<p>ಬಳ್ಳಾರಿ: ಸೇವಾ ಭದ್ರತೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟ ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್. ಆಚಾರ್ಯ ಅವರನ್ನು ಒತ್ತಾಯಿಸಿದೆ.<br /> <br /> ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಈ ಕುರಿತ ಮನವಿ ಸಲ್ಲಿಸಿದ ಒಕ್ಕೂಟದ ಸದಸ್ಯರು, ಕೆಲವು ವರ್ಷಗಳಿಂದ ವಿವಿಧ ಪದವಿ ಕಾಲೇಜುಗಳಲ್ಲಿ ರಾಜ್ಯ ಸರಕಾರವು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಸೇವೆಯನ್ನು ಕಾಯಂಗೊಳಿಸದ್ದರಿಂದ ತೊಂದರೆಯಾಗಿದೆ.<br /> <br /> ವರ್ಷಕ್ಕೊಮ್ಮೆ ವೇತನ ಅಥವಾ ಗೌರವಧನ ನೀಡಲಾಗುತ್ತಿದೆ. ಕಾಯಂ ಉಪನ್ಯಾಸಕರಿಗೆ ಮಾತ್ರ ತಿಂಗಳ ಆರಂಭದಲ್ಲೇ ವೇತನ ನೀಡುವ ಸರಕಾರ, ಅತಿಥಿ ಉಪನ್ಯಾಸಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದೆ. ಅತಿಥಿ ಉಪನ್ಯಾಸಕರನ್ನು ಕಡೆಗಣಿಸುತ್ತ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.<br /> <br /> ದುರುಗಪ್ಪ, ಡಾ. ಶ್ಯಾಂಮೂರ್ತಿ, ಡಾ.ಕೆ. ಬಸಪ್ಪ, ರಮೇಶ್. ಎಸ್.ಎಂ, ರಫಿ, ಶಿವಕುಮಾರ್ ಅಂಗಡಿ, ಡಿ.ಸಿದ್ಧೇಶ, ಡಿ.ರಾಧ, ಸುಧೀರಕುಮಾರ್, ಶ್ರೀವಾಣಿ, ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯ ಘಟಕದ ಉಪಾಧ್ಯಕ್ಷ ಹುಳ್ಳಿ ಉಮೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಸೇವಾ ಭದ್ರತೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟ ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್. ಆಚಾರ್ಯ ಅವರನ್ನು ಒತ್ತಾಯಿಸಿದೆ.<br /> <br /> ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಈ ಕುರಿತ ಮನವಿ ಸಲ್ಲಿಸಿದ ಒಕ್ಕೂಟದ ಸದಸ್ಯರು, ಕೆಲವು ವರ್ಷಗಳಿಂದ ವಿವಿಧ ಪದವಿ ಕಾಲೇಜುಗಳಲ್ಲಿ ರಾಜ್ಯ ಸರಕಾರವು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಸೇವೆಯನ್ನು ಕಾಯಂಗೊಳಿಸದ್ದರಿಂದ ತೊಂದರೆಯಾಗಿದೆ.<br /> <br /> ವರ್ಷಕ್ಕೊಮ್ಮೆ ವೇತನ ಅಥವಾ ಗೌರವಧನ ನೀಡಲಾಗುತ್ತಿದೆ. ಕಾಯಂ ಉಪನ್ಯಾಸಕರಿಗೆ ಮಾತ್ರ ತಿಂಗಳ ಆರಂಭದಲ್ಲೇ ವೇತನ ನೀಡುವ ಸರಕಾರ, ಅತಿಥಿ ಉಪನ್ಯಾಸಕರನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದೆ. ಅತಿಥಿ ಉಪನ್ಯಾಸಕರನ್ನು ಕಡೆಗಣಿಸುತ್ತ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಅವರು ಆರೋಪಿಸಿದರು.<br /> <br /> ದುರುಗಪ್ಪ, ಡಾ. ಶ್ಯಾಂಮೂರ್ತಿ, ಡಾ.ಕೆ. ಬಸಪ್ಪ, ರಮೇಶ್. ಎಸ್.ಎಂ, ರಫಿ, ಶಿವಕುಮಾರ್ ಅಂಗಡಿ, ಡಿ.ಸಿದ್ಧೇಶ, ಡಿ.ರಾಧ, ಸುಧೀರಕುಮಾರ್, ಶ್ರೀವಾಣಿ, ಭಾರತ ವಿದ್ಯಾರ್ಥಿ ಫೆಡರೇಷನ್ ರಾಜ್ಯ ಘಟಕದ ಉಪಾಧ್ಯಕ್ಷ ಹುಳ್ಳಿ ಉಮೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>