<p>ಭುವನೇಶ್ವರ (ಐಎಎನ್ಎಸ್): ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ರಕ್ಷಣೆ ಒದಗಿಸುತ್ತಿದ್ದಾರೆ ಎಂಬುದಾಗಿ ವಿರೋಧ ಪಕ್ಷಗಳ ಆರೋಪಕ್ಕೆ ಗುರಿಯಾದ ಒಡಿಶಾ ಸರ್ಕಾರದ ಕೃಷಿ ಸಚಿವ ಪ್ರದೀಪ ಮಹಾರಥಿ ಅವರು ಗುರುವಾರ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.<br /> <br /> ~ನೈತಿಕ ನೆಲೆಯಲ್ಲಿ ನಾನು ರಾಜೀನಾಮೆ ಸಲ್ಲಿಸಿದ್ದೇನೆ~ ಎಂದು ಮಹಾರಥಿ ಅವರು ರಾಜೀನಾಮೆ ಪತ್ರ ಸಲ್ಲಿಕೆಯ ಬಳಿಕ ಐಎಎನ್ ಎಸ್ ಗೆ ತಿಳಿಸಿದರು.<br /> <br /> ಕಳೆದ ವರ್ಷ ನವೆಂಬರ್ 28ರಂದು ರಾಜ್ಯದ ರಾಜಧಾನಿ ಭುವನೇಶ್ವರದಿಂದ 10 ಕಿ.ಮೀ. ದೂರದ ಅರ್ಜುನಗೊಡ ಗ್ರಾಮದಲ್ಲಿ ಕೆಲವು ವ್ಯಕ್ತಿಗಳು 19ರ ಹರೆಯದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪವಿತ್ತು. ಈ ಅಪರಾಧ ನಡೆದ ಸ್ಥಳವು ಮಹಾರಥಿ ಅವರು ಪ್ರತಿನಿಧಿಸುವ ಪಿಪಿಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ.<br /> <br /> ವಿರೋಧ ಪಕ್ಷಗಳು ನಮ್ಮ ಸರ್ಕಾರದ ಮತ್ತು ಮುಖ್ಯಮಂತ್ರಿಯ ವರ್ಚಸ್ಸಿಗೆ ಮಸಿ ಬಳಿಯಲು ಯತ್ನಿಸುತ್ತಿವೆ. ಮುಖ್ಯಮಂತ್ರಿ ಮತ್ತು ಸರ್ಕಾರದ ವರ್ಚಸ್ಸು ರಕ್ಷಣೆಗಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಮಹಾರಥಿ ಹೇಳಿದರು.<br /> <br /> ಅತ್ಯಾಚಾರಕ್ಕೆ ಒಳಗಾದ ಮಹಿಳೆಯನ್ನು ಇಲ್ಲಿಗೆ 26 ಕಿ.ಮೀ. ದೂರದ ಕಟಕ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ.<br /> <br /> ಲೈಂಗಿಕ ಪೀಡನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾರ ವಿರುದ್ಧ ಈ ಮಹಿಳೆ ದಿಟ್ಟ ಹೋರಾಟ ನಡೆಸಿದ್ದರೋ ಅದೇ ವ್ಯಕ್ತಿಗಳಿಂದ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುದಾಗಿ ಈ ಮಹಿಳೆಯ ಕುಟುಂಬ ಸದಸ್ಯರು ಆಪಾದಿಸಿದ್ದಾರೆ.<br /> <br /> ದುಷ್ಕೃತ್ಯಕ್ಕೆ ಒಳಗಾದ ಮಹಿಳೆಗೆ ಇತ್ತೀಚೆಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗೆ ನಿರಾಕರಿಸಿದಾಗ ವಿಷಯ ಬೆಳಕಿಗೆ ಬಂದಿತ್ತು. ಕೆಲವು ಪತ್ರಕರ್ತರು ಆಕೆಯ ಕುಟುಂಬ ಸದಸ್ಯರನ್ನು ಸಂದರ್ಶಿಸಿ ಘಟನೆಯ ಬಗ್ಗೆ ವರದಿ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭುವನೇಶ್ವರ (ಐಎಎನ್ಎಸ್): ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ರಕ್ಷಣೆ ಒದಗಿಸುತ್ತಿದ್ದಾರೆ ಎಂಬುದಾಗಿ ವಿರೋಧ ಪಕ್ಷಗಳ ಆರೋಪಕ್ಕೆ ಗುರಿಯಾದ ಒಡಿಶಾ ಸರ್ಕಾರದ ಕೃಷಿ ಸಚಿವ ಪ್ರದೀಪ ಮಹಾರಥಿ ಅವರು ಗುರುವಾರ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.<br /> <br /> ~ನೈತಿಕ ನೆಲೆಯಲ್ಲಿ ನಾನು ರಾಜೀನಾಮೆ ಸಲ್ಲಿಸಿದ್ದೇನೆ~ ಎಂದು ಮಹಾರಥಿ ಅವರು ರಾಜೀನಾಮೆ ಪತ್ರ ಸಲ್ಲಿಕೆಯ ಬಳಿಕ ಐಎಎನ್ ಎಸ್ ಗೆ ತಿಳಿಸಿದರು.<br /> <br /> ಕಳೆದ ವರ್ಷ ನವೆಂಬರ್ 28ರಂದು ರಾಜ್ಯದ ರಾಜಧಾನಿ ಭುವನೇಶ್ವರದಿಂದ 10 ಕಿ.ಮೀ. ದೂರದ ಅರ್ಜುನಗೊಡ ಗ್ರಾಮದಲ್ಲಿ ಕೆಲವು ವ್ಯಕ್ತಿಗಳು 19ರ ಹರೆಯದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪವಿತ್ತು. ಈ ಅಪರಾಧ ನಡೆದ ಸ್ಥಳವು ಮಹಾರಥಿ ಅವರು ಪ್ರತಿನಿಧಿಸುವ ಪಿಪಿಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ.<br /> <br /> ವಿರೋಧ ಪಕ್ಷಗಳು ನಮ್ಮ ಸರ್ಕಾರದ ಮತ್ತು ಮುಖ್ಯಮಂತ್ರಿಯ ವರ್ಚಸ್ಸಿಗೆ ಮಸಿ ಬಳಿಯಲು ಯತ್ನಿಸುತ್ತಿವೆ. ಮುಖ್ಯಮಂತ್ರಿ ಮತ್ತು ಸರ್ಕಾರದ ವರ್ಚಸ್ಸು ರಕ್ಷಣೆಗಾಗಿ ನಾನು ರಾಜೀನಾಮೆ ನೀಡಿದ್ದೇನೆ ಎಂದು ಮಹಾರಥಿ ಹೇಳಿದರು.<br /> <br /> ಅತ್ಯಾಚಾರಕ್ಕೆ ಒಳಗಾದ ಮಹಿಳೆಯನ್ನು ಇಲ್ಲಿಗೆ 26 ಕಿ.ಮೀ. ದೂರದ ಕಟಕ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ.<br /> <br /> ಲೈಂಗಿಕ ಪೀಡನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾರ ವಿರುದ್ಧ ಈ ಮಹಿಳೆ ದಿಟ್ಟ ಹೋರಾಟ ನಡೆಸಿದ್ದರೋ ಅದೇ ವ್ಯಕ್ತಿಗಳಿಂದ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬುದಾಗಿ ಈ ಮಹಿಳೆಯ ಕುಟುಂಬ ಸದಸ್ಯರು ಆಪಾದಿಸಿದ್ದಾರೆ.<br /> <br /> ದುಷ್ಕೃತ್ಯಕ್ಕೆ ಒಳಗಾದ ಮಹಿಳೆಗೆ ಇತ್ತೀಚೆಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗೆ ನಿರಾಕರಿಸಿದಾಗ ವಿಷಯ ಬೆಳಕಿಗೆ ಬಂದಿತ್ತು. ಕೆಲವು ಪತ್ರಕರ್ತರು ಆಕೆಯ ಕುಟುಂಬ ಸದಸ್ಯರನ್ನು ಸಂದರ್ಶಿಸಿ ಘಟನೆಯ ಬಗ್ಗೆ ವರದಿ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>