<p>ಮಂಡ್ಯ: ಡ್ರಾಪ್ ನೀಡುವ ನೆಪದಲ್ಲಿ ಯುವತಿಯನ್ನು ತನ್ನ ರೂಮಿಗೆ ಕರೆದೊಯ್ದ ಯುವ ವಕೀಲನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.<br /> <br /> ವಕೀಲನು ತಡರಾತ್ರಿ ಯುವತಿಯನ್ನು ರೂಮಿನಿಂದ ಹೊರಗೆ ಕಳುಹಿಸಿದಾಗ ಘಟನೆಯು ಪೊಲೀಸರ ಗಮನಕ್ಕೆ ಬಂದಿದ್ದು, ಮಾಹಿತಿ ಅರಿತ ಪೊಲೀಸರು ಆತನನ್ನು ಬಂಧಿಸಿದ್ದು, ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದಾರೆ.<br /> <br /> ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ವಕೀಲ ಸುರೇಶ್ ಅತ್ಯಾಚಾರ ಆರೋಪದ ಮೇಲೆ ಸಿಕ್ಕಿಬಿದ್ದಿರುವ ವಕೀಲನಾಗಿದ್ದು, ಪ್ರಸ್ತುತ ಕಲ್ಲಹಳ್ಳಿ ವಿ.ವಿ.ನಗರದ ಮನೆಯೊಂದರಲ್ಲಿ ಬಾಡಿಗೆಗೆ ರೂಂ ಹಿಡಿದು ವಾಸವಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಅತ್ಯಾಚಾರಕ್ಕೆ ಒಳಗಾಗಿದ್ದಾಳೆ ಎನ್ನಲಾದ ಯುವತಿಗೆ ಸ್ವಲ್ಪ ತಿಳಿವಳಿಕೆ ಕಡಿಮೆ ಇದ್ದು, ಕಳೆದ ರಾತ್ರಿ ಬಸ್ಸ್ಟಾಂಡ್ಗೆ ಹೋಗಲು ಬನ್ನೂರು ರಸ್ತೆಯಲ್ಲಿರುವ ಬಸ್ ನಿಲುಗಡೆ ಸ್ಥಳದಲ್ಲಿ ಕಾಯುತ್ತಿದ್ದಳು. ಆಗ ಡ್ರಾಪ್ ನೀಡುವ ನೆಪದಲ್ಲಿ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪೋಷಕರಿಂದ ಮಾಹಿತಿ ಪಡೆದ ಬಳಿಕವೇ, ಆಕೆ ಮಂಡ್ಯಕ್ಕೆ ಬಂದ ಕಾರಣ ತಿಳಿಯಲು ಸಾಧ್ಯ ಎಂದು ತಿಳಿಸಿದ್ದಾರೆ.<br /> <br /> ವಕೀಲ ಸುರೇಶ್ ಈಗ ಪೊಲೀಸರ ಬಂಧನದಲ್ಲಿದ್ದು, ಪ್ರಕರಣ ದಾಖಲಿಸಿರುವ ಪಶ್ಚಿಮ ಠಾಣೆಯ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಡ್ರಾಪ್ ನೀಡುವ ನೆಪದಲ್ಲಿ ಯುವತಿಯನ್ನು ತನ್ನ ರೂಮಿಗೆ ಕರೆದೊಯ್ದ ಯುವ ವಕೀಲನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.<br /> <br /> ವಕೀಲನು ತಡರಾತ್ರಿ ಯುವತಿಯನ್ನು ರೂಮಿನಿಂದ ಹೊರಗೆ ಕಳುಹಿಸಿದಾಗ ಘಟನೆಯು ಪೊಲೀಸರ ಗಮನಕ್ಕೆ ಬಂದಿದ್ದು, ಮಾಹಿತಿ ಅರಿತ ಪೊಲೀಸರು ಆತನನ್ನು ಬಂಧಿಸಿದ್ದು, ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದಾರೆ.<br /> <br /> ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ವಕೀಲ ಸುರೇಶ್ ಅತ್ಯಾಚಾರ ಆರೋಪದ ಮೇಲೆ ಸಿಕ್ಕಿಬಿದ್ದಿರುವ ವಕೀಲನಾಗಿದ್ದು, ಪ್ರಸ್ತುತ ಕಲ್ಲಹಳ್ಳಿ ವಿ.ವಿ.ನಗರದ ಮನೆಯೊಂದರಲ್ಲಿ ಬಾಡಿಗೆಗೆ ರೂಂ ಹಿಡಿದು ವಾಸವಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಅತ್ಯಾಚಾರಕ್ಕೆ ಒಳಗಾಗಿದ್ದಾಳೆ ಎನ್ನಲಾದ ಯುವತಿಗೆ ಸ್ವಲ್ಪ ತಿಳಿವಳಿಕೆ ಕಡಿಮೆ ಇದ್ದು, ಕಳೆದ ರಾತ್ರಿ ಬಸ್ಸ್ಟಾಂಡ್ಗೆ ಹೋಗಲು ಬನ್ನೂರು ರಸ್ತೆಯಲ್ಲಿರುವ ಬಸ್ ನಿಲುಗಡೆ ಸ್ಥಳದಲ್ಲಿ ಕಾಯುತ್ತಿದ್ದಳು. ಆಗ ಡ್ರಾಪ್ ನೀಡುವ ನೆಪದಲ್ಲಿ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪೋಷಕರಿಂದ ಮಾಹಿತಿ ಪಡೆದ ಬಳಿಕವೇ, ಆಕೆ ಮಂಡ್ಯಕ್ಕೆ ಬಂದ ಕಾರಣ ತಿಳಿಯಲು ಸಾಧ್ಯ ಎಂದು ತಿಳಿಸಿದ್ದಾರೆ.<br /> <br /> ವಕೀಲ ಸುರೇಶ್ ಈಗ ಪೊಲೀಸರ ಬಂಧನದಲ್ಲಿದ್ದು, ಪ್ರಕರಣ ದಾಖಲಿಸಿರುವ ಪಶ್ಚಿಮ ಠಾಣೆಯ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>