<p><strong>ಚೆನ್ನೈ(ಪಿಟಿಐ):</strong> ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ(19) ಹಾಸ್ಟೆಲ್ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ವೇಲುಪುರಂ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಆತ್ಮಹತ್ಯೆ ಬಳಿಕ ನಡೆದಿರುವ ಈ ಘಟನೆ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.</p>.<p>ವಿದ್ಯಾರ್ಥಿನಿಯನ್ನು ಅಣ್ಣಾ ವಿವಿಯ ಅಧೀನದ ಗಿಂಡಿ ಎಂಜಿನಿಯರಿಂಗ್ ಕಾಲೇಜಿನ ಸೆರಾಮಿಕ್ ಟೆಕ್ನಾಲಜಿ ವಿಭಾಗದ ಎರಡನೇ ವರ್ಷದ ವಿದ್ಯಾರ್ಥಿನಿ ಷಣ್ಮುಗ ಪ್ರೀತ್ ಎಂದು ಗುರುತಿಸಲಾಗಿದೆ.</p>.<p>ಭಾನುವಾರ ರಾತ್ರಿ 11ರ ಸುಮಾರಿಗೆ ಹಾಸ್ಟೆಲ್ನ ತಾರಸಿ ಮೇಲಿನಿಂದ ವಿದ್ಯಾರ್ಥಿನಿ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.</p>.<p>‘ಇಲ್ಲಿಯವರೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಇದೊಂದು ಅಪಘಾತ ಎನಿಸುತ್ತದೆ’ ಎಂದು ಕೊಟ್ಟೂರುಪುರಂ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಹೆಚ್ಚಿನ ಮಾಹಿತಿಯು ಪೂರ್ಣ ತನಿಖೆಯ ಬಳಿಕ ಲಭ್ಯವಾಗಬೇಕಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ(ಪಿಟಿಐ):</strong> ಅಣ್ಣಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ(19) ಹಾಸ್ಟೆಲ್ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ವೇಲುಪುರಂ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಆತ್ಮಹತ್ಯೆ ಬಳಿಕ ನಡೆದಿರುವ ಈ ಘಟನೆ ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.</p>.<p>ವಿದ್ಯಾರ್ಥಿನಿಯನ್ನು ಅಣ್ಣಾ ವಿವಿಯ ಅಧೀನದ ಗಿಂಡಿ ಎಂಜಿನಿಯರಿಂಗ್ ಕಾಲೇಜಿನ ಸೆರಾಮಿಕ್ ಟೆಕ್ನಾಲಜಿ ವಿಭಾಗದ ಎರಡನೇ ವರ್ಷದ ವಿದ್ಯಾರ್ಥಿನಿ ಷಣ್ಮುಗ ಪ್ರೀತ್ ಎಂದು ಗುರುತಿಸಲಾಗಿದೆ.</p>.<p>ಭಾನುವಾರ ರಾತ್ರಿ 11ರ ಸುಮಾರಿಗೆ ಹಾಸ್ಟೆಲ್ನ ತಾರಸಿ ಮೇಲಿನಿಂದ ವಿದ್ಯಾರ್ಥಿನಿ ಬಿದ್ದು ತೀವ್ರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು, ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.</p>.<p>‘ಇಲ್ಲಿಯವರೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಇದೊಂದು ಅಪಘಾತ ಎನಿಸುತ್ತದೆ’ ಎಂದು ಕೊಟ್ಟೂರುಪುರಂ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಹೆಚ್ಚಿನ ಮಾಹಿತಿಯು ಪೂರ್ಣ ತನಿಖೆಯ ಬಳಿಕ ಲಭ್ಯವಾಗಬೇಕಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>