<p>ಕೋಲಾರ: ಜನಲೋಕಪಾಲ್ ಮಸೂದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ದೆಹಲಿಯಲ್ಲಿ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರಿಗೆ ಬೆಂಬಲ ನೀಡಿ ನಗರದಲ್ಲಿ ಶುಕ್ರವಾರ ಹಲವು ಸಂಘಟನೆಗಳು ನಗರದ ಗಾಂಧಿ ವನದಲ್ಲಿ ಮೌನ ಧರಣಿ, ದೀಪದ ಮೆರವಣಿಗೆ ನಡೆಸಿದರು.<br /> <br /> ಧರಣಿ ಕುಳಿತ ವಿವಿಧ ಸಂಘಟನೆಗಳ ಮುಖಂಡರು ಭ್ರಷ್ಟಾಚಾರ ನಿರ್ಮೂಲನೆಗೆ ಅಗತ್ಯವಿರುವ ಎಲ್ಲ ಕ್ರಮವನ್ನೂ ಕೈಗೊಳ್ಳಬೇಕು. ಹಜಾರೆಯವರ ಬೇಡಿಕೆಯನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ಬದ್ಧತೆ ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು.<br /> <br /> ಏ. 12ರಂದು ಅಣ್ಣಾ ಹಜಾರೆ ಹಮ್ಮಿಕೊಂಡಿರುವ ಜೈಲ್ ಭರೋ ಚಳವಳಿಯಲ್ಲಿ ಜಿಲ್ಲೆಯ ಸಮಸ್ತ ಪ್ರಜ್ಞಾವಂತರು ಪಾಲ್ಗೊಳ್ಳಬೇಕು ಎಂದು ಕೋರಿದರು. ವಕ್ಕಲೇರಿ ರಾಜಪ್ಪ, ಸೂಲಿಕುಂಟೆ ರಮೇಶ್, ವರದೇನಹಳ್ಳಿ ವೆಂಕಟೇಶ್, ರಾಮೇಗೌಡ, ಅಬ್ಬಣಿ ನಾಗರಾಜ್, ಸಿ.ವಿ.ನಾಗರಾಜ್ ಪಾಲ್ಗೊಂಡಿದ್ದರು. <br /> <br /> ಭಾರತ ಸೇವಾದಳದ ಪದಾಧಿಕಾರಿಗಳು ಕೂಡ ಸಂಜೆ ಗಾಂಧಿವನದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಹಾರ ಹಾಕಿ ಅಣ್ಣಾ ಹಜಾರೆಯವರ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು. ಪ್ರಮುಖರಾದ ಬಿ.ಎಂ.ಮುಬಾರಕ್, ಮಂಜುನಾಥ್, ಸುಧಾಕರ್, ರವಿ, ಶ್ರೀನಿವಾಸ್, ನಟರಾಜ್, ಡಿ.ಎಂ.ವೆಂಕಟೇಶ್, ನಾಗರಾಜ್, ನಾರಾಯಣಸ್ವಾಮಿ, ಎಲ್.ಶ್ರೀನಿವಾಸ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಜನಲೋಕಪಾಲ್ ಮಸೂದೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ದೆಹಲಿಯಲ್ಲಿ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರಿಗೆ ಬೆಂಬಲ ನೀಡಿ ನಗರದಲ್ಲಿ ಶುಕ್ರವಾರ ಹಲವು ಸಂಘಟನೆಗಳು ನಗರದ ಗಾಂಧಿ ವನದಲ್ಲಿ ಮೌನ ಧರಣಿ, ದೀಪದ ಮೆರವಣಿಗೆ ನಡೆಸಿದರು.<br /> <br /> ಧರಣಿ ಕುಳಿತ ವಿವಿಧ ಸಂಘಟನೆಗಳ ಮುಖಂಡರು ಭ್ರಷ್ಟಾಚಾರ ನಿರ್ಮೂಲನೆಗೆ ಅಗತ್ಯವಿರುವ ಎಲ್ಲ ಕ್ರಮವನ್ನೂ ಕೈಗೊಳ್ಳಬೇಕು. ಹಜಾರೆಯವರ ಬೇಡಿಕೆಯನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ಬದ್ಧತೆ ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು.<br /> <br /> ಏ. 12ರಂದು ಅಣ್ಣಾ ಹಜಾರೆ ಹಮ್ಮಿಕೊಂಡಿರುವ ಜೈಲ್ ಭರೋ ಚಳವಳಿಯಲ್ಲಿ ಜಿಲ್ಲೆಯ ಸಮಸ್ತ ಪ್ರಜ್ಞಾವಂತರು ಪಾಲ್ಗೊಳ್ಳಬೇಕು ಎಂದು ಕೋರಿದರು. ವಕ್ಕಲೇರಿ ರಾಜಪ್ಪ, ಸೂಲಿಕುಂಟೆ ರಮೇಶ್, ವರದೇನಹಳ್ಳಿ ವೆಂಕಟೇಶ್, ರಾಮೇಗೌಡ, ಅಬ್ಬಣಿ ನಾಗರಾಜ್, ಸಿ.ವಿ.ನಾಗರಾಜ್ ಪಾಲ್ಗೊಂಡಿದ್ದರು. <br /> <br /> ಭಾರತ ಸೇವಾದಳದ ಪದಾಧಿಕಾರಿಗಳು ಕೂಡ ಸಂಜೆ ಗಾಂಧಿವನದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಹಾರ ಹಾಕಿ ಅಣ್ಣಾ ಹಜಾರೆಯವರ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು. ಪ್ರಮುಖರಾದ ಬಿ.ಎಂ.ಮುಬಾರಕ್, ಮಂಜುನಾಥ್, ಸುಧಾಕರ್, ರವಿ, ಶ್ರೀನಿವಾಸ್, ನಟರಾಜ್, ಡಿ.ಎಂ.ವೆಂಕಟೇಶ್, ನಾಗರಾಜ್, ನಾರಾಯಣಸ್ವಾಮಿ, ಎಲ್.ಶ್ರೀನಿವಾಸ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>