<p><strong>ನವದೆಹಲಿ (ಪಿಟಿಐ): </strong>ಪ್ರತಿದಿನವೂ 1600 ಮಕ್ಕಳು ಅತಿಸಾರದಿಂದ ಸಾವನ್ನಪ್ಪುತ್ತಿರುವುದು ವಿಷಾದದ ಸಂಗತಿ ಎಂದು ಯುನಿಸೆಫ್ ಪ್ರಚಾರ ರಾಯಭಾರಿಯಾಗಿರುವ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೇಳಿದರು.<br /> <br /> ಐಸಿಸಿ ಮತ್ತು ಯುನಿಸೆಫ್ ಸಹ ಭಾಗಿತ್ವದಲ್ಲಿ ಸೋಮವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> ‘ಮಕ್ಕಳು ಶುಚಿತ್ವ ಕಾಪಾಡಿಕೊಳ್ಳ ಬೇಕು. ತಾಯಂದಿರು ಮಕ್ಕಳಲ್ಲಿ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ತಿಳಿವಳಿಕೆ ಮೂಡಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಕುಟುಂಬದಲ್ಲಿಯೂ ಅಮ್ಮಂದಿರ ಪಾತ್ರ ಮಹತ್ವದ್ದು’ ಎಂದರು.<br /> <br /> ‘ಬಯಲು ಶೌಚಾಲಯಕ್ಕೆ ತಡೆ, ಪ್ರತಿಯೊಂದು ಹಳ್ಳಿಗಳು, ಮನೆಗಳಲ್ಲಿ ನೈರ್ಮಲ್ಯದ ವಾತಾವರಣ ನಿರ್ಮಿಸುವುದರಿಂದ ಅತಿಸಾರದಂತಹ ಕಾಯಿಲೆಗಳಿಂದ ಮಕ್ಕಳನ್ನು ರಕ್ಷಿಸಲು ಸಾಧ್ಯವಿದೆ. ಇದಕ್ಕಾಗಿ ಸರ್ಕಾರ, ಸಾರ್ವಜನಿಕರು, ವಿವಿಧ ಕ್ಷೇತ್ರಗಳ ಗಣ್ಯರು ಒಂದಾಗಿ ಶ್ರಮಿಸಬೇಕು’ ಎಂದು ಸಚಿನ್ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಪ್ರತಿದಿನವೂ 1600 ಮಕ್ಕಳು ಅತಿಸಾರದಿಂದ ಸಾವನ್ನಪ್ಪುತ್ತಿರುವುದು ವಿಷಾದದ ಸಂಗತಿ ಎಂದು ಯುನಿಸೆಫ್ ಪ್ರಚಾರ ರಾಯಭಾರಿಯಾಗಿರುವ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೇಳಿದರು.<br /> <br /> ಐಸಿಸಿ ಮತ್ತು ಯುನಿಸೆಫ್ ಸಹ ಭಾಗಿತ್ವದಲ್ಲಿ ಸೋಮವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> ‘ಮಕ್ಕಳು ಶುಚಿತ್ವ ಕಾಪಾಡಿಕೊಳ್ಳ ಬೇಕು. ತಾಯಂದಿರು ಮಕ್ಕಳಲ್ಲಿ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ತಿಳಿವಳಿಕೆ ಮೂಡಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಕುಟುಂಬದಲ್ಲಿಯೂ ಅಮ್ಮಂದಿರ ಪಾತ್ರ ಮಹತ್ವದ್ದು’ ಎಂದರು.<br /> <br /> ‘ಬಯಲು ಶೌಚಾಲಯಕ್ಕೆ ತಡೆ, ಪ್ರತಿಯೊಂದು ಹಳ್ಳಿಗಳು, ಮನೆಗಳಲ್ಲಿ ನೈರ್ಮಲ್ಯದ ವಾತಾವರಣ ನಿರ್ಮಿಸುವುದರಿಂದ ಅತಿಸಾರದಂತಹ ಕಾಯಿಲೆಗಳಿಂದ ಮಕ್ಕಳನ್ನು ರಕ್ಷಿಸಲು ಸಾಧ್ಯವಿದೆ. ಇದಕ್ಕಾಗಿ ಸರ್ಕಾರ, ಸಾರ್ವಜನಿಕರು, ವಿವಿಧ ಕ್ಷೇತ್ರಗಳ ಗಣ್ಯರು ಒಂದಾಗಿ ಶ್ರಮಿಸಬೇಕು’ ಎಂದು ಸಚಿನ್ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>