಾರಕ ರೋಗಗಳಿಗೆ ಗುರಿಯಾಗುವುದಲ್ಲದೆ, ಅಲ್ಲಿರುವ ಅರಣ್ಯ ಸಂಪತ್ತು ಕೂಡ ಸಂಪೂರ್ಣ ನಾಶವಾಗಲಿದೆ ಎಂದರು.<br /> <br /> ಈಗಾಗಲೇ ಪೊಲೀಸರು ಕೂಡುಂಕುಳಂ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 300 ಜನರನ್ನು ಬಂಧಿಸಿದ್ದಾರೆ. <br /> <br /> ಕೂಡಲೇ ಅವರನ್ನು ಬಿಡುಗಡೆಗೊಳಿಸಿ, ಆರೋಪ ಮುಕ್ತರನ್ನಾಗಿ ಮಾಡಬೇಕು ಹಾಗೂ ಸ್ಥಳದಲ್ಲಿ ವಿಧಿಸಿರುವ ನಿಷೇಧಾಜ್ಞೆಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ರಾಜ್ಯ ಮಾನವ ಹಕ್ಕುಗಳ ಸಂಘಟನೆ, ತಮಿಳರನ್ನು ರಕ್ಷಿಸಿ ಆಂದೋಲನ, ಪೆರಿಯಾರ್ ದ್ರಾವಿಡ ಕಜಗಂ ಸೇರಿದಂತೆ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೂಡುಂಕುಳಂ ಅಣು ಸ್ಥಾವರದ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ನಗರದ ಪುರಭವನದ ಮುಂದೆ ಭಾನುವಾರ ಪ್ರತಿಭಟನೆ ನಡೆಸಿದರು.<br /> <br /> ಕಳೆದ ವರ್ಷ ಸಂಭವಿಸಿದ ಫುಕೋಶಿಮಾ ಅಣು ಸ್ಥಾವರ ಸ್ಫೋಟದಿಂದ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಈಗ ಮತ್ತೊಂದು ಅಣು ಸ್ಥಾವರವನ್ನು ಸ್ಥಾಪಿಸಲು ಚಿಂತನೆ ನಡೆಸಿದ್ದು, ಅದನ್ನು ವಿರೋಧಿಸಿ ಹೋರಾಟ ಮಾಡಿದವರನ್ನು ಬಂಧಿಸಲು ಸರ್ಕಾರ ಮುಂದಾಗಿದೆ. <br /> <br /> ಇದಕ್ಕಾಗಿ ಕೂಡುಂಕುಳಂ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲಿ ಸಾವಿರಾರು ಪೊಲೀಸರನ್ನು ಹಾಗೂ ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ ಮಾಡಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆಯಾಗದೇ ಜನ ಪರದಾಡುತ್ತಿದ್ದಾರೆ. ಭಾರತದಲ್ಲಿ ಮತ್ತೊಂದು ಅಣು ಸ್ಥಾವರ ವಿಪತ್ತು ಸಂಭವಿಸಿದರೆ ದೇಶ ಸುಧಾರಿಸಿಕೊಳ್ಳುವುದು ಕಷ್ಟ ಎಂದು ಜಪಾನ್ ಸರ್ಕಾರ ಕೂಡಾ ಸಲಹೆ ನೀಡಿದೆ. ಆದರೂ, ಸರ್ಕಾರ ಈ ಬಗ್ಗೆ ಚಿಂತಿಸುತ್ತಿಲ್ಲ. ಅಣು ಸ್ಥಾವರದ ಸ್ಥಾಪನೆಯಾದರೆ ಸುತ್ತಮುತ್ತಲ ನಿವಾಸಿಗಳು ಮಾರಕ ರೋಗಗಳಿಗೆ ಗುರಿಯಾಗುವುದಲ್ಲದೆ, ಅಲ್ಲಿರುವ ಅರಣ್ಯ ಸಂಪತ್ತು ಕೂಡ ಸಂಪೂರ್ಣ ನಾಶವಾಗಲಿದೆ ಎಂದರು.<br /> <br /> ಈಗಾಗಲೇ ಪೊಲೀಸರು ಕೂಡುಂಕುಳಂ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 300 ಜನರನ್ನು ಬಂಧಿಸಿದ್ದಾರೆ. <br /> <br /> ಕೂಡಲೇ ಅವರನ್ನು ಬಿಡುಗಡೆಗೊಳಿಸಿ, ಆರೋಪ ಮುಕ್ತರನ್ನಾಗಿ ಮಾಡಬೇಕು ಹಾಗೂ ಸ್ಥಳದಲ್ಲಿ ವಿಧಿಸಿರುವ ನಿಷೇಧಾಜ್ಞೆಯನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ರಾಜ್ಯ ಮಾನವ ಹಕ್ಕುಗಳ ಸಂಘಟನೆ, ತಮಿಳರನ್ನು ರಕ್ಷಿಸಿ ಆಂದೋಲನ, ಪೆರಿಯಾರ್ ದ್ರಾವಿಡ ಕಜಗಂ ಸೇರಿದಂತೆ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>