<p>ದಾವಣಗೆರೆ: ಅಣು ವಿದ್ಯುತ್ ಸ್ಥಾವರಗಳು ಸುರಕ್ಷಿತ. ಅವುಗಳಿಂದ ಮಾನವ ಅಥವಾ ಪರಿಸರದ ಮೇಲೆ ಪ್ರತಿಕೂಲ ಪರಿಣಾಮವೇನು ಉಂಟಾಗುವುದಿಲ್ಲ. ಹೀಗಾಗಿ, ಇಂತಹ ಸ್ಥಾವರಗಳ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ.ಪಿ. ವಂಕಟರಾಮಯ್ಯ ತಿಳಿಸಿದರು.<br /> <br /> ನಗರದ ಬಾಪೂಜಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆಯಲ್ಲಿ ವಿಜ್ಞಾನ ವೇದಿಕೆ ವತಿಯಿಂದ ಈಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ- 2012 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> ದೇಶದ ವಿವಿಧ ಭೌಗೋಳಿಕ ಪ್ರದೇಶಗಳಲ್ಲಿ ಹಿಂದೆಯೇ ಹಲವು ಅಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಾಗಿದೆ. ಅವುಗಳು ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರದೆ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳು ಈ ಮಾಹಿತಿಯನ್ನು ಪ್ರಚಾರಪಡಿಸಬೇಕು. ಮುಖ್ಯವಾಗಿ ಇಂಥ ಯೋಜನೆಗಳನ್ನು ಪ್ರಬಲವಾಗಿ ವಿರೋಧಿಸುತ್ತಿರುವ ಗ್ರಾಮೀಣ ಪ್ರದೇಶಗಳ ಜನಸಾಮಾನ್ಯರಿಗೆ ಈ ವಿಷಯವನ್ನು ತಿಳಿಸುವ ಅಗತ್ಯವಿದೆ. <br /> <br /> ಭವಿಷ್ಯದ ದಿನಗಳಲ್ಲಿ ಅಣು ವಿದ್ಯುತ್ ಸ್ಥಾವರಗಳಿಗೆ ಆದ್ಯತೆ ನೀಡಿದಲ್ಲಿ, ಭಾರತ `ಸೂಪರ್ ಪವರ್~ ದೇಶವಾಗಲಿದೆ ಎಂದು ಪ್ರತಿಪಾದಿಸಿದರು.<br /> <br /> ಯುವ ಎಂಜಿನಿಯರ್ಗಳು ಪರ್ಯಾಯ ವಿದ್ಯುತ್ ಮೂಲಗಳಾದ ಸೌರಶಕ್ತಿ, ಜಲ ವಿದ್ಯುತ್, ಪವನಶಕ್ತಿ ಮೊದಲಾದವುಗಳಿಗೆ ಸಂಬಂಧಿಸಿದಂತೆ ಹೆಚ್ಚು ಹೆಚ್ಚು ಸಂಶೋಧನೆಗಳನ್ನು ನಡೆಸಬೇಕು ಹಾಗೂ ಯೋಜನೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಕರೆ ನೀಡಿದರು.<br /> <br /> ಬಿಐಇಟಿ ನಿರ್ದೇಶಕ ಪ್ರೊ.ವೈ. ವೃಷಭೇಂದ್ರಪ್ಪ, ಪ್ರಾಂಶುಪಾಲ ಪ್ರೊ.ವಿ. ರಾಮಸ್ವಾಮಿ, ವಿಜ್ಞಾನ ವೇದಿಕೆ ಸಂಚಾಲಕ ಪ್ರೊ.ಎಂ.ಎಸ್. ದೇವೇಂದ್ರಪ್ಪ, ಪ್ರೊ.ಕೆ.ಎಸ್. ಬಸವರಾಜಪ್ಪ, ಪ್ರೊ.ಬಿ.ಇ. ಬಸವರಾಜಪ್ಪ ಮಾತನಾಡಿದರು.<br /> <br /> ವಿಜ್ಞಾನ ವೇದಿಕೆ ವತಿಯಿಂದ ನಡೆಸಿದ ರಸಪ್ರಶ್ನೆ, ಪ್ರಬಂಧ, ಚರ್ಚಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.ಬಿಐಇಟಿ ಆಡಳಿತ ಮಂಡಳಿ ಅಧ್ಯಕ್ಷ ಎ.ಸಿ. ಜಯಣ್ಣ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಅಣು ವಿದ್ಯುತ್ ಸ್ಥಾವರಗಳು ಸುರಕ್ಷಿತ. ಅವುಗಳಿಂದ ಮಾನವ ಅಥವಾ ಪರಿಸರದ ಮೇಲೆ ಪ್ರತಿಕೂಲ ಪರಿಣಾಮವೇನು ಉಂಟಾಗುವುದಿಲ್ಲ. ಹೀಗಾಗಿ, ಇಂತಹ ಸ್ಥಾವರಗಳ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಪ್ರೊ.ಪಿ. ವಂಕಟರಾಮಯ್ಯ ತಿಳಿಸಿದರು.<br /> <br /> ನಗರದ ಬಾಪೂಜಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆಯಲ್ಲಿ ವಿಜ್ಞಾನ ವೇದಿಕೆ ವತಿಯಿಂದ ಈಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ- 2012 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> ದೇಶದ ವಿವಿಧ ಭೌಗೋಳಿಕ ಪ್ರದೇಶಗಳಲ್ಲಿ ಹಿಂದೆಯೇ ಹಲವು ಅಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಲಾಗಿದೆ. ಅವುಗಳು ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರದೆ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳು ಈ ಮಾಹಿತಿಯನ್ನು ಪ್ರಚಾರಪಡಿಸಬೇಕು. ಮುಖ್ಯವಾಗಿ ಇಂಥ ಯೋಜನೆಗಳನ್ನು ಪ್ರಬಲವಾಗಿ ವಿರೋಧಿಸುತ್ತಿರುವ ಗ್ರಾಮೀಣ ಪ್ರದೇಶಗಳ ಜನಸಾಮಾನ್ಯರಿಗೆ ಈ ವಿಷಯವನ್ನು ತಿಳಿಸುವ ಅಗತ್ಯವಿದೆ. <br /> <br /> ಭವಿಷ್ಯದ ದಿನಗಳಲ್ಲಿ ಅಣು ವಿದ್ಯುತ್ ಸ್ಥಾವರಗಳಿಗೆ ಆದ್ಯತೆ ನೀಡಿದಲ್ಲಿ, ಭಾರತ `ಸೂಪರ್ ಪವರ್~ ದೇಶವಾಗಲಿದೆ ಎಂದು ಪ್ರತಿಪಾದಿಸಿದರು.<br /> <br /> ಯುವ ಎಂಜಿನಿಯರ್ಗಳು ಪರ್ಯಾಯ ವಿದ್ಯುತ್ ಮೂಲಗಳಾದ ಸೌರಶಕ್ತಿ, ಜಲ ವಿದ್ಯುತ್, ಪವನಶಕ್ತಿ ಮೊದಲಾದವುಗಳಿಗೆ ಸಂಬಂಧಿಸಿದಂತೆ ಹೆಚ್ಚು ಹೆಚ್ಚು ಸಂಶೋಧನೆಗಳನ್ನು ನಡೆಸಬೇಕು ಹಾಗೂ ಯೋಜನೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಕರೆ ನೀಡಿದರು.<br /> <br /> ಬಿಐಇಟಿ ನಿರ್ದೇಶಕ ಪ್ರೊ.ವೈ. ವೃಷಭೇಂದ್ರಪ್ಪ, ಪ್ರಾಂಶುಪಾಲ ಪ್ರೊ.ವಿ. ರಾಮಸ್ವಾಮಿ, ವಿಜ್ಞಾನ ವೇದಿಕೆ ಸಂಚಾಲಕ ಪ್ರೊ.ಎಂ.ಎಸ್. ದೇವೇಂದ್ರಪ್ಪ, ಪ್ರೊ.ಕೆ.ಎಸ್. ಬಸವರಾಜಪ್ಪ, ಪ್ರೊ.ಬಿ.ಇ. ಬಸವರಾಜಪ್ಪ ಮಾತನಾಡಿದರು.<br /> <br /> ವಿಜ್ಞಾನ ವೇದಿಕೆ ವತಿಯಿಂದ ನಡೆಸಿದ ರಸಪ್ರಶ್ನೆ, ಪ್ರಬಂಧ, ಚರ್ಚಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.ಬಿಐಇಟಿ ಆಡಳಿತ ಮಂಡಳಿ ಅಧ್ಯಕ್ಷ ಎ.ಸಿ. ಜಯಣ್ಣ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>