<p><strong>ನವದೆಹಲಿ (ಪಿಟಿಐ):</strong> ಕಪ್ಪುಹಣ ಮತ್ತು ಭ್ರಷ್ಟಾಚಾರ ವಿರೋಧಿಸಿ ಸಾಮಾಜಿಕ ಕಾರ್ಯಕರ್ತ, ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಹಾಗೂ ಯೋಗ ಗುರು ಬಾಬಾ ರಾಮದೇವ್ ಅವರು ಭಾನುವಾರ ಜಂತರ್ ಮಂತರ್ನಲ್ಲಿ ಜಂಟಿಯಾಗಿ ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭಿಸಿದರು.<br /> <br /> ಪ್ರತಿಭಟನೆಗೂ ಮುನ್ನ ಅಣ್ಣಾ ಹಾಗೂ ರಾಮದೇವ್ ಅವರು ರಾಜ್ಘಾಟ್ನಲ್ಲಿರುವ ಮಹಾತ್ಮಾಗಾಂಧಿ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಗೌರವ ಸಮರ್ಪಿಸಿದರು. ನಂತರ ಬೇರೆ ಬೇರೆ ಮಾರ್ಗಗಳ ಮೂಲಕ ಸಂಚರಿಸಿ ಜಂತರ್ ಮಂತರ್ನಲ್ಲಿ ಸತ್ಯಾಗ್ರಹ ನಡೆಯುವ ಸ್ಥಳಕ್ಕೆ ಬೆಳಿಗ್ಗೆ 10.10ರ ಸುಮಾರಿಗೆ ಬಂದು ತಲುಪಿದರು.<br /> <br /> ಸತ್ಯಾಗ್ರಹಕ್ಕೂ ಮುನ್ನ ಸುದ್ಧಿಗಾರರೊಂದಿಗೆ ಮಾತನಾಡಿದ ರಾಮದೇವ್ ಅವರು `ವಿದೇಶದಲ್ಲಿರುವ ಕಪ್ಪುಹಣವನ್ನು ಪುನಃ ದೇಶಕ್ಕೆ ತರಿಸಬೇಕೆಂಬ ಉದ್ದೇಶದಿಂದ ನಾವು ಈ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದು, ಇಂತಹ ಉದಾತ್ತ ಹೋರಾಟದಲ್ಲಿ ದೇಶದ ನಾಗರಿಕರೆಲ್ಲರೂ ಭಾಗವಹಿಸಬೇಕು~ ಎಂದು ಹೇಳಿದರು.<br /> <br /> ನಂತರ ಮಾತನಾಡಿದ ಅಣ್ಣಾ ಅವರು `ಭವಿಷ್ಯದಲ್ಲಿ ಭ್ರಷ್ಟಾಚಾರ ವಿರುದ್ಧ ನಡೆಯುವ ಹೋರಾಟಗಳ ಸ್ವರೂಪ ಹಾಗೂ ಕಾರ್ಯತಂತ್ರ ಕುರಿತು ನಾವು ಮಾತನಾಡುತ್ತೇವೆ~ ಎಂದರು. <br /> <br /> ಸತ್ಯಾಗ್ರಹದ ವೇಳೆ ರಾಮದೇವ್ ಅವರೊಂದಿಗೆ ಅವರ ಆಪ್ತ ಬಾಲಕೃಷ್ಣನ್ ಮತ್ತು ಅಣ್ಣಾ ಅವರೊಂದಿಗೆ ತಂಡದ ಸದಸ್ಯರಾದ ಕಿರಣ್ ಬೇಡಿ, ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಹಾಜರಿದ್ದರು. <br /> <br /> ಕಳೆದ ಒಂದು ವರ್ಷದಿಂದ ಸಾರ್ವಜನಿಕವಾಗಿ ಒಟ್ಟಾಗಿ ಕಾಣಿಸಿಕೊಳ್ಳದ ಅಣ್ಣಾ ಹಾಗೂ ರಾಮದೇವ್ ಅವರು ಶನಿವಾರವಷ್ಟೇ ಒಟ್ಟಾಗಿ ಕಾಣಿಸಿಕೊಂಡು ಸತ್ಯಾಗ್ರಹ ಮಾಹಿತಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಕಪ್ಪುಹಣ ಮತ್ತು ಭ್ರಷ್ಟಾಚಾರ ವಿರೋಧಿಸಿ ಸಾಮಾಜಿಕ ಕಾರ್ಯಕರ್ತ, ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಹಾಗೂ ಯೋಗ ಗುರು ಬಾಬಾ ರಾಮದೇವ್ ಅವರು ಭಾನುವಾರ ಜಂತರ್ ಮಂತರ್ನಲ್ಲಿ ಜಂಟಿಯಾಗಿ ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭಿಸಿದರು.<br /> <br /> ಪ್ರತಿಭಟನೆಗೂ ಮುನ್ನ ಅಣ್ಣಾ ಹಾಗೂ ರಾಮದೇವ್ ಅವರು ರಾಜ್ಘಾಟ್ನಲ್ಲಿರುವ ಮಹಾತ್ಮಾಗಾಂಧಿ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಗೌರವ ಸಮರ್ಪಿಸಿದರು. ನಂತರ ಬೇರೆ ಬೇರೆ ಮಾರ್ಗಗಳ ಮೂಲಕ ಸಂಚರಿಸಿ ಜಂತರ್ ಮಂತರ್ನಲ್ಲಿ ಸತ್ಯಾಗ್ರಹ ನಡೆಯುವ ಸ್ಥಳಕ್ಕೆ ಬೆಳಿಗ್ಗೆ 10.10ರ ಸುಮಾರಿಗೆ ಬಂದು ತಲುಪಿದರು.<br /> <br /> ಸತ್ಯಾಗ್ರಹಕ್ಕೂ ಮುನ್ನ ಸುದ್ಧಿಗಾರರೊಂದಿಗೆ ಮಾತನಾಡಿದ ರಾಮದೇವ್ ಅವರು `ವಿದೇಶದಲ್ಲಿರುವ ಕಪ್ಪುಹಣವನ್ನು ಪುನಃ ದೇಶಕ್ಕೆ ತರಿಸಬೇಕೆಂಬ ಉದ್ದೇಶದಿಂದ ನಾವು ಈ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದು, ಇಂತಹ ಉದಾತ್ತ ಹೋರಾಟದಲ್ಲಿ ದೇಶದ ನಾಗರಿಕರೆಲ್ಲರೂ ಭಾಗವಹಿಸಬೇಕು~ ಎಂದು ಹೇಳಿದರು.<br /> <br /> ನಂತರ ಮಾತನಾಡಿದ ಅಣ್ಣಾ ಅವರು `ಭವಿಷ್ಯದಲ್ಲಿ ಭ್ರಷ್ಟಾಚಾರ ವಿರುದ್ಧ ನಡೆಯುವ ಹೋರಾಟಗಳ ಸ್ವರೂಪ ಹಾಗೂ ಕಾರ್ಯತಂತ್ರ ಕುರಿತು ನಾವು ಮಾತನಾಡುತ್ತೇವೆ~ ಎಂದರು. <br /> <br /> ಸತ್ಯಾಗ್ರಹದ ವೇಳೆ ರಾಮದೇವ್ ಅವರೊಂದಿಗೆ ಅವರ ಆಪ್ತ ಬಾಲಕೃಷ್ಣನ್ ಮತ್ತು ಅಣ್ಣಾ ಅವರೊಂದಿಗೆ ತಂಡದ ಸದಸ್ಯರಾದ ಕಿರಣ್ ಬೇಡಿ, ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಹಾಜರಿದ್ದರು. <br /> <br /> ಕಳೆದ ಒಂದು ವರ್ಷದಿಂದ ಸಾರ್ವಜನಿಕವಾಗಿ ಒಟ್ಟಾಗಿ ಕಾಣಿಸಿಕೊಳ್ಳದ ಅಣ್ಣಾ ಹಾಗೂ ರಾಮದೇವ್ ಅವರು ಶನಿವಾರವಷ್ಟೇ ಒಟ್ಟಾಗಿ ಕಾಣಿಸಿಕೊಂಡು ಸತ್ಯಾಗ್ರಹ ಮಾಹಿತಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>