<p><strong>ಶಿವಮೊಗ್ಗ:</strong> ‘ಭದ್ರಾವತಿಯಲ್ಲಿ ದಲಿತ ಬಾಲಕಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಗುರುವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಭದ್ರಾವತಿಯಲ್ಲಿ ವಕೀಲರಾಗಿರುವ ನಂಜಪ್ಪ ಅವರ ಮನೆಯಲ್ಲಿ ಚಿಕ್ಕಂದಿನಿಂದಲೂ ಕೆಲಸ ಮಾಡಿಕೊಂಡಿದ್ದ ಬಾಲಕಿ 9ನೇ ತರಗತಿ ಓದುತ್ತಿದ್ದು, ಆಕೆಯ ಮೇಲೆ ನಂಜಪ್ಪ ಅವರ ಪುತ್ರ ಕಾರ್ತಿಕ್ ಒಂದೂವರೆ ವರ್ಷದಿಂದ ದೌರ್ಜನ್ಯ ನಡೆಸಿದ್ದಾನೆ ಎಂದು ಸಮಿತಿ ಪದಾಧಿಕಾರಿಗಳು ಆರೋಪಿಸಿದರು.<br /> <br /> ಸಂತ್ರಸ್ಥ ಬಾಲಕಿಗೆ ` 5 ಲಕ್ಷ ಪರಿಹಾರ ಹಾಗೂ ಅತ್ಯಾಚಾರ ನಡೆಸಿದವನಿಗೆ ಮತ್ತು ಗರ್ಭಪಾತ ಮಾಡಿಸಿರುವ ಅಪರಾಧಿಗಳಿಗೆ, ಸಹಕರಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ದಸಂಸ ಜಿಲ್ಲಾ ಸಂಚಾಲಕ ಚಿನ್ನಯ್ಯ, ಪದಾಧಿಕಾರಿಗಳಾದ ಕೆ.ಎ.ರಾಜ್ಕುಮಾರ್, ಎಂ.ಪಳನಿರಾಜ್, ಎಂ.ರಂಗಪ್ಪ, ಪ್ರಕಾಶ ಲಿಗಾಡಿ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಭದ್ರಾವತಿಯಲ್ಲಿ ದಲಿತ ಬಾಲಕಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಮುಚ್ಚಿಹಾಕುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಗುರುವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.<br /> <br /> ಭದ್ರಾವತಿಯಲ್ಲಿ ವಕೀಲರಾಗಿರುವ ನಂಜಪ್ಪ ಅವರ ಮನೆಯಲ್ಲಿ ಚಿಕ್ಕಂದಿನಿಂದಲೂ ಕೆಲಸ ಮಾಡಿಕೊಂಡಿದ್ದ ಬಾಲಕಿ 9ನೇ ತರಗತಿ ಓದುತ್ತಿದ್ದು, ಆಕೆಯ ಮೇಲೆ ನಂಜಪ್ಪ ಅವರ ಪುತ್ರ ಕಾರ್ತಿಕ್ ಒಂದೂವರೆ ವರ್ಷದಿಂದ ದೌರ್ಜನ್ಯ ನಡೆಸಿದ್ದಾನೆ ಎಂದು ಸಮಿತಿ ಪದಾಧಿಕಾರಿಗಳು ಆರೋಪಿಸಿದರು.<br /> <br /> ಸಂತ್ರಸ್ಥ ಬಾಲಕಿಗೆ ` 5 ಲಕ್ಷ ಪರಿಹಾರ ಹಾಗೂ ಅತ್ಯಾಚಾರ ನಡೆಸಿದವನಿಗೆ ಮತ್ತು ಗರ್ಭಪಾತ ಮಾಡಿಸಿರುವ ಅಪರಾಧಿಗಳಿಗೆ, ಸಹಕರಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ದಸಂಸ ಜಿಲ್ಲಾ ಸಂಚಾಲಕ ಚಿನ್ನಯ್ಯ, ಪದಾಧಿಕಾರಿಗಳಾದ ಕೆ.ಎ.ರಾಜ್ಕುಮಾರ್, ಎಂ.ಪಳನಿರಾಜ್, ಎಂ.ರಂಗಪ್ಪ, ಪ್ರಕಾಶ ಲಿಗಾಡಿ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>