<p>ಹಿಸ್ಸಾರ್ (ಹರ್ಯಾಣ) (ಪಿಟಿಐ): ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ದ್ವನಿ ಮುದ್ರಿತ ಸಂದೇಶವುಳ್ಳ ಸಿಡಿಗಳೊಂದಿಗೆ ಸಜ್ಜಾಗಿ ಇಲ್ಲಿಗೆ ಆಗಮಿಸಿರುವ ಅವರ ತಂಡದ ಸದಸ್ಯರು ಇಲ್ಲಿ ಮುಂಬರುವ ಲೋಕಸಭಾ ಉಪ ಚುನಾವಣೆಗೆ ಮುಂಚಿತವಾಗಿಯೇ ಭ್ರಷ್ಟಾಚಾರ ವಿರೋಧಿ ಮತ್ತು ಕಾಂಗ್ರೆಸ್ ವಿರೋಧಿ ಪ್ರಚಾರವನ್ನು ಶನಿವಾರ ಆರಂಭಿಸಲಿದ್ದಾರೆ.<br /> <br /> ಅಣ್ಣಾ ತಂಡದ ಸದಸ್ಯರಾದ ಮಾಹಿತಿ ಹಕ್ಕು ಕಾಯ್ದೆ (ಆರ್ ಟಿ ಐ) ಕಾರ್ಯಕರ್ತ ಅರವಿಂದ ಕೇಜ್ರಿವಾಲ್ ಮತ್ತು ಹಜಾರೆ ಅವರ ನಿಕಟವರ್ತಿ ಮನಿಶ್ ಸಿಸೋಡಿಯ ಅವರು ಹಿಸ್ಸಾರ್ ಲೋಕಸಭಾ ಕ್ಷೇತ್ರದ ಪ್ರದೇಶಗಳಲ್ಲಿ ಸಣ್ಣ ಸಣ್ಣ ಸಭೆಗಳನ್ನು ನಡೆಸುವ ಮೂಲಕ ಅಭಿಯಾನ ಆರಂಭಿಸುವರು.<br /> <br /> ಹಿಸ್ಸಾರ್ ಲೋಕಸಭಾ ಸ್ಥಾನಕ್ಕೆ ಅಕ್ಟೋಬರ್ 13ರಂದು ಉಪಚುನಾವಣೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಭಜನ್ ಲಾಲ್ ಜೂನ್ ತಿಂಗಳಲ್ಲಿ ನಿಧನರಾದ ಪರಿಣಾಮವಾಗಿ ಈ ಸ್ಥಾನ ತೆರವಾಗಿದೆ<br /> ಕೇಜ್ರಿವಾಲ್ ಅವರು ಕಾಂಗ್ರೆಸ್ ವಿರೋಧಿ ಅಭಿಯಾನವನ್ನು ಕ್ಷೇತ್ರದ ನರ್ನೌಂದ್ ಪ್ರದೇಶದಿಂದ ಆರಂಭಿಸುವರು.<br /> <br /> ಹಿಂದಿನ ಪೊಲೀಸ್ ಅಧಿಕಾರಿ ಕಿರಣ್ ಬೇಡಿ ಮತ್ತು ವಕೀಲ ಪ್ರಶಾಂತ ಭೂಷಣ್ ಅವರು ಕೂಡಾ ಕೆಲವೇ ದಿನಗಳಲ್ಲಿ ಇಲ್ಲಿಗೆ ಭೇಟಿ ನೀಡುವ ನಿರೀಕ್ಷೆ ಇದೆ.<br /> <br /> ಹಜಾರೆ ಅವರು ಪ್ರಚಾರಕ್ಕಾಗಿ ಬರುವ ಸಾಧ್ಯತೆಗಳಿಲ್ಲ. ಆದರೆ ಅವರ ಸಂಘಟನೆಯ ಸದಸ್ಯರು ಹಜಾರೆ ಅವರು ಧ್ವನಿಮುದ್ರಿತ ಸಂದೇಶವನ್ನು ಜನರಿಗೆ ತಲುಪಿಸಿ ಕೇಳಿಸುವರು ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿಸ್ಸಾರ್ (ಹರ್ಯಾಣ) (ಪಿಟಿಐ): ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ದ್ವನಿ ಮುದ್ರಿತ ಸಂದೇಶವುಳ್ಳ ಸಿಡಿಗಳೊಂದಿಗೆ ಸಜ್ಜಾಗಿ ಇಲ್ಲಿಗೆ ಆಗಮಿಸಿರುವ ಅವರ ತಂಡದ ಸದಸ್ಯರು ಇಲ್ಲಿ ಮುಂಬರುವ ಲೋಕಸಭಾ ಉಪ ಚುನಾವಣೆಗೆ ಮುಂಚಿತವಾಗಿಯೇ ಭ್ರಷ್ಟಾಚಾರ ವಿರೋಧಿ ಮತ್ತು ಕಾಂಗ್ರೆಸ್ ವಿರೋಧಿ ಪ್ರಚಾರವನ್ನು ಶನಿವಾರ ಆರಂಭಿಸಲಿದ್ದಾರೆ.<br /> <br /> ಅಣ್ಣಾ ತಂಡದ ಸದಸ್ಯರಾದ ಮಾಹಿತಿ ಹಕ್ಕು ಕಾಯ್ದೆ (ಆರ್ ಟಿ ಐ) ಕಾರ್ಯಕರ್ತ ಅರವಿಂದ ಕೇಜ್ರಿವಾಲ್ ಮತ್ತು ಹಜಾರೆ ಅವರ ನಿಕಟವರ್ತಿ ಮನಿಶ್ ಸಿಸೋಡಿಯ ಅವರು ಹಿಸ್ಸಾರ್ ಲೋಕಸಭಾ ಕ್ಷೇತ್ರದ ಪ್ರದೇಶಗಳಲ್ಲಿ ಸಣ್ಣ ಸಣ್ಣ ಸಭೆಗಳನ್ನು ನಡೆಸುವ ಮೂಲಕ ಅಭಿಯಾನ ಆರಂಭಿಸುವರು.<br /> <br /> ಹಿಸ್ಸಾರ್ ಲೋಕಸಭಾ ಸ್ಥಾನಕ್ಕೆ ಅಕ್ಟೋಬರ್ 13ರಂದು ಉಪಚುನಾವಣೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಭಜನ್ ಲಾಲ್ ಜೂನ್ ತಿಂಗಳಲ್ಲಿ ನಿಧನರಾದ ಪರಿಣಾಮವಾಗಿ ಈ ಸ್ಥಾನ ತೆರವಾಗಿದೆ<br /> ಕೇಜ್ರಿವಾಲ್ ಅವರು ಕಾಂಗ್ರೆಸ್ ವಿರೋಧಿ ಅಭಿಯಾನವನ್ನು ಕ್ಷೇತ್ರದ ನರ್ನೌಂದ್ ಪ್ರದೇಶದಿಂದ ಆರಂಭಿಸುವರು.<br /> <br /> ಹಿಂದಿನ ಪೊಲೀಸ್ ಅಧಿಕಾರಿ ಕಿರಣ್ ಬೇಡಿ ಮತ್ತು ವಕೀಲ ಪ್ರಶಾಂತ ಭೂಷಣ್ ಅವರು ಕೂಡಾ ಕೆಲವೇ ದಿನಗಳಲ್ಲಿ ಇಲ್ಲಿಗೆ ಭೇಟಿ ನೀಡುವ ನಿರೀಕ್ಷೆ ಇದೆ.<br /> <br /> ಹಜಾರೆ ಅವರು ಪ್ರಚಾರಕ್ಕಾಗಿ ಬರುವ ಸಾಧ್ಯತೆಗಳಿಲ್ಲ. ಆದರೆ ಅವರ ಸಂಘಟನೆಯ ಸದಸ್ಯರು ಹಜಾರೆ ಅವರು ಧ್ವನಿಮುದ್ರಿತ ಸಂದೇಶವನ್ನು ಜನರಿಗೆ ತಲುಪಿಸಿ ಕೇಳಿಸುವರು ಎಂದು ಭ್ರಷ್ಟಾಚಾರ ವಿರೋಧಿ ವೇದಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>